Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:13 - ಪರಿಶುದ್ದ ಬೈಬಲ್‌

13 ಕೆಲಸಗಳ ಮೇಲ್ವಿಚಾರಣೆ ಮಾಡುವವರು ನಂಬಿಗಸ್ತರಾಗಿದ್ದರು. ದೇವಾಲಯವನ್ನು ಸರಿಪಡಿಸುವ ಯೋಜನೆಯು ಪೂರ್ಣಗೊಂಡಿತು. ಅವರು ಅದನ್ನು ಮುಂಚೆ ಹೇಗಿತ್ತೋ ಹಾಗೆಯೇ ಮಾಡಿದರು; ಅಲ್ಲದೆ ಅದಕ್ಕಿಂತಲೂ ಹೆಚ್ಚು ಭದ್ರಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೆಲಸ ಮಾಡುವವರು ಆಸಕ್ತಿಯಿಂದ ಜೀರ್ಣೋದ್ಧಾರದ ಕೆಲಸವನ್ನು ಮಾಡಿ ಮುಗಿಸಿದರು. ಹೀಗೆ ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕೆಲಸ ಮಾಡುವವರು ಬಹು ಶ್ರಮವಹಿಸಿದ್ದರಿಂದ ದುರಸ್ತಿ ಕೆಲಸ ಮುಂದುವರೆಯಿತು. ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕೆಲಸಮಾಡುವವರು ಬಹುಪ್ರಯಾಸ ಪಡುತ್ತಿದ್ದದರಿಂದ ಜೀರ್ಣೋದ್ಧಾರದ ಕೆಲಸವು ಮುಂದರಿಯಿತು. ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೀಗೆ ಕೆಲಸದವರು ಕೆಲಸವನ್ನು ನಡೆಸಿದ್ದರಿಂದ, ಕೆಲಸವು ಅವರ ಕೈಯಿಂದ ಪೂರ್ಣವಾಯಿತು. ಅವರು ಯೆಹೋವ ದೇವರ ಆಲಯವನ್ನು ಮೊದಲಿದ್ದ ಸ್ಥಿತಿಗೆ ಅದನ್ನು ತಂದು ಭದ್ರಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:13
7 ತಿಳಿವುಗಳ ಹೋಲಿಕೆ  

‘ನಿಮ್ಮಲ್ಲಿ ಎಷ್ಟು ಮಂದಿ ಹೊಸ ಆಲಯವನ್ನು ನೋಡುವಾಗ ಕೆಡವಲ್ಪಟ್ಟ ಮೊದಲನೇ ಆಲಯದ ಸೌಂದರ್ಯವನ್ನೂ ಗಾಂಭೀರ್ಯವನ್ನೂ ನೆನಪು ಮಾಡುತ್ತೀರಿ? ನಿಮ್ಮ ಆಲೋಚನೆಯೇನು? ಮೊದಲಿನ ಆಲಯದೊಡನೆ ಈ ಆಲಯವನ್ನು ಹೋಲಿಸಿದಾಗ ಇದು ಏನೂ ಅಲ್ಲವೆಂದು ತೋರುತ್ತದೋ?


ಸನ್ಬಲ್ಲಟನು, ಟೋಬೀಯನು, ಅರಬಿಯರು, ಅಮ್ಮೋನಿಯರು ಮತ್ತು ಅಷ್ಡೋದಿನವರು ತುಂಬಾ ಕೋಪಗೊಂಡಿದ್ದರು. ಯಾಕೆಂದರೆ ಜೆರುಸಲೇಮಿನ ಗೋಡೆಯ ಕೆಲಸ ಮುಂದುವರಿಯುತ್ತಿದೆಯೆಂದೂ ಮತ್ತು ಗೋಡೆಗಳ ಕಿಂಡಿಗಳನ್ನು ರಿಪೇರಿ ಮಾಡಲಾಗುತ್ತಿದೆಯೆಂದೂ ಅವರು ಕೇಳಿದ್ದರು.


ದಾವೀದನು, “ನಾವು ನಮ್ಮ ದೇವರಿಗೆ ಮಹಾದೊಡ್ಡ ಆಲಯವನ್ನು ಕಟ್ಟಿಸಬೇಕು. ಆದರೆ ನನ್ನ ಮಗನಾದ ಸೊಲೊಮೋನನು ಇನ್ನೂ ಎಳೆಪ್ರಾಯದವನು; ಅವನು ಕಲಿಯ ಬೇಕಾದದ್ದು ಇನ್ನೂ ಬೇಕಾದಷ್ಟಿದೆ. ದೇವಾಲಯವು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗಿದ್ದು ಅದರ ಸೌಂದರ್ಯ ಮತ್ತು ವಿನ್ಯಾಸವು ಹೆಸರುವಾಸಿಯಾಗಿರಬೇಕು. ಅದಕ್ಕಾಗಿಯೇ ನಾನು ಆ ದೇವಾಲಯಕ್ಕಾಗಿ ಸಮಸ್ತವನ್ನು ಸಿದ್ಧಪಡಿಸುತ್ತೇನೆ” ಅಂದುಕೊಂಡನು. ಅಲ್ಲದೆ ಅವನು ಸಾಯುವುದಕ್ಕಿಂತ ಮುಂಚೆ ದೇವಾಲಯವನ್ನು ಕಟ್ಟುವುದಕ್ಕೆ ಬೇಕಾಗಿರುವವುಗಳನ್ನೆಲ್ಲಾ ಕೂಡಿಸಿಟ್ಟನು.


ಯೆಹೋಯಾದನು ಮತ್ತು ರಾಜನು ದೇವಾಲಯವನ್ನು ದುರಸ್ತಿ ಮಾಡುವವರ ಕೈಗೆ ಅದನ್ನು ಕೊಟ್ಟರು. ಅವರು ಮರದ ಕುಶಲಕರ್ಮಿಗಳನ್ನೂ ಬಡಗಿಗಳನ್ನೂ ದೇವಾಲಯವನ್ನು ಸರಿಪಡಿಸಲು ನೇಮಿಸಿದರು. ಅಲ್ಲದೆ ತಾಮ್ರಕಬ್ಬಿಣಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನೂ ಕೆಲಸಕ್ಕೆ ನೇಮಿಸಿದರು.


ಕೆಲಸಗಾರರು ತಮ್ಮ ಕೆಲಸವು ಮುಗಿದ ಬಳಿಕ ಉಳಿದ ಹಣವನ್ನು ಅರಸನಾದ ಯೆಹೋವಾಷನಿಗೆ ಮತ್ತು ಯೆಹೋಯಾದನಿಗೆ ತಂದುಕೊಟ್ಟರು. ಆ ಹಣವನ್ನು ದೇವಾಲಯದ ಉಪಕರಣಗಳನ್ನು ಮಾಡಿಸಲು ಉಪಯೋಗಿಸಿದರು. ಅವು ದೇವಾಲಯದೊಳಗಿನ ಸೇವೆಗೂ ಸರ್ವಾಂಗಹೋಮಕ್ಕೂ ಉಪಯುಕ್ತವಾಗಿದ್ದವು. ಮಾತ್ರವಲ್ಲದೆ ಬೆಳ್ಳಿಬಂಗಾರಗಳಿಂದ ಬೋಗುಣಿ ಮತ್ತು ಇತರ ವಸ್ತುಗಳನ್ನು ಮಾಡಿದರು. ಯೆಹೋಯಾದನು ಜೀವದಿಂದಿರುವ ತನಕ ಪ್ರತೀ ದಿವಸ ಸರ್ವಾಂಗಹೋಮವನ್ನರ್ಪಿಸುತ್ತಿದ್ದನು.


ಆಗ ಆ ನಿಪುಣರೆಲ್ಲಾ ತಾವು ಮಾಡುತ್ತಿದ್ದ ಪವಿತ್ರಸ್ಥಳದ ಕೆಲಸವನ್ನು ಬಿಟ್ಟು ಮೋಶೆಯೊಡನೆ ಮಾತಾಡಲು ಹೋದರು. ಅವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು