Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:14 - ಪರಿಶುದ್ದ ಬೈಬಲ್‌

14 ಯಾಜಕನಾದ ಯೆಹೋಯಾದನು ಸೈನ್ಯಾಧಿಕಾರಿಗಳನ್ನು ಹೊರತಂದು, “ಅತಲ್ಯಳನ್ನು ಹೊರಗೆ ಎಳೆದುಕೊಂಡು ಹೋಗಿ, ಯಾರಾದರೂ ಆಕೆಯನ್ನು ಹಿಂಬಾಲಿಸಿದರೆ ಖಡ್ಗದಿಂದ ಅವರನ್ನು ಸಂಹರಿಸಿರಿ” ಎಂದು ಹೇಳಿದನು. ಆಗ ಯಾಜಕರು ಸಿಪಾಯಿಗಳಿಗೆ, “ಅತಲ್ಯಳನ್ನು ದೇವಾಲಯದೊಳಗೆ ಕೊಲ್ಲಬೇಡಿ” ಎಂದು ಎಚ್ಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಯಾಜಕ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರಕೊಂಡು ಹೋಗಿ ಅವರಿಗೆ - ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳನ್ನು ಹೊರಗೆ ಕರೆತಂದು ಅವರಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:14
7 ತಿಳಿವುಗಳ ಹೋಲಿಕೆ  

ದೇವರು ಅವರಿಗೆ ಹೇಳಿದ್ದೇನೆಂದರೆ, “ಈ ಆಲಯವನ್ನು ಹೊಲೆ ಮಾಡಿರಿ. ಆಲಯದ ಅಂಗಳವನ್ನು ಹೆಣಗಳಿಂದ ತುಂಬಿಸಿರಿ. ಈಗ ಹೊರಡಿ.” ಅವರು ಹೊರಟುಹೋಗಿ ನಗರದ ಜನರನ್ನು ಕೊಂದರು.


ಯಾಜಕನಾದ ಯೆಹೋಯಾದಾವನು ಸೈನಿಕರ ಮೇಲ್ವಿಚಾರಕರಾದ ಸೇನಾಧಿಪತಿಗಳಿಗೆ ಆಜ್ಞಾಪಿಸಿದನು. ಯೆಹೋಯಾದಾವನು ಅವರಿಗೆ, “ಅತಲ್ಯಳನ್ನು ಆಲಯದ ಆವರಣದಿಂದ ಹೊರಗೆ ತೆಗೆದುಕೊಂಡು ಹೋಗಿ. ಅವಳ ಹಿಂಬಾಲಕರು ಯಾರೇ ಆಗಿದ್ದರೂ ಕೊಂದುಬಿಡಿ. ಆದರೆ ಅವರನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿ” ಎಂದು ಹೇಳಿದನು.


ರಾಜನಾದ ಯೆಹೋವಾಷನು ಎಲ್ಲಿಗಾದರೂ ಯಾವಾಗಲಾದರೂ ಹೋದರೆ ಅವನೊಂದಿಗೆ ನೀವು ಇರಲೇಬೇಕು. ನೀವೆಲ್ಲರೂ ರಾಜನನ್ನು ಸುತ್ತುವರಿದಿರಬೇಕು. ಪ್ರತಿಯೊಬ್ಬ ಕಾವಲುಗಾರನೂ ಆಯುಧವನ್ನು ತನ್ನ ಕೈಯಲ್ಲಿ ಹಿಡಿದಿರಲೇಬೇಕು. ನಿಮ್ಮ ಸಮೀಪಕ್ಕೆ ಯಾರಾದರೂ ಬಂದರೆ ಅವರನ್ನು ಕೊಲ್ಲಬೇಕು” ಎಂದನು.


ಯೇಹುವು ಸರ್ವಾಂಗಹೋಮಗಳನ್ನು ಅರ್ಪಿಸಿದ ತಕ್ಷಣ, ಕಾವಲುಗಾರರಿಗೂ ಸೇನಾಧಿಪತಿಗಳಿಗೂ, “ಒಳಕೋಣೆಗೆ ಹೋಗಿ ಬಾಳನ ಆರಾಧಕರನ್ನೆಲ್ಲ ಕೊಂದುಹಾಕಿ! ಜೀವಸಹಿತ ಯಾರೂ ಆಲಯದಿಂದ ಹೊರಕ್ಕೆ ಬರಲು ಬಿಡಬೇಡಿ!” ಎಂದು ಹೇಳಿದನು. ಸೇನಾಧಿಪತಿಗಳು ಚೂಪಾದ ಖಡ್ಗದಿಂದ ಬಾಳನ ಭಕ್ತರನ್ನೆಲ್ಲ ಕೊಂದುಹಾಕಿದರು. ಬಾಳನ ಭಕ್ತರ ದೇಹಗಳನ್ನು ಕಾವಲುಗಾರರು ಮತ್ತು ಸೇನಾಧಿಪತಿಗಳು ಹೊರಕ್ಕೆ ಎಸೆದರು. ನಂತರ ಆ ಕಾವಲುಗಾರರು ಮತ್ತು ಸೇನಾಧಿಪತಿಗಳು ಬಾಳನ ಆಲಯದ ಒಳಕೋಣೆಯನ್ನು ಪ್ರವೇಶಿಸಿದರು.


ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.


ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.


ಅರಮನೆಗೆ ಹೋಗುವ ದಾರಿಯಲ್ಲಿ ಕುದುರೆ ಬಾಗಿಲಿನ ಹತ್ತಿರ ಸಿಪಾಯಿಗಳು ಆಕೆಯನ್ನು ಸಂಹರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು