Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:2 - ಪರಿಶುದ್ದ ಬೈಬಲ್‌

2 ಅವರು ಯೆಹೂದ ರಾಜ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿದ್ದ ಲೇವಿಯರನ್ನು ಒಟ್ಟಾಗಿ ಸೇರಿಸಿದರು. ಅಲ್ಲದೆ ಗೋತ್ರಪ್ರಧಾನರನ್ನೂ ಒಟ್ಟಾಗಿ ಸೇರಿಸಿ, ಅವರನ್ನು ಜೆರುಸಲೇಮಿಗೆ ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇವರು ಯೆಹೂದದಲ್ಲೆಲ್ಲಾ ಸಂಚರಿಸಿ ಎಲ್ಲಾ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲರ ಗೋತ್ರ ಪ್ರಧಾನರನ್ನೂ ಒಟ್ಟುಗೂಡಿಸಲು ಅವರು ಯೆರೂಸಲೇಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇವರು ಜುದೇಯದಲ್ಲೆಲ್ಲಾ ಸಂಚರಿಸಿ ಎಲ್ಲ ಪಟ್ಟಣಗಳಿಂದ ಲೇವಿಯರನ್ನೂ ಇಸ್ರಯೇಲರ ಗೋತ್ರಪ್ರಧಾನರನ್ನೂ ಕೂಡಿಸಿದರು. ಅವರೆಲ್ಲರು ಜೆರುಸಲೇಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವರು ಯೆಹೂದದಲ್ಲೆಲ್ಲಾ ಸಂಚರಿಸಿ ಎಲ್ಲಾ ಪಟ್ಟಣಗಳಿಂದ ಲೇವಿಯರನ್ನೂ ಇಸ್ರಾಯೇಲ್ಯರ ಗೋತ್ರಪ್ರಧಾನರನ್ನೂ ಕೂಡಿಸಲು ಅವರು ಯೆರೂಸಲೇವಿುಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲಿನ ಕುಟುಂಬದಲ್ಲಿ ಮುಖ್ಯಸ್ಥರನ್ನೂ ಕೂಡಿಸಿಕೊಂಡು, ಯೆರೂಸಲೇಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:2
7 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ಹೇಗೆ ಜೀವಿಸುತ್ತಿದ್ದೀರಿ ಎಂಬುದರ ಬಗ್ಗೆ ಬಹು ಎಚ್ಚರಿಕೆಯಿಂದಿರಿ. ಅವಿವೇಕಿಗಳಂತೆ ಜೀವಿಸದೆ ವಿವೇಕಿಗಳಾಗಿ ಜೀವಿಸಿರಿ.


“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.


ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು.


ಯೆಹೋರಾಮನ ತಮ್ಮಂದಿರು ಯಾರೆಂದರೆ: ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್ ಮತ್ತು ಶೆಫಟ್ಯ. ಇವರೆಲ್ಲಾ ಯೆಹೂದದ ರಾಜನಾಗಿದ್ದ ಯೆಹೋಷಾಫಾಟನ ಮಕ್ಕಳು.


ನೆತನೇಲನ ಮಗನಾದ ಶೆಮಾಯನು ಲೇಖಕನಾಗಿದ್ದನು. ಶೆಮಾಯನು ಲೇವಿ ಸಂತತಿಗೆ ಸೇರಿದವನಾಗಿದ್ದನು. ಇವನು ವಂಶಾವಳಿಯನ್ನು ಬರೆದಿಡುತ್ತಿದ್ದನು. ಅರಸನಾದ ದಾವೀದನ ಮತ್ತು ಯಾಜಕರಾದ ಚಾದೋಕನ, ಅಹೀಮೆಲೆಕನ ಮತ್ತು ಲೇವಿಯರ ನಾಯಕರ ಎದುರಿನಲ್ಲಿ ಸಂತತಿಯವರನ್ನು ಬರೆದನು. ಪ್ರತಿಸಲ ಚೀಟುಹಾಕಿ ಒಬ್ಬನನ್ನು ಒಂದು ಕೆಲಸಕ್ಕೆ ಆರಿಸಿದಾಗ ಅವನ ಹೆಸರನ್ನು ವಂಶಾವಳಿಯಲ್ಲಿ ಬರೆದನು. ಹೀಗೆ ಒಬ್ಬೊಬ್ಬನು ಯಾವಯಾವ ಕೆಲಸಗಳನ್ನು ಮಾಡಬೇಕೆಂದು ಎಲ್ಲರಿಗೂ ಗೊತ್ತುಪಡಿಸಿದರು. ಈ ರೀತಿಯಾಗಿ ಎಲ್ಲಾಜಾರ್ ಮತ್ತು ಈತಾಮಾರ್ ಕುಟುಂಬದವರಿಗೆ ಯಾಜಕೋದ್ಯೋಗವನ್ನು ಮಾಡುವಂತೆ ವರ್ಗಗಳಾಗಿ ಪ್ರತ್ಯೇಕಿಸಿ ಕೆಲಸಗಳನ್ನು ನೇಮಿಸಿದರು.


ದಾವೀದನು ಅವರಿಗೆ, “ನೀವು ಲೇವಿಕುಲದ ನಾಯಕರು. ನೀವೂ ಉಳಿದ ಲೇವಿಯರೂ ನಿಮ್ಮನ್ನು ಶುದ್ಧಪಡಿಸಿಕೊಳ್ಳಬೇಕು. ಅನಂತರ ಇಸ್ರೇಲಿನ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನಾನು ಅದಕ್ಕಾಗಿ ಸಿದ್ಧಮಾಡಿರುವ ಸ್ಥಳಕ್ಕೆ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು