Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:3 - ಪರಿಶುದ್ದ ಬೈಬಲ್‌

3 ಯೆಹೋಷಾಫಾಟನು ಭಯಭೀತನಾಗಿ ಯೆಹೋವನನ್ನು ವಿಚಾರಿಸಲು ನಿರ್ಧರಿಸಿದನು. ಯೆಹೂದದ ಎಲ್ಲಾ ಜನರು ಉಪವಾಸ ಮಾಡಬೇಕೆಂದು ಆಜ್ಞೆ ಹೊರಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೆಹೋಷಾಫಾಟನು ಇದನ್ನು ಕೇಳಿ ಭಯಪಟ್ಟು, ಸರ್ವೇಶ್ವರನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋಷಾಫಾಟನು ಹೆದರಿ ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡು ಯೆಹೂದ್ಯರೆಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದನ್ನು ಕೇಳಿ ಯೆಹೋಷಾಫಾಟನು ಭಯಪಟ್ಟು ಯೆಹೋವ ದೇವರನ್ನು ಹುಡುಕಲು ನಿರ್ಣಯಿಸಿಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸ ಮಾಡಬೇಕೆಂದು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:3
20 ತಿಳಿವುಗಳ ಹೋಲಿಕೆ  

ಆಗ ನಾನು ದೇವರಾದ ನನ್ನ ಯೆಹೋವನನ್ನು ಪ್ರಾರ್ಥಿಸಿದೆ ಮತ್ತು ಆತನ ಸಹಾಯವನ್ನು ಕೋರಿದೆ. ನಾನು ಯಾವ ಆಹಾರವನ್ನೂ ಸ್ವೀಕರಿಸಲಿಲ್ಲ ಮತ್ತು ದುಃಖಸೂಚಕವಾದ ವಸ್ತ್ರಗಳನ್ನು ಧರಿಸಿಕೊಂಡೆ. ನನ್ನ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡೆ.


ಆದರೆ ನಿನ್ನಲ್ಲಿ ಕೆಲವಾರು ಒಳ್ಳೆಯ ವಿಷಯಗಳಿವೆ. ನೀನು ಈ ದೇಶದೊಳಗಿದ್ದ ಅಶೇರಕಂಬಗಳನ್ನು ತೆಗೆದುಹಾಕಿಸಿದೆ; ಯೆಹೋವನನ್ನು ಹಿಂಬಾಲಿಸಲು ನಿನ್ನ ಹೃದಯದಲ್ಲಿ ತೀರ್ಮಾನಿಸಿದೆ” ಅಂದನು.


ಉಪವಾಸ ದಿನವನ್ನು ಗೊತ್ತುಪಡಿಸಿರಿ. ಆ ದಿನಕ್ಕಾಗಿ ಜನರನ್ನು ಒಟ್ಟುಗೂಡಿಸಿರಿ. ದೇಶದಲ್ಲಿ ವಾಸವಾಗಿರುವ ನಾಯಕರುಗಳೆಲ್ಲರನ್ನೂ ಜನರನ್ನೂ ಒಟ್ಟುಗೂಡಿಸಿರಿ; ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಅವರನ್ನೆಲ್ಲ ಪ್ರಾರ್ಥನೆಗಾಗಿ ಕರೆದುಕೊಂಡು ಬನ್ನಿರಿ.


ಯೆಹೋಯಾಕೀಮನ ಆಳ್ವಿಕೆಯ ಐದನೇ ವರ್ಷದ ಒಂಭತ್ತನೇ ತಿಂಗಳಲ್ಲಿ ಒಂದು ಉಪವಾಸವನ್ನು ಪ್ರಕಟಿಸಲಾಯಿತು. ಜೆರುಸಲೇಮ್ ನಗರದ ನಿವಾಸಿಗಳೆಲ್ಲರೂ ಯೆಹೂದದ ಬೇರೆ ಊರುಗಳಿಂದ ಜೆರುಸಲೇಮಿಗೆ ಬಂದವರೆಲ್ಲರೂ ಯೆಹೋವನ ಆಲಯದಲ್ಲಿ ಉಪವಾಸ ಮಾಡುವರೆಂದು ಗೊತ್ತುಪಡಿಸಲಾಗಿತ್ತು.


ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


ಜನರು ಇದನ್ನು ನೋಡಿದಾಗ ಅವರು ಯೆಹೋವನಿಗೆ ಭಯಪಟ್ಟು ಗೌರವಿಸಿದರು. ಅವರು ಆತನಿಗೆ ಯಜ್ಞವನ್ನರ್ಪಿಸಿ ಹರಕೆ ಹಾಕಿಕೊಂಡರು.


ಲೇವಿಯರು ಇಸ್ರೇಲನ್ನು ಬಿಟ್ಟುಬಂದ ಬಳಿಕ ಇಸ್ರೇಲರಲ್ಲಿ ದೇವರಾದ ಯೆಹೋವನಿಗೆ ನಂಬಿಗಸ್ತರಾಗಿ ಸೇವಿಸುವವರು ಜೆರುಸಲೇಮ್ ನಗರಕ್ಕೆ ಬಂದು ದೇವರಿಗೆ ಯಜ್ಞಗಳನ್ನು ಅರ್ಪಿಸಿ ಆರಾಧಿಸಿದರು.


ಆಗ ಇಸ್ರೇಲಿನ ಜನರೆಲ್ಲರು ಬೇತೇಲಿಗೆ ಹೋದರು. ಅಲ್ಲಿ ಅವರು ಕುಳಿತುಕೊಂಡು ಯೆಹೋವನಿಗೆ ಮೊರೆಯಿಟ್ಟರು. ಅವರು ಸಾಯಂಕಾಲದವರೆಗೆ ಏನೂ ತಿನ್ನಲಿಲ್ಲ. ಇದಲ್ಲದೆ ಅವರು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ನನ್ನ ಹೆಸರಿನಿಂದ ಕರೆಯಲ್ಪಡುವ ನನ್ನ ಜನರು ದೀನತೆಯಿಂದ ಪ್ರಾರ್ಥಿಸಿ, ತಮ್ಮ ಪಾಪಗಳನ್ನು ಬಿಟ್ಟು ನನ್ನ ಕಡೆಗೆ ತಿರುಗಿದರೆ ನಾನು ಪರಲೋಕದಿಂದ ಅವರನ್ನು ಆಲೈಸಿ, ಅವರ ಪಾಪಗಳನ್ನು ಮನ್ನಿಸಿ ಅವರ ದೇಶವನ್ನು ಗುಣಪಡಿಸುವೆನು.


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರೇಲರು ತಿರಿಗಿ ಸೇರಿಬಂದು ಒಂದು ದಿನದ ಉಪವಾಸ ಮಾಡಿದರು. ಶೋಕಬಟ್ಟೆಯನ್ನು ಧರಿಸಿ, ತಲೆಗೆ ಬೂದಿಯನ್ನು ಹಾಕಿ ತಮ್ಮತಮ್ಮ ದುಃಖವನ್ನು ವ್ಯಕ್ತಪಡಿಸಿದರು.


ಇಸ್ರೇಲ್ ಜನಾಂಗಕ್ಕೆ ಯೆಹೋವನು ಹೀಗೆನ್ನುತ್ತಾನೆ: “ನನ್ನನ್ನು ಹುಡುಕುತ್ತಾ ಬಂದು ಬದುಕುವವನಾಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು