2 ಪೂರ್ವಕಾಲ ವೃತ್ತಾಂತ 24:13 - ಪರಿಶುದ್ದ ಬೈಬಲ್13 ಕೆಲಸಗಳ ಮೇಲ್ವಿಚಾರಣೆ ಮಾಡುವವರು ನಂಬಿಗಸ್ತರಾಗಿದ್ದರು. ದೇವಾಲಯವನ್ನು ಸರಿಪಡಿಸುವ ಯೋಜನೆಯು ಪೂರ್ಣಗೊಂಡಿತು. ಅವರು ಅದನ್ನು ಮುಂಚೆ ಹೇಗಿತ್ತೋ ಹಾಗೆಯೇ ಮಾಡಿದರು; ಅಲ್ಲದೆ ಅದಕ್ಕಿಂತಲೂ ಹೆಚ್ಚು ಭದ್ರಪಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಕೆಲಸ ಮಾಡುವವರು ಆಸಕ್ತಿಯಿಂದ ಜೀರ್ಣೋದ್ಧಾರದ ಕೆಲಸವನ್ನು ಮಾಡಿ ಮುಗಿಸಿದರು. ಹೀಗೆ ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕೆಲಸ ಮಾಡುವವರು ಬಹು ಶ್ರಮವಹಿಸಿದ್ದರಿಂದ ದುರಸ್ತಿ ಕೆಲಸ ಮುಂದುವರೆಯಿತು. ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಕೆಲಸಮಾಡುವವರು ಬಹುಪ್ರಯಾಸ ಪಡುತ್ತಿದ್ದದರಿಂದ ಜೀರ್ಣೋದ್ಧಾರದ ಕೆಲಸವು ಮುಂದರಿಯಿತು. ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹೀಗೆ ಕೆಲಸದವರು ಕೆಲಸವನ್ನು ನಡೆಸಿದ್ದರಿಂದ, ಕೆಲಸವು ಅವರ ಕೈಯಿಂದ ಪೂರ್ಣವಾಯಿತು. ಅವರು ಯೆಹೋವ ದೇವರ ಆಲಯವನ್ನು ಮೊದಲಿದ್ದ ಸ್ಥಿತಿಗೆ ಅದನ್ನು ತಂದು ಭದ್ರಪಡಿಸಿದರು. ಅಧ್ಯಾಯವನ್ನು ನೋಡಿ |
ದಾವೀದನು, “ನಾವು ನಮ್ಮ ದೇವರಿಗೆ ಮಹಾದೊಡ್ಡ ಆಲಯವನ್ನು ಕಟ್ಟಿಸಬೇಕು. ಆದರೆ ನನ್ನ ಮಗನಾದ ಸೊಲೊಮೋನನು ಇನ್ನೂ ಎಳೆಪ್ರಾಯದವನು; ಅವನು ಕಲಿಯ ಬೇಕಾದದ್ದು ಇನ್ನೂ ಬೇಕಾದಷ್ಟಿದೆ. ದೇವಾಲಯವು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗಿದ್ದು ಅದರ ಸೌಂದರ್ಯ ಮತ್ತು ವಿನ್ಯಾಸವು ಹೆಸರುವಾಸಿಯಾಗಿರಬೇಕು. ಅದಕ್ಕಾಗಿಯೇ ನಾನು ಆ ದೇವಾಲಯಕ್ಕಾಗಿ ಸಮಸ್ತವನ್ನು ಸಿದ್ಧಪಡಿಸುತ್ತೇನೆ” ಅಂದುಕೊಂಡನು. ಅಲ್ಲದೆ ಅವನು ಸಾಯುವುದಕ್ಕಿಂತ ಮುಂಚೆ ದೇವಾಲಯವನ್ನು ಕಟ್ಟುವುದಕ್ಕೆ ಬೇಕಾಗಿರುವವುಗಳನ್ನೆಲ್ಲಾ ಕೂಡಿಸಿಟ್ಟನು.
ಕೆಲಸಗಾರರು ತಮ್ಮ ಕೆಲಸವು ಮುಗಿದ ಬಳಿಕ ಉಳಿದ ಹಣವನ್ನು ಅರಸನಾದ ಯೆಹೋವಾಷನಿಗೆ ಮತ್ತು ಯೆಹೋಯಾದನಿಗೆ ತಂದುಕೊಟ್ಟರು. ಆ ಹಣವನ್ನು ದೇವಾಲಯದ ಉಪಕರಣಗಳನ್ನು ಮಾಡಿಸಲು ಉಪಯೋಗಿಸಿದರು. ಅವು ದೇವಾಲಯದೊಳಗಿನ ಸೇವೆಗೂ ಸರ್ವಾಂಗಹೋಮಕ್ಕೂ ಉಪಯುಕ್ತವಾಗಿದ್ದವು. ಮಾತ್ರವಲ್ಲದೆ ಬೆಳ್ಳಿಬಂಗಾರಗಳಿಂದ ಬೋಗುಣಿ ಮತ್ತು ಇತರ ವಸ್ತುಗಳನ್ನು ಮಾಡಿದರು. ಯೆಹೋಯಾದನು ಜೀವದಿಂದಿರುವ ತನಕ ಪ್ರತೀ ದಿವಸ ಸರ್ವಾಂಗಹೋಮವನ್ನರ್ಪಿಸುತ್ತಿದ್ದನು.