Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:12 - ಪರಿಶುದ್ದ ಬೈಬಲ್‌

12 ನಮ್ಮ ದೇವರೇ, ನೀನೇ ಅವರನ್ನು ಶಿಕ್ಷಿಸು. ನಮಗೆ ವಿರುದ್ಧವಾಗಿ ಬರುತ್ತಿರುವ ಅವರ ದೊಡ್ಡಸೈನ್ಯವನ್ನು ಎದುರಿಸಲು ನಮ್ಮಿಂದಾಗದು. ಏನು ಮಾಡಬೇಕೋ ನಮಗೆ ತಿಳಿಯುತ್ತಿಲ್ಲ. ನಾವು ನಿನ್ನ ಸಹಾಯವನ್ನೇ ಎದುರುನೋಡುತ್ತಿದ್ದೇವೆ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿರೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂದೂ ತಿಳಿಯದು; ನಮ್ಮ ಕಣ್ಣುಗಳು ನಿಮ್ಮನ್ನೇ ನೋಡುತ್ತಿವೆ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಮ್ಮ ದೇವರೇ, ನೀವು ಅವರಿಗೆ ನ್ಯಾಯತೀರಿಸುವುದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾ ಗುಂಪನ್ನು ಎದುರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯದು. ಆದರೆ ನಮ್ಮ ಕಣ್ಣುಗಳು ನಿಮ್ಮ ಮೇಲೆ ಇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:12
24 ತಿಳಿವುಗಳ ಹೋಲಿಕೆ  

ನನ್ನ ಕಣ್ಣುಗಳು ಸಹಾಯಕ್ಕಾಗಿ ಯೆಹೋವನನ್ನೇ ದೃಷ್ಟಿಸುತ್ತಿವೆ. ಆತನು ನನ್ನನ್ನು ತೊಂದರೆಗಳಿಂದ ಖಂಡಿತವಾಗಿ ಬಿಡುಸುವನು.


ನನ್ನ ಒಡೆಯನಾದ ಯೆಹೋವನೇ, ಸಹಾಯಕ್ಕಾಗಿ ನಿನ್ನನ್ನೇ ಎದುರುನೋಡುವೆನು. ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. ದಯವಿಟ್ಟು ನನ್ನನ್ನು ಮರಣಕ್ಕೀಡು ಮಾಡಬೇಡ.


“ಯೆಹೋವನು ತನ್ನ ಜನರಿಗೆ ನ್ಯಾಯತೀರಿಸುವನು. ಅವರು ಆತನ ಸೇವಕರಾಗಿದ್ದಾರೆ. ಆತನು ಅವರಿಗೆ ಕರುಣೆ ತೋರುವನು. ಅವರ ಬಲವು ಕುಂದುವಂತೆ ಮಾಡುವನು. ಗುಲಾಮರಾಗಿರಲಿ ಸ್ವತಂತ್ರರಾಗಿರಲಿ ಅವರನ್ನು ಆತನು ನಿಸ್ಸಹಾಯಕರನ್ನಾಗಿ ಮಾಡುವನು.


ಯೆಹೋವನೇ, ಎದ್ದೇಳು! ಜನಾಂಗಗಳಿಗೆ ನ್ಯಾಯತೀರಿಸು. ಅವರು ಬಲಿಷ್ಠರಾಗಕೂಡದು.


ದೇವರೇ, ನನ್ನನ್ನು ನಿರಪರಾಧಿಯೆಂದು ತೀರ್ಪು ನೀಡು. ವ್ಯಾಜ್ಯದಲ್ಲಿ ನನ್ನ ಪರವಾಗಿಯೂ ಅನ್ಯ ಜನಾಂಗಗಳಿಗೆ ವಿರೋಧವಾಗಿಯೂ ವಾದಿಸು. ಸುಳ್ಳುಗಾರರಿಂದಲೂ ಕೆಡುಕರಿಂದಲೂ ನನ್ನನ್ನು ರಕ್ಷಿಸು.


ಆಗ ನಾನು, ‘ನಾನು ನಿನ್ನ ಕಣ್ಣೆದುರಿನಿಂದ ಹೊರದೂಡಲ್ಪಟ್ಟಿದ್ದೇನೆ’ ಅಂದುಕೊಂಡೆನು. ಆದರೂ ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ನೋಡುವೆನು.


ಆ ಸ್ತ್ರೀಯು, “ಅವರು ನನಗೆ ತೊಂದರೆ ಕೊಡದಂತೆ ನೀನು ನೋಡಿಕೊಳ್ಳುವುದಾಗಿ ನಿನ್ನ ದೇವರಾದ ಯೆಹೋವನ ಮೇಲೆ ದಯವಿಟ್ಟು ಪ್ರಮಾಣ ಮಾಡು. ಆಗ ಕೊಲೆಗಾರರನ್ನು ದಂಡಿಸಲು ಇಚ್ಛಿಸುವ ಈ ಜನರು, ನನ್ನ ಮಗನನ್ನು ದಂಡಿಸುವುದಿಲ್ಲ” ಎಂದು ಹೇಳಿದಳು. ದಾವೀದನು, “ಯೆಹೋವನಾಣೆ, ನಿನ್ನ ಮಗನನ್ನು ಯಾವ ವ್ಯಕ್ತಿಯೂ ತೊಂದರೆಗೊಳಿಸುವುದಿಲ್ಲ. ನಿನ್ನ ಮಗನ ತಲೆಯ ಮೇಲಿನ ಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ” ಎಂದನು.


ಏಲಿಯ ಕುಟುಂಬವನ್ನು ನಿತ್ಯದಂಡನೆಗೆ ಗುರಿಪಡಿಸುತ್ತೇನೆಂದು ನಾನು ಏಲಿಗೆ ಹೇಳಿರುವೆನು. ಏಲಿಯ ಮಕ್ಕಳು ನನಗೆ ವಿರೋಧವಾಗಿ ಮಾತಾಡಿದ್ದರಿಂದ ಮತ್ತು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನಾನು ಇದನ್ನು ಮಾಡುತ್ತೇನೆ. ಅಲ್ಲದೆ ಅವರನ್ನು ಹತೋಟಿಯಲ್ಲಿಡಲು ಏಲಿಗೆ ಸಾಧ್ಯವಾಗಲಿಲ್ಲ.


ಇಸ್ರೇಲರು ನಿಮ್ಮ ವಿರುದ್ಧ ಯಾವ ಪಾಪವನ್ನೂ ಮಾಡಿಲ್ಲ. ಆದರೆ ನೀನು ಇಸ್ರೇಲರ ವಿರುದ್ಧ ಬಹಳ ಕೆಟ್ಟದ್ದನ್ನು ಮಾಡುತ್ತಿರುವೆ. ನ್ಯಾಯವು ಇಸ್ರೇಲರ ಪರವಾಗಿದೆಯೋ ಅಥವಾ ಅಮ್ಮೋನಿಯರ ಪರವಾಗಿದೆಯೋ ಎಂಬುದನ್ನು ನಿಜವಾದ ನ್ಯಾಯಾಧೀಶನಾದ ಯೆಹೋವನೇ ತೀರ್ಮಾನಿಸಬೇಕು.”


ನಂತರ ಪರಲೋಕವು ತೆರೆದಿರುವುದನ್ನು ನಾನು ನೋಡಿದೆನು. ನನ್ನ ಎದುರಿನಲ್ಲಿ ಒಂದು ಬಿಳಿ ಕುದುರೆಯಿತ್ತು. ಕುದುರೆಯ ಮೇಲೆ ಕುಳಿತಿದ್ದ ಸವಾರನ ಹೆಸರು ನಂಬಿಗಸ್ತ ಮತ್ತು ಸತ್ಯವಂತ. ಆತನು ತನ್ನ ತೀರ್ಪುಗಳಲ್ಲಿಯೂ ಯುದ್ಧಗಳಲ್ಲಿಯೂ ನ್ಯಾಯವಂತನಾಗಿದ್ದನು.


ಜನರಿಗೆ ನ್ಯಾಯತೀರಿಸು. ಯೆಹೋವನೇ, ನನಗೆ ನ್ಯಾಯತೀರಿಸು. ನನ್ನನ್ನು ನೀತಿವಂತನೆಂದೂ ನಿರಪರಾಧಿಯೆಂದೂ ನಿರೂಪಿಸು.


ಜನಾಂಗಗಳೇ, ಎಚ್ಚರಗೊಳ್ಳಿರಿ! ಯೆಹೋಷಾಫಾಟ್ ತಗ್ಗಿಗೆ ಬನ್ನಿರಿ. ಸುತ್ತಲಿರುವ ಜನಾಂಗಗಳಿಗೆ ತೀರ್ಪುಕೊಡಲು ನಾನು ಅಲ್ಲಿ ಕುಳಿತುಕೊಳ್ಳುವೆನು.


ಎಲೀಷನ ಸೇವಕನು ಹೊತ್ತಾರೆ ನಸುಕಿನಲ್ಲಿಯೇ ಮೇಲಕ್ಕೆದ್ದನು. ಸೇವಕನು ಹೊರಕ್ಕೆ ಹೋದಾಗ ರಥಗಳಿಂದ ಮತ್ತು ಕುದುರೆಗಳಿಂದ ಕೂಡಿದ ಸೈನ್ಯವು ನಗರವನ್ನು ಸುತ್ತುವರಿದಿರುವುದನ್ನು ನೋಡಿದನು! ಆ ಸೇವಕನು ಎಲೀಷನಿಗೆ, “ಅಯ್ಯೋ, ನನ್ನ ಒಡೆಯನೇ, ನಾವು ಈಗ ಏನು ಮಾಡೋಣ?” ಎಂದು ಕೇಳಿದನು.


ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಆತನು ಬಲಹೀನನಾಗುವದಿಲ್ಲ; ಮುಗ್ಗರಿಸುವುದೂ ಇಲ್ಲ. ದೂರದೇಶದಲ್ಲಿರುವವರು ಸಹ ಆತನ ಬೋಧನೆಯನ್ನು ನಂಬುವರು.”


ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.


ಯೆಹೋವನೇ, ಎದ್ದೇಳು, ನಿನ್ನ ಕೋಪವನ್ನು ತೋರು! ನನ್ನ ವೈರಿಯು ಕೋಪಗೊಂಡಿದ್ದಾನೆ. ಅವನಿಗೆ ವಿರೋಧವಾಗಿ ಎದ್ದುನಿಂತು ಹೋರಾಡು. ನನ್ನ ದೇವರೇ, ಎದ್ದೇಳು, ನ್ಯಾಯಕ್ಕಾಗಿ ಒತ್ತಾಯಿಸು!


ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.


ಯೆಹೂದದ ಎಲ್ಲಾ ಜನರು ತಮ್ಮ ಹೆಂಡತಿಮಕ್ಕಳೊಂದಿಗೆ ಯೆಹೋವನೆದುರು ನಿಂತಿದ್ದರು.


ದೂರದೇಶದಲ್ಲಿರುವ ಜನರೇ, ನೀವು ಸುಳ್ಳುದೇವರನ್ನು ಅವಲಂಬಿಸುವದನ್ನು ನಿಲ್ಲಿಸಿರಿ. ನನ್ನನ್ನು ಹಿಂಬಾಲಿಸಿ ರಕ್ಷಣೆ ಹೊಂದಿರಿ. ನಾನೇ ದೇವರು, ಬೇರೆ ದೇವರುಗಳೇ ಇಲ್ಲ. ನಾನೊಬ್ಬನೇ ದೇವರು.


ನನ್ನ ಒಡೆಯನಾದ ರಾಜನೇ, ನಿನ್ನ ನಂತರ ಯಾರು ರಾಜನಾಗಬೇಕೆಂಬ ನಿನ್ನ ತೀರ್ಮಾನಕ್ಕಾಗಿ ಇಸ್ರೇಲರೆಲ್ಲರೂ ಕಾಯುತ್ತಿದ್ದಾರೆ.


ಇಡೀಲೋಕದ ನ್ಯಾಯಾಧಿಪತಿ ನೀನೇ. ಅಹಂಕಾರಿಗಳಿಗೆ ತಕ್ಕ ದಂಡನೆಯನ್ನು ಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು