Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:8 - ಪರಿಶುದ್ದ ಬೈಬಲ್‌

8 ಯಾಜಕನಾದ ಯೆಹೋಯಾದನು ಆಜ್ಞಾಪಿಸಿದಂತೆ ಲೇವಿಯರೂ ಯೆಹೂದದ ಜನರೂ ಮಾಡಿದರು. ಆದ್ದರಿಂದ ಪ್ರತಿಯೊಬ್ಬ ಸೇನಾಧಿಪತಿಯು ತನ್ನ ಕೈ ಕೆಳಗೆ ಸಬ್ಬತ್‌ದಿನದಲ್ಲಿ ಕೆಲಸಮಾಡಲು ಹೋಗುತ್ತಿದ್ದವರನ್ನು ಮತ್ತು ಸಬ್ಬತ್ ದಿನದ ಕೆಲಸ ಮುಗಿಸಿಕೊಂಡು ಬರುತ್ತಿದ್ದವರನ್ನು ಕೂಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಲೇವಿಯ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ ದಿನದಲ್ಲಿ ಸೇವಾ ವಿಮುಕ್ತರಾದ ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್ ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಸೇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಲೇವಿಯರೂ ಎಲ್ಲ ಯೆಹೂದ್ಯರೂ ಯಾಜಕ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್‍ದಿನದಲ್ಲಿ ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್‍ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈ ಕೆಳಗಿನವರನ್ನು ಕೂಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಲೇವಿಯರೂ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು [ಸಬ್ಬತ್ ದಿವಸದಲ್ಲಿ ಸೇವಾ ವಿಮುಕ್ತರಾದ] ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದದರಿಂದ ಪ್ರತಿಯೊಬ್ಬನು ಸಬ್ಬತ್‍ದಿವಸ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಕೂಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೀಗೆಯೇ ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಪ್ರಕಾರ ಲೇವಿಯರೂ ಸಮಸ್ತ ಯೆಹೂದದವರೂ ಮಾಡಿದರು. ಪ್ರತಿ ಮನುಷ್ಯನು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಬರತಕ್ಕ ಸಿಪಾಯಿಗಳನ್ನು ಕೂಡಿಸಿಕೊಂಡನು. ಏಕೆಂದರೆ ಯಾಜಕನಾದ ಯೆಹೋಯಾದನು ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:8
7 ತಿಳಿವುಗಳ ಹೋಲಿಕೆ  

ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಸಂಗತಿಗಳಿಗೆಲ್ಲ ಸೇನಾಧಿಪತಿಗಳು ವಿಧೇಯರಾಗಿದ್ದರು. ಪ್ರತಿಯೊಬ್ಬ ಸೇನಾಧಿಪತಿಯೂ ತನ್ನ ಕಾವಲುಗಾರರನ್ನು ಅಂದರೆ ಸಬ್ಬತ್‌ದಿನದಂದು ಕಾಯಲು ಬರಬೇಕಾಗಿದ್ದ ಮತ್ತು ಸಬ್ಬತ್‌ದಿನದಂದು ಕೆಲಸದಿಂದ ಹೋಗಬೇಕಾಗಿದ್ದ ಸಿಪಾಯಿಗಳನ್ನು ಕರೆದೊಯ್ದನು. ಅವರೆಲ್ಲರೂ ಯಾಜಕನಾದ ಯೆಹೋಯಾದಾವನ ಹತ್ತಿರಕ್ಕೆ ಹೋದರು.


ಗ್ರಾಮಗಳಲ್ಲಿ ನೆಲೆಸಿದ ದ್ವಾರಪಾಲಕರ ಕುಟುಂಬದವರು ತಮ್ಮ ಸರದಿಗನುಗುಣವಾಗಿ ಏಳು ದಿವಸದ ಕರ್ತವ್ಯ ಮುಗಿಸಿಹೋಗುತ್ತಿದ್ದರು.


ಲೇವಿಯರು ಅರಸನ ಸುತ್ತಲೂ ನಿಂತಿರಬೇಕು. ಪ್ರತಿಯೊಬ್ಬರು ತಮ್ಮ ಖಡ್ಗವನ್ನು ಹಿಡಿದವರಾಗಿರಬೇಕು. ಯಾರಾದರೂ ಆಲಯದೊಳಕ್ಕೆ ಪ್ರವೇಶಿಸಿದರೆ ಅವನನ್ನು ಸಾಯಿಸಿರಿ. ರಾಜನು ಹೋಗುವ ಸ್ಥಳಗಳಲ್ಲಿ ನೀವು ಅವನೊಂದಿಗೆಯೇ ಇರಬೇಕು.”


ಯಾಜಕನಾದ ಯೆಹೋಯಾದನು ಅವರಿಗೆ ಬರ್ಜಿಯನ್ನೂ ದೊಡ್ಡ ಮತ್ತು ಚಿಕ್ಕ ಗುರಾಣಿಗಳನ್ನೂ ಕೊಟ್ಟನು. ಅವು ರಾಜನಾದ ದಾವೀದನಿಗೆ ಸೇರಿದವುಗಳಾಗಿದ್ದವು. ಅವು ದೇವಾಲಯದೊಳಗೆ ಇಡಲ್ಪಟ್ಟಿದ್ದವು.


ಹದಿನೆಂಟನೆಯದಾಗಿ, ಹನಾನೀಯ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.


ದಾವೀದನು ದೇವಾಲಯಕ್ಕೋಸ್ಕರ ಸಂಗ್ರಹಿಸಿದ ಎಲ್ಲಾ ವಸ್ತುಗಳಿಗೆ ಶೆಲೋಮೋತನೂ ಅವನ ಸಂಬಂಧಿಕರೂ ಅಧಿಕಾರಿಗಳಾಗಿದ್ದರು. ಸೈನ್ಯಾಧಿಕಾರಿಗಳು ದೇವಾಲಯವನ್ನು ಕಟ್ಟಲು ಸಾಮಾಗ್ರಿಗಳನ್ನು ಒದಗಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು