Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:15 - ಪರಿಶುದ್ದ ಬೈಬಲ್‌

15 ನಿನ್ನ ಹೊಟ್ಟೆಯೊಳಗೆ ಭಯಂಕರವಾದ ಕಾಯಿಲೆ ಬರುವದು. ಅದು ದಿನದಿಂದ ದಿನಕ್ಕೆ ಹೆಚ್ಚುವುದು. ಆ ರೋಗದ ನಿಮಿತ್ತ ನಿನ್ನ ಕರುಳು ನಿನ್ನ ಹೊಟ್ಟೆಯಿಂದ ಹೊರಬೀಳುವದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿನಗಾದರೋ ಕರುಳು ಬೇನೆಯ ಕಠಿಣ ರೋಗ ಬರುವುದು. ಅದು ಬಹು ದಿನಗಳವರೆಗೂ ಇದ್ದು ವಾಸಿಯಾಗದೇ ನಿನ್ನ ಕರುಳುಗಳು ಹೊರಗೆ ಬೀಳುವುವು” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿನಗಾದರೋ ಕರುಳುಬೇನೆಯ ಕಠಿಣರೋಗ ಬರುವುದು. ಅದು ಬಹುದಿನಗಳವರೆಗೂ ವಾಸಿ ಆಗದು; ಕಡೆಯಲ್ಲಿ ನಿನ್ನ ಕರುಳುಗಳು ಹೊರಗೆ ಬೀಳುವುವು,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿನಗಾದರೋ ಕರುಳುಬೇನೆಯೆಂಬ ಕಠಿನರೋಗವು ಬಂದು ಬಹುದಿನಗಳವರೆಗೂ ಇದ್ದು ಕಡೆಯಲ್ಲಿ ಅದರಿಂದ ನಿನ್ನ ಕರುಳುಗಳು ಹೊರಗೆ ಬೀಳುವವು ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವುದರಿಂದ ನಿನ್ನ ಕರುಳುಗಳು ಹೊರಕ್ಕೆ ಬರುವವರೆಗೆ ಕರುಳುಬೇನೆಯ ರೋಗದಿಂದ ನಿನಗೆ ಕಠಿಣರೋಗ ಬರುವುದು,’ ” ಎಂದು ಬರೆದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:15
11 ತಿಳಿವುಗಳ ಹೋಲಿಕೆ  

(ಈ ಕಾರ್ಯ ಮಾಡುವುದಕ್ಕಾಗಿ ಯೂದನಿಗೆ ಹಣ ಕೊಡಲಾಗಿತ್ತು. ಆ ಹಣದಿಂದ ಒಂದು ಹೊಲವನ್ನು ಅವನಿಗಾಗಿ ಕೊಂಡುಕೊಳ್ಳಲಾಯಿತು. ಆದರೆ ಯೂದನು ತಲೆಕೆಳಗಾಗಿ ಬಿದ್ದಾಗ ಅವನ ಹೊಟ್ಟೆ ಒಡೆದುಹೋಯಿತು. ಅವನ ಕರುಳೆಲ್ಲಾ ಹೊರಗೆ ಬಂದವು.


ಅವನು ಉಡುಪುಗಳನ್ನು ಧರಿಸುವಂತೆ ಶಪಿಸುವುದೇ ಅವನ ದಿನನಿತ್ಯ ಜೀವಿತದ ಕೆಲಸವಾಗಿತ್ತು.


ಮುಂಜಾನೆಯಲ್ಲಿ ನೀವು, ‘ಇದು ಸಾಯಂಕಾಲವಾಗಿದ್ದರೆ ಉತ್ತಮವಾಗಿರುತ್ತಿತ್ತು’ ಎಂದು ಅನ್ನುವಿರಿ. ಸಾಯಂಕಾಲದಲ್ಲಿ, ‘ಇದು ಮುಂಜಾನೆಯಾಗಿದ್ದರೆ ಉತ್ತಮವಾಗಿರುತ್ತಿತ್ತು’ ಎಂದು ಅನ್ನುವಿರಿ. ನಿಮ್ಮ ಹೃದಯದಲ್ಲಿರುವ ಭಯ ಮತ್ತು ನೀವು ಕಣ್ಣಾರೆ ಕಾಣುವ ಭಯಂಕರ ಸಂಗತಿಗಳೇ ಇದಕ್ಕೆ ಕಾರಣ.


ಈ ಪುಸ್ತಕದಲ್ಲಿ ಬರೆದಿಲ್ಲದ ಸಂಕಟಗಳೂ ರೋಗಗಳೂ ನಿಮಗೆ ಪ್ರಾಪ್ತಿಯಾಗುವವು. ನೀವು ನಾಶವಾಗುವ ತನಕ ಅವೆಲ್ಲಾ ನಿಮಗೆ ಬರುತ್ತವೆ.


ನಿಮಗೂ ನಿಮ್ಮ ಸಂತತಿಯವರಿಗೂ ಅನೇಕ ತೊಂದರೆಗಳನ್ನು ಕೊಡುವನು. ಆ ತೊಂದರೆಗಳು ಮತ್ತು ರೋಗಗಳು ಭಯಂಕರವಾಗಿವೆ.


ನೀವು ಯಾವ ದೇಶಕ್ಕೆ ಕಳುಹಿಸಲ್ಪಡುವಿರೋ ಆ ದೇಶದವರು ನಿಮ್ಮ ದುರವಸ್ಥೆಯನ್ನು ನೋಡಿ ನಗುವರು; ಕೆಟ್ಟಮಾತುಗಳನ್ನಾಡುವರು.


“ಈಜಿಪ್ಟಿನವರಿಗೆ ಕಳುಹಿಸಿದಂತೆ ನಿಮಗೂ ಮೈಯಲ್ಲಿ ಬಾಧಿಸುವ ಹುಣ್ಣುಗಳನ್ನು ಕಳುಹಿಸುವನು. ದೇಹದಲ್ಲಿ ಗಡ್ಡೆಗಳುಂಟಾಗುವವು. ಕೀವುಸೋರುವ ಹುಣ್ಣುಗಳು, ಗುಣವಾಗದ ತುರಿಸುವ ಕಜ್ಜಿಗಳು ಉಂಟಾಗುವವು.


ಅವಳು ಅಶುದ್ಧಳಾಗಿದ್ದರೆ ಮತ್ತು ತನ್ನ ಗಂಡನಿಗೆ ವಿರುದ್ಧವಾಗಿ ಪಾಪಮಾಡಿದ್ದರೆ, ನೀರು ಅವಳಿಗೆ ಹಾನಿಯನ್ನು ಉಂಟುಮಾಡುವುದು, ನೀರು ಅವಳೊಳಗೆ ಹೋಗಿ ಅವಳಿಗೆ ಮಹಾಸಂಕಟವನ್ನು ಉಂಟುಮಾಡುವುದು. ನೀರು ಅವಳನ್ನು ಆ ಕೂಡಲೇ ಬಂಜೆಯನ್ನಾಗಿ ಮಾಡುವುದು. ಅವಳು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗಿರುವಳು.


ಹೆರೋದನು ಈ ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಆ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.


ಆದ್ದರಿಂದ ಯೆಹೋವನು ನಿನ್ನ ಜನರನ್ನು ಭಯಂಕರವಾದ ರೋಗದಿಂದ ದಂಡಿಸುವನು. ಆತನು ನಿನ್ನನ್ನೂ ನಿನ್ನ ಹೆಂಡತಿಮಕ್ಕಳನ್ನೂ ಆಸ್ತಿಪಾಸ್ತಿಯನ್ನೂ ಶಿಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು