Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 22:6 - ಪರಿಶುದ್ದ ಬೈಬಲ್‌

6 ಗಾಯವನ್ನು ವಾಸಿಮಾಡಿಸಿಕೊಳ್ಳಲು ಯೋರಾಮನು ಇಜ್ರೇಲಿಗೆ ಹೋದನು. ಅರಾಮ್ಯರ ರಾಜನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಯೋರಾಮನು ಗಾಯಗೊಂಡಿದ್ದನು. ಇಜ್ರೇಲಿನಲ್ಲಿ ಅಸ್ವಸ್ಥನಾಗಿದ್ದ ಯೋರಾಮನನ್ನು ಸಂಧಿಸಲು ಯೆಹೂದ್ಯರ ಅರಸನೂ ಯೆಹೋರಾಮನ ಮಗನೂ ಆಗಿರುವ ಅಹಜ್ಯನು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಗಾಯಗಳನ್ನು ಮಾಯಿಸಿಕೊಳ್ಳುವುದಕ್ಕಾಗಿ ಅವನು ಜೆಸ್ರೀಲಿಗೆ ಬಂದನು. ಅವನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡುವುದಕ್ಕೆ ಅಲ್ಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಅಸ್ವಸ್ಥನಾಗಿದ್ದದರಿಂದ ಯೆಹೂದ್ಯರ ಅರಸನಾದ ಯೆಹೋರಾಮನಿಗೆ ಮಗನಾಗಿರುವ ಅಹಜ್ಯನು ಅವನನ್ನು ನೋಡುವದಕ್ಕೋಸ್ಕರ ಅಲ್ಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ಅವನು ಅರಾಮ್ಯ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ, ರಾಮೋತಿನಲ್ಲಿ ತನ್ನನ್ನು ಹೊಡೆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕೆ ಇಜ್ರೆಯೇಲ್ ಪಟ್ಟಣಕ್ಕೆ ತಿರುಗಿಹೋದನು. ಆಗ ಅಹಾಬನ ಮಗ ಯೋರಾಮನು ಇಜ್ರೆಯೇಲಿನಲ್ಲಿ ಅಸ್ವಸ್ಥನಾಗಿದ್ದುದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗ ಅಜರ್ಯನು ಅವನನ್ನು ನೋಡಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 22:6
8 ತಿಳಿವುಗಳ ಹೋಲಿಕೆ  

ಆದರೆ ರಾಜನಾದ ಯೋರಾಮನಿಗೆ ಅರಾಮ್ಯರು ಗಾಯಗೊಳಿಸಿದ್ದರಿಂದ ಅವನು ವಾಸಿಮಾಡಿಕೊಳ್ಳಲು ಇಜ್ರೇಲಿಗೆ ಹಿಂದಿರುಗಿ ಬಂದಿದ್ದನು. (ಅರಾಮ್ಯರ ರಾಜನಾದ ಹಜಾಯೇಲನ ವಿರುದ್ಧ ಯೋರಾಮನು ಹೋರಾಟ ಮಾಡಿದಾಗ ಅರಾಮ್ಯರು ಅವನನ್ನು ಗಾಯಗೊಳಿಸಿದ್ದರು.) ಯೇಹು ಅಧಿಕಾರಿಗಳಿಗೆ, “ನಾನು ನೂತನ ರಾಜನೆಂದು ನೀವು ಒಪ್ಪಿಕೊಂಡರೆ, ಈ ಸುದ್ದಿಯನ್ನು ಇಜ್ರೇಲಿನಲ್ಲಿ ಹೇಳಲು ಯಾರೂ ನಗರದಿಂದ ತಪ್ಪಿಸಿಕೊಂಡು ಹೋಗಲು ಅವಕಾಶ ಕೊಡದಿರಿ” ಎಂದು ಹೇಳಿದನು.


ಯೋರಾಮನನ್ನು ಸಂಧಿಸಲು ಹೋದಾಗ ಅಹಜ್ಯನು ಕೊಲ್ಲಲ್ಪಡುವಂತೆ ಯೆಹೋವನು ಮಾಡಿದನು. ಅಹಜ್ಯನು ಯೇಹುವನ್ನು ಭೇಟಿಯಾಗಲು ಯೋರಾಮನೊಂದಿಗೆ ಹೋದನು. ಯೇಹುವಿನ ತಂದೆ ನಿಂಷಿ. ಅಹಾಬನ ಕುಟುಂಬವನ್ನು ನಾಶಗೊಳಿಸಲು ಯೆಹೋವನು ಯೇಹುವನ್ನು ಆರಿಸಿಕೊಂಡನು.


ಜೆರುಸಲೇಮಿನ ಜನರು ಯೆಹೋರಾಮನ ಕೊನೆಯ ಮಗನಾದ ಅಹಜ್ಯನನ್ನು ತಮ್ಮ ರಾಜನನ್ನಾಗಿ ಆರಿಸಿಕೊಂಡರು. ಯೆಹೋರಾಮನೊಂದಿಗೆ ಯುದ್ಧಕ್ಕೆ ಬಂದಿದ್ದ ಅರಬ್ಬಿಯರು ಅವನ ಮಕ್ಕಳನ್ನೆಲ್ಲಾ ಕೊಂದಿದ್ದರು. ಹೀಗಾಗಿ ಉಳಿದುಕೊಂಡಿದ್ದ ಅಹಜ್ಯನು ಜೆರುಸಲೇಮಿನಲ್ಲಿ ಯೆಹೂದ ರಾಜ್ಯವನ್ನು ಆಳತೊಡಗಿದನು.


ಅವರು ಬಂದು ಯೆಹೂದದೇಶದ ಮೇಲೆ ಆಕ್ರಮಣ ಮಾಡಿದರು; ರಾಜನಿವಾಸದಲ್ಲಿದ್ದ ನಿಕ್ಷೇಪವನ್ನೆಲ್ಲಾ ಸೂರೆಮಾಡಿದರು. ಅಲ್ಲದೆ ಯೆಹೋರಾಮನ ಪತ್ನಿ, ಮಕ್ಕಳನ್ನೂ ಕೊಂಡೊಯ್ದರು. ಯೆಹೋರಾಮನ ಕೊನೆಯ ಮಗನು ಮಾತ್ರ ಉಳಿದನು. ಅವನ ಹೆಸರು ಯೆಹೋವಾಹಾಜ.


ರಾಜ ಯೋರಾಮನು ಹಜಾಯೇಲನ ವಿರುದ್ಧವಾಗಿ ಹೋರಾಡಿದಾಗ ರಾಮಾದಲ್ಲಿ ಅರಾಮ್ಯದಿಂದ ತನಗಾದ ಗಾಯಗಳನ್ನು ಗುಣಪಡಿಸಿಕೊಳ್ಳಲು ಇಸ್ರೇಲಿನ ರಾಜನು ಇಜ್ರೇಲ್ ಎಂಬ ಪಟ್ಟಣಕ್ಕೆ ಹಿಂತಿರುಗಿದನು. ಯೆಹೂದದ ರಾಜನೂ ಯೆಹೋರಾಮನ ಮಗನೂ ಆದ ಅಹಜ್ಯನು, ಅಹಾಬನ ಮಗನಾದ ಯೋರಾಮನನ್ನು ನೋಡಲು ಇಜ್ರೇಲಿಗೆ ಹೋದನು. ಯಾಕೆಂದರೆ ಅವನಿಗೆ ಕಾಯಿಲೆಯಾಗಿತ್ತು.


ಇಜ್ರೇಲ್, ಯೆಗ್ದೆಯಾಮ್, ಜನೋಹ,


ಅಹಾಬನ ಕುಟುಂಬದವರ ಸಲಹೆಯ ಮೇರೆಗೆ ಅಹಜ್ಯನು ರಾಜನಾದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನೊಂದಿಗೆ ಯುದ್ಧಮಾಡಲು ರಾಮೋತ್‌ಗಿಲ್ಯಾದ್ ಎಂಬ ಪಟ್ಟಣಕ್ಕೆ ಹೋದನು. ಯೋರಾಮನು ಇಸ್ರೇಲರ ಅರಸನಾದ ಅಹಾಬನ ಮಗನು. ಅರಾಮ್ಯರು ಯುದ್ಧದಲ್ಲಿ ಯೋರಾಮನನ್ನು ಗಾಯಗೊಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು