Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:20 - ಪರಿಶುದ್ದ ಬೈಬಲ್‌

20 ಜೆಕರ್ಯನ ಮೇಲೆ ದೇವರಾತ್ಮನು ಬಂದನು. ಅವನು ಯಾಜಕನಾದ ಯೆಹೋಯಾದನ ಮಗ. ಜೆಕರ್ಯನು ಜನರ ಮುಂದೆ ನಿಂತು, “ಯೆಹೋವನು ಹೀಗೆನ್ನುತ್ತಾನೆ: ‘ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲು ನೀವು ಏಕೆ ನಿರಾಕರಿಸುತ್ತೀರಿ? ಏತಕ್ಕೆ? ನೀವು ಉದ್ಧಾರವಾಗುವುದಿಲ್ಲ. ನೀವು ಯೆಹೋವನನ್ನು ತೊರೆದದ್ದರಿಂದ ಆತನು ನಿಮ್ಮನ್ನೂ ತೊರೆದುಬಿಟ್ಟಿರುತ್ತಾನೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, “ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ಯಾಜಕ ಯೆಹೋಯಾದನ ಮಗ ಜೆಕರ್ಯನುದೇವಾತ್ಮನಿಂದ ಆವೇಶ ಉಳ್ಳವನಾದನು. ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು, “ದೇವರ ಮಾತನ್ನು ಕೇಳಿರಿ; ನೀವೇಕೆ ಸರ್ವೇಶ್ವರನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ನಾಶಮಾಡಿಕೊಳ್ಳುತ್ತೀರಿ? ನೀವು ಸರ್ವೇಶ್ವರಸ್ವಾಮಿಯನ್ನು ಬಿಟ್ಟದ್ದರಿಂದ ಅವರೂ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವಾತ್ಮಾವೇಶವುಳ್ಳವನಾದನು; ಆಗ ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು ಅವರಿಗೆ - ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ ನಿಮ್ಮನ್ನು ಕೆಡಿಸಿಕೊಳ್ಳುವದೇಕೆ? ನೀವು ಯೆಹೋವನನ್ನು ಬಿಟ್ಟದ್ದರಿಂದ ಆತನೂ ನಿಮ್ಮನ್ನು ಬಿಟ್ಟಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ದೇವರ ಆತ್ಮ ಯಾಜಕ ಯೆಹೋಯಾದಾವನ ಮಗನಾದ ಜೆಕರ್ಯನ ಮೇಲೆ ಬಂದು, ಅವನು ಜನರ ಮುಂದೆ ನಿಂತು ಅವರಿಗೆ, “ನೀವು ವೃದ್ಧಿ ಹೊಂದಕೂಡದ ಹಾಗೆ ಯೆಹೋವ ದೇವರ ಆಜ್ಞೆಗಳನ್ನು ಮೀರುವುದೇನು? ನಿಮಗೆ ಶುಭವಾಗುವುದಿಲ್ಲ. ನೀವು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ದೇವರು ಸಹ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:20
24 ತಿಳಿವುಗಳ ಹೋಲಿಕೆ  

ಆದರೆ ಮೋಶೆ ಅವರಿಗೆ, “ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ನೀವು ಯಶಸ್ವಿಯಾಗುವುದಿಲ್ಲ.


ಯೆಹೂದದ ಜನರೇ, ನೀವು ತಪ್ಪುಗಳನ್ನು ಮಾಡಿರುವಿರಿ. ಆದ್ದರಿಂದಲೇ ಮಳೆಬೆಳೆಗಳು ಆಗಿಲ್ಲ. ನಿಮ್ಮ ಪಾಪಗಳಿಂದಾಗಿ ಯೆಹೋವನ ಆ ಉತ್ತಮ ಕಾಣಿಕೆಗಳನ್ನು ನೀವು ಸವಿಯಲಾಗಲಿಲ್ಲ.


ಆಗ ಜೆಕರ್ಯನ ಮಗನಾದ ಯೆಹಜೀಯೇಲನ ಮೇಲೆ ಯೆಹೋವನ ಆತ್ಮನು ಬಂದನು. ಜೆಕರ್ಯನು ಬೆನಾಯನ ಮಗ. ಬೆನಾಯನು ಯೆಗೀಯೇಲನ ಮಗ. ಯೆಗೀಯೇಲನು ಮತ್ತನ್ಯನ ಮಗ. ಯೆಹಜೀಯೇಲನು ಲೇವಿಯನಾಗಿದ್ದನು ಮತ್ತು ಆಸಾಫನ ಸಂತತಿಯವನಾಗಿದ್ದನು.


“ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು.


ಮೂವತ್ತು ಮಂದಿ ಶೂರರ ನಾಯಕನಾದ ಅಮಾಸೈಯು ಆತ್ಮನಿಂದ ತುಂಬಿದವನಾಗಿ ಹೇಳಿದ್ದೇನೆಂದರೆ: “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನಗೆ ಸೇರಿದವರು; ನಿನಗೆ ಸಮಾಧಾನ ಕೋರುವವರು; ನಿನಗೆ ಸಹಾಯ ಮಾಡುವವರಿಗೆ ಸಮಾಧಾನ ಕೋರುವೆವು; ಯಾಕೆಂದರೆ ನಿನ್ನ ದೇವರು ನಿನಗೆ ಸಹಾಯಮಾಡುತ್ತಿದ್ದಾನೆ.” ದಾವೀದನು ಇವರನ್ನು ಸ್ವಾಗತಿಸಿ ತನ್ನ ಸೈನ್ಯಾಧಿಪತಿಗಳನ್ನಾಗಿ ಮಾಡಿದನು.


ಯೆಹೂದದ ಜನರು ನಿನ್ನನ್ನು, ‘ಯೆರೆಮೀಯನೇ, ನಮ್ಮ ದೇವರಾದ ಯೆಹೋವನು ನಮಗೆ ಇಂಥಾ ಕೇಡನ್ನು ಏಕೆ ಮಾಡಿದನು’ ಎಂದು ಕೇಳಬಹುದು. ಆಗ ಅವರಿಗೆ ಹೀಗೆ ಉತ್ತರಕೊಡು: ‘ಯೆಹೂದದ ಜನರಾದ ನೀವು ಯೆಹೋವನನ್ನು ತೊರೆದಿದ್ದೀರಿ, ನಿಮ್ಮ ದೇಶದಲ್ಲಿ ನೀವು ಅನ್ಯರ ವಿಗ್ರಹಗಳ ಸೇವೆ ಮಾಡುತ್ತಿದ್ದೀರಿ. ಆದ್ದರಿಂದಲೇ ನೀವು ಪರದೇಶದಲ್ಲಿ ಪರದೇಶಿಯರ ಸೇವೆಯನ್ನು ಮಾಡುವಿರಿ.’”


“ನಿನ್ನ ನಡತೆಯೂ ನಿನ್ನ ಕೃತ್ಯಗಳೂ ನಿನಗೆ ಈ ಕಷ್ಟವನ್ನು ತಂದವು. ನಿನ್ನ ದುಷ್ಟತನವೇ ನಿನ್ನ ಜೀವನವನ್ನು ಇಷ್ಟು ಕಷ್ಟಕರವನ್ನಾಗಿ ಮಾಡಿದೆ. ನಿನ್ನ ದುಷ್ಟತನವೇ ನಿನ್ನ ಮನಸ್ಸಿಗೆ ಆಳವಾದ ನೋವನ್ನು ಉಂಟುಮಾಡಿದೆ.”


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ಅವರು ರಾಜಕುಮಾರನನ್ನು ಹೊರತಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟರು. ಅವನ ಕೈಗೆ ಧರ್ಮಶಾಸ್ತ್ರದ ಪ್ರತಿಯನ್ನು ಕೊಟ್ಟು ಅವನನ್ನು ತಮ್ಮ ರಾಜನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಗಂಡುಮಕ್ಕಳೂ ಯೆಹೋವಾಷನನ್ನು ಅಭಿಷೇಕಿಸಿದರು. “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತು; ಅವನಿಗೆ ಹೆಚ್ಚಿನ ಶಕ್ತಿಯನ್ನು ಕೊಟ್ಟಿತು. ಅಬೀಯೇಜೆರನ ಗೋತ್ರದವರನ್ನು ತನ್ನನ್ನು ಹಿಂಬಾಲಿಸಲು ಕರೆಯುವುದಕ್ಕಾಗಿ ಗಿದ್ಯೋನನು ತುತ್ತೂರಿಯನ್ನು ಊದಿದನು.


ಹೇಬೆಲನನ್ನು ಕೊಂದದ್ದಕ್ಕಾಗಿಯೂ ಜಕರೀಯನನ್ನು ಕೊಂದದ್ದಕ್ಕಾಗಿಯೂ ನಿಮಗೆ ದಂಡನೆಯಾಗುವುದು. ಜಕರೀಯನನ್ನು ಯಜ್ಞವೇದಿ ಮತ್ತು ದೇವಾಲಯದ ನಡುವೆ ಕೊಲ್ಲಲಾಯಿತು. ಹೌದು, ಅವರೆಲ್ಲರ ಕೊಲೆಗಳಿಗಾಗಿ ಈಗ ಜೀವಿಸುತ್ತಿರುವ ನಿಮಗೆ ದಂಡನೆ ಆಗುವುದು.


ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು.


ಅರಾಮ್ಯರ ಸೈನ್ಯವು ಸ್ವಲ್ಪ ಮಂದಿಯಿಂದ ಕೂಡಿದ್ದರೂ ಯೆಹೂದದ ದೊಡ್ಡ ಸೈನ್ಯವನ್ನು ಸೋಲಿಸಿಬಿಟ್ಟಿತು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದುದರಿಂದ ದೇವರಾದ ಯೆಹೋವನು ಹಾಗೆ ಮಾಡಿದನು. ಈ ರೀತಿಯಾಗಿ ಯೆಹೋವಾಷನು ಶಿಕ್ಷಿಸಲ್ಪಟ್ಟನು.


ಆದ್ದರಿಂದ ಯೆಹೋವನು ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಬಹು ಕೋಪಗೊಂಡು ಅವರನ್ನು ಶಿಕ್ಷಿಸಿದನು. ಯೆಹೋವನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮಾಡಿದ್ದ ಸಂಗತಿಗಳನ್ನು ನೋಡಿದ ಅನ್ಯರು ಗೇಲಿ ಮಾಡುತ್ತ ವೈರತ್ವದಿಂದ ತಲೆಯಾಡಿಸಿದರು. ಇವೆಲ್ಲಾ ಸತ್ಯವೆಂದು ನಿಮಗೆ ತಿಳಿದದೆ. ಇದನ್ನು ನಿಮ್ಮ ಸ್ವಂತ ಕಣ್ಣುಗಳಿಂದ ನೋಡಿದ್ದೀರಿ.


ಯೆಹೋವನು ಹೀಗೆಂದನು, “ಯೆರೆಮೀಯನೇ, ಯೆಹೋವನ ಆಲಯದ ಅಂಗಳದಲ್ಲಿ ನಿಲ್ಲು, ಯೆಹೋವನ ಆಲಯದಲ್ಲಿ ಆರಾಧನೆಗೆಂದು ಬರುವ ಯೆಹೂದದ ಎಲ್ಲಾ ಜನರಿಗೆ ಈ ಸಂದೇಶವನ್ನು ತಿಳಿಸು. ನಾನು ನಿನಗೆ ತಿಳಿಸೆಂದು ಹೇಳುವ ಎಲ್ಲವನ್ನೂ ಅವರಿಗೆ ಹೇಳು. ನನ್ನ ಸಂದೇಶದ ಯಾವ ಭಾಗವನ್ನೂ ಬಿಡಬೇಡ.


ಆಗ ಪ್ರವಾದಿಯಾದ ಶೆಮಾಯನು, ಶೀಶಕನಿಗೆ ಹೆದರಿಕೊಂಡು ಜೆರುಸಲೇಮಿನಲ್ಲಿ ಒಟ್ಟಾಗಿ ಸೇರಿ ಬಂದಿದ್ದ ರೆಹಬ್ಬಾಮನ ಮತ್ತು ಇಸ್ರೇಲಿನ ಪ್ರಧಾನರ ಬಳಿಗೆ ಬಂದು, “ಯೆಹೋವನು ಹೇಳುವುದೇನೆಂದರೆ, ರೆಹಬ್ಬಾಮನೇ, ನೀನು ಮತ್ತು ಯೆಹೂದದ ಜನರು ನನ್ನನ್ನು ತೊರೆದಿದ್ದೀರಿ. ನನ್ನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದ್ದೀರಿ. ಈಗ ನಾನು ನಿಮಗೆ ಸಹಾಯ ಮಾಡದೆ ಶೀಶಕನನ್ನು ಎದುರಿಸಲು ನಿಮ್ಮನ್ನು ಬಿಟ್ಟುಬಿಡುವೆನು” ಎಂದು ಹೇಳಿದನು.


ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದ್ದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.


ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಕೃತ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆಮಾಡುವರು. ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು