Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:34 - ಪರಿಶುದ್ದ ಬೈಬಲ್‌

34 ಯೆಹೋಷಾಫಾಟನು ಆರಂಭದಿಂದ ಕೊನೆಯವರೆಗೂ ಮಾಡಿದ ಬೇರೆ ಕಾರ್ಯಗಳು, ಹನಾನೀಯನ ಮಗನಾದ ಯೇಹು ಬರೆದ ಇಸ್ರೇಲ್ ರಾಜರ ಗ್ರಂಥದಲ್ಲಿ ದಾಖಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆ ಇಸ್ರಯೇಲ್ ರಾಜರ ಗ್ರಂಥದಲ್ಲಿ ಹನಾನೀಯನ ಮಗ ಯೇಹುವಿನ ವೃತ್ತಾಂತದಲ್ಲಿ ದಾಖಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೆಹೋಷಾಫಾಟನ ಇತರ ಕ್ರಿಯೆಗಳು, ಆರಂಭದಿಂದ ಅಂತ್ಯದವರೆಗೆ, ಇಸ್ರಾಯೇಲರ ಅರಸುಗಳ ಗ್ರಂಥದಲ್ಲಿ, ಅಂದರೆ, ಹನಾನೀಯ ಮಗನಾದ ಯೇಹುವಿನ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:34
11 ತಿಳಿವುಗಳ ಹೋಲಿಕೆ  

ದೇವದರ್ಶಿಯಾದ ಯೇಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೇಹುವು ಹೇಳಿದ್ದೇನೆಂದರೆ, “ನೀನು ದುಷ್ಟಜನರಿಗೆ ಸಹಾಯಮಾಡಿದ್ದೇಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೇಕೆ? ಆ ಕಾರಣಕ್ಕಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ.


ಆಗ ಯೆಹೋವನು ಹನಾನೀಯ ಮಗನಾದ ಯೇಹುವಿನೊಂದಿಗೆ ಮಾತನಾಡಿ ರಾಜನಾದ ಬಾಷನ ವಿರುದ್ಧವಾಗಿ ಹೀಗೆ ಹೇಳಿದನು:


ಯೆಹೋವನು ಪ್ರವಾದಿಯಾದ ಯೇಹುವಿಗೆ ಒಂದು ಸಂದೇಶವನ್ನು ನೀಡಿದನು. ಈ ಸಂದೇಶವು ಬಾಷನ ಮತ್ತು ಅವನ ಕುಟುಂಬದ ವಿರುದ್ಧವಾಗಿತ್ತು. ಬಾಷನು ಯೆಹೋವನ ವಿರುದ್ಧವಾಗಿ ದುರಾಚಾರವನ್ನೆಸಗಿದನು. ಇದು ಯೆಹೋವನಿಗೆ ಹೆಚ್ಚು ಕೋಪವನ್ನು ಉಂಟುಮಾಡಿತು. ಯಾರೊಬ್ಬಾಮನ ಕುಟುಂಬವು ಅವನಿಗಿಂತ ಮುಂಚೆ ಮಾಡಿದ ಕಾರ್ಯಗಳನ್ನೇ ಬಾಷನೂ ಮಾಡಿದನು. ಬಾಷನು ಯಾರೊಬ್ಬಾಮನ ಕುಟುಂಬದವರನ್ನೆಲ್ಲಾ ಕೊಂದುಹಾಕಿದ್ದಕ್ಕಾಗಿಯೂ ಯೆಹೋವನು ಕೋಪಗೊಂಡನು.


ಆಸನು ಪ್ರಾರಂಭದಿಂದ ಕೊನೆಯವರೆಗೆ ಮಾಡಿದ ಎಲ್ಲಾ ವಿಷಯಗಳು ಯೆಹೂದ ಮತ್ತು ಇಸ್ರೇಲ್ ರಾಜರ ಗ್ರಂಥದಲ್ಲಿ ಬರೆಯಲ್ಪಟ್ಟಿವೆ.


ಅಬೀಯನು ಮಾಡಿದ ಎಲ್ಲಾ ಕಾರ್ಯಗಳ ಕುರಿತು ಪ್ರವಾದಿ ಇದ್ದೋ ಬರೆದ ಪುಸ್ತಕದಲ್ಲಿ ದಾಖಲಾಗಿವೆ.


ಪ್ರವಾದಿಯಾದ ಶೆಮಾಯ ಮತ್ತು ದರ್ಶಿಯಾದ ಇದ್ದೋ ಬರೆದ ಚರಿತ್ರೆಗಳ ವಂಶಾವಳಿಗಳಲ್ಲಿ ರೆಹಬ್ಬಾಮನು ತಾನು ರಾಜನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಎಲ್ಲಾ ವಿಷಯಗಳು ಬರೆಯಲ್ಪಟ್ಟಿವೆ. ಅವನ ಆಳ್ವಿಕೆಯ ಕಾಲದಲ್ಲೆಲ್ಲಾ ಅವನಿಗೂ ಯಾರೊಬ್ಬಾಮನಿಗೂ ಯುದ್ಧಗಳು ನಡೆಯುತ್ತಲೇ ಇದ್ದವು.


ಹೀಗೆ ಜಿಮ್ರಿಯು ಬಾಷನ ಕುಟುಂಬವನ್ನು ನಾಶಗೊಳಿಸಿದನು. ಬಾಷನ ವಿರುದ್ಧವಾಗಿ ಯೆಹೋವನು ಪ್ರವಾದಿಯಾದ ಯೇಹುವಿನ ಮೂಲಕ ತಿಳಿಸಿದಂತೆ ಇದು ಸಂಭವಿಸಿತು.


ಯೆಹೋಷಾಫಾಟನು ಬಹಳ ಧೈರ್ಯಶಾಲಿ. ಅವನು ಅನೇಕ ಯುದ್ಧಗಳಲ್ಲಿ ಹೋರಾಡಿದ್ದನು. ಅವನು ಮಾಡಿದ ಕಾರ್ಯಗಳನ್ನೆಲ್ಲಾ “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.


ರಾಜನಾದ ಯಾರೊಬ್ಬಾಮನು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವನು ಯುದ್ಧಗಳಲ್ಲಿ ಹೋರಾಡಿದನು ಮತ್ತು ಜನರನ್ನು ಆಳಿದನು. “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅವನು ಮಾಡಿದ ಕಾರ್ಯಗಳೆಲ್ಲವನ್ನು ಬರೆಯಲಾಗಿದೆ.


ಆಗ ದೇವದರ್ಶಿಯಾದ ಹನಾನಿಯು ಯೆಹೂದದ ರಾಜನಾದ ಆಸನ ಬಳಿಗೆ ಬಂದು, “ಆಸನೇ, ನೀನು ದೇವರಾದ ಯೆಹೋವನ ಮೇಲೆ ಭರವಸವನ್ನಿಡುವ ಬದಲು ಅರಾಮ್ಯರ ಅರಸನ ಮೇಲೆ ಭರವಸವನ್ನಿಟ್ಟಿದ್ದರಿಂದ ಅರಾಮ್ಯರ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.


ಅಮಚ್ಯನ ಬೇರೆ ಕಾರ್ಯಗಳು ಅಂದರೆ ಆರಂಭದಿಂದ ಕೊನೆಯವರೆಗಿನ ಕಾರ್ಯಗಳನ್ನು ಯೆಹೂದದ ಮತ್ತು ಇಸ್ರೇಲಿನ ರಾಜರ ಗ್ರಂಥದಲ್ಲಿ ಬರೆಯಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು