Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:18 - ಪರಿಶುದ್ದ ಬೈಬಲ್‌

18 ಆ ಬಳಿಕ ಯೆಹೋಯಾದನು ದೇವಾಲಯದೊಳಗೆ ಸೇವೆಮಾಡುವ ಜವಾಬ್ದಾರಿಕೆಯನ್ನು ಕೆಲವು ಯಾಜಕರಿಗೆ ವಹಿಸಿದನು. ಅವರೆಲ್ಲಾ ಲೇವಿಯರಾಗಿದ್ದರು. ದಾವೀದನು ಅವರಿಗೆ ದೇವಾಲಯದ ಜವಾಬ್ದಾರಿಕೆಯನ್ನು ಕೊಟ್ಟಿದ್ದನು. ಮೋಶೆಯು ಕೊಟ್ಟಿದ್ದ ನಿಯಮಕ್ಕನುಸಾರವಾಗಿ ಅವರು ಸರ್ವಾಂಗಹೋಮವನ್ನು ಅರ್ಪಿಸಿದರು. ದಾವೀದನು ಆಜ್ಞಾಪಿಸಿದಂತೆ ಅವರು ಹೋಮಗಳನ್ನೂ ಯಜ್ಞಗಳನ್ನೂ ಅರ್ಪಿಸುವಾಗ ಹಾಡುತ್ತಾ ಸಂತೋಷದಿಂದ ತಮ್ಮ ಕೆಲಸವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಸರ್ವೇಶ್ವರನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಸರ್ವೇಶ್ವರನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ, ಮೋಶೆಯ ಧರ್ಮಶಾಸ್ತ್ರಾನುಸಾರ ಸರ್ವೇಶ್ವರನಿಗೆ ದಹನಬಲಿ ಸಮರ್ಪಣೆ ಮಾಡುವುದು ಅವರ ಕರ್ತವ್ಯವಾಗಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇವಿುಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗೋಸ್ಕರ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇವಿುಸಿದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮಸಮರ್ಪಣೆ ಮಾಡುವದೇ ಅವರ ಕರ್ತವ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಯೆಹೋಯಾದಾವನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವ ದೇವರ ಆಲಯದ ಪರಿಚಾರಕರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವ ದೇವರ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ಬೇರ್ಪಡಿಸಿದ್ದನು. ದಾವೀದನಿಂದ ನೇಮಕವಾದ ಪ್ರಕಾರ ಸಂತೋಷದಿಂದ ಹಾಡುತ್ತಾ ಮೋಶೆಯ ನಿಯಮದಲ್ಲಿ ಬರೆದಿರುವಂತೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುವುದು ಅವರ ಕರ್ತವ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:18
13 ತಿಳಿವುಗಳ ಹೋಲಿಕೆ  

ಯಾಜಕರೂ ಲೇವಿಯರೂ ದೇವದರ್ಶನದ ಗುಡಾರವನ್ನು, ಅದರ ಪವಿತ್ರ ವಸ್ತುಗಳನ್ನು ಹೊತ್ತು ಜೆರುಸಲೇಮಿಗೆ ತಂದರು.


ದಾವೀದನೂ ಅರಸನ ದರ್ಶಿಯಾಗಿದ್ದ ಗಾದನೂ ಮತ್ತು ಪ್ರವಾದಿಯಾಗಿದ್ದ ನಾತಾನನೂ ಆಜ್ಞಾಪಿಸಿದಂತೆ, ಅರಸನಾದ ಹಿಜ್ಕೀಯನು ಲೇವಿಯರನ್ನು ತಾಳ, ತಂತಿವಾದ್ಯ ಮತ್ತು ಕಿನ್ನರಿಗಳೊಂದಿಗೆ ದೇವಾಲಯದಲ್ಲಿ ಇರಿಸಿದನು. ಈ ಆಜ್ಞೆಯು ಯೆಹೋವನಿಂದ ಪ್ರವಾದಿಗಳ ಮೂಲಕ ಬಂದಿತ್ತು.


ದಾವೀದನು, “ಇಸ್ರೇಲರ ದೇವರಾದ ಯೆಹೋವನು ತನ್ನ ಜನರಿಗೆ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ದೇವರು ನಿರಂತರವೂ ಜೆರುಸಲೇಮಿನಲ್ಲಿ ವಾಸಿಸಲು ಬಂದಿರುತ್ತಾನೆ.


ಆ ಬಳಿಕ ಹಿಜ್ಕೀಯನು ಸರ್ವಾಂಗಹೋಮವನ್ನು ಅರ್ಪಿಸಲು ಆಜ್ಞಾಪಿಸಿದನು. ಸರ್ವಾಂಗಹೋಮ ಆರಂಭವಾದ ಕೂಡಲೇ ದೇವರಿಗೆ ಸ್ತೋತ್ರಗಾನ ಹಾಡುವದೂ ಪ್ರಾರಂಭವಾಯಿತು. ತುತ್ತೂರಿಯನ್ನು ಊದಿ ದಾವೀದನ ವಾದ್ಯಗಳನ್ನು ಬಾರಿಸಿದರು.


ಯಾಜಕರು ಮತ್ತು ಲೇವಿಯರು ಎದ್ದುನಿಂತು ಜನರನ್ನು ಯೆಹೋವನು ಆಶೀರ್ವದಿಸುವಂತೆ ಕೇಳಿಕೊಂಡರು. ದೇವರು ಪರಲೋಕದ ತನ್ನ ಪವಿತ್ರ ನಿವಾಸಕ್ಕೆ ಬಂದ ಆ ಪ್ರಾರ್ಥನೆಗೆ ಕಿವಿಗೊಟ್ಟನು.


ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರನ್ನು ಸ್ತುತಿಸಲು ನಿಂತಿದ್ದರು. ಆ ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, “ದೇವರಾದ ಯೆಹೋವನ ಕೃಪೆಯು ನಿರಂತರವಾದದ್ದು” ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತುಕೊಂಡರು.


ರಾಜನಾದ ಹಿಜ್ಕೀಯನು ಮತ್ತು ಅವನ ಅಧಿಕಾರಿಗಳು ಯೆಹೋವನಿಗೆ ಸ್ತೋತ್ರ ಮಾಡಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಆಸಾಫ ಮತ್ತು ಅರಸನಾಗಿದ್ದ ದಾವೀದನು ರಚಿಸಿದ್ದ ಹಾಡುಗಳನ್ನು ಗಾಯಕರು ಹಾಡಿ ದೇವರನ್ನು ಸ್ತುತಿಸಿದರು. ಹೀಗೆ ಜನರೆಲ್ಲಾ ಸಂತೋಷಪಟ್ಟರು. ಅವರೆಲ್ಲರು ಅಡ್ಡಬಿದ್ದು ದೇವರನ್ನು ಆರಾಧಿಸಿದರು.


ದೇವಾಲಯದಲ್ಲಿ ಸೇವೆ ಮಾಡುತ್ತಿದ್ದ ಯಾಜಕರನ್ನು ಯೋಷೀಯನು ಪ್ರೋತ್ಸಾಹಿಸಿ ವಿವಿಧ ಕೆಲಸಕಾರ್ಯಗಳಿಗೆ ಯಾಜಕರನ್ನು ಆರಿಸಿದನು.


ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಅವರು ಏಳು ದಿನಗಳ ತನಕ ಸಂತಸದಿಂದ ಆಚರಿಸಿದರು. ಯಾಕೆಂದರೆ ಅಶ್ಶೂರದ ಅರಸನ ಮನಸ್ಸನ್ನು ಮಾರ್ಪಡಿಸುವುದರ ಮೂಲಕ ಯೆಹೋವನು ಯೆಹೂದ್ಯರನ್ನು ಬಹಳ ಸಂತೋಷಗೊಳಿಸಿದ್ದನು. ಇಸ್ರೇಲ್ ದೇವರ ಆಲಯದ ಕಟ್ಟಡವು ಪೂರ್ಣಗೊಳ್ಳಲು ಅಶ್ಶೂರದ ಅರಸನು ಸಹಾಯ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು