Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:27 - ಪರಿಶುದ್ದ ಬೈಬಲ್‌

27 ಯೆಹೋವಾಷನ ಮಕ್ಕಳ ಚರಿತ್ರೆ, ಅವನ ವಿರುದ್ಧವಾಗಿ ಹೇಳಿದ ಪ್ರವಾದನೆಗಳು, ಅವನು ದೇವಾಲಯವನ್ನು ಸರಿಪಡಿಸಿದ ವಿಷಯಗಳು ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ಬರೆಯಲ್ಪಟ್ಟಿದೆ. ಯೆಹೋವಾಷನ ನಂತರ ಅವನ ಮಗನಾದ ಅಮಚ್ಯನು ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನ ಮಕ್ಕಳು ಅವನಿಗೆ ವಿರುದ್ಧವಾಗಿ ಹೇಳಲಾದ ಅನೇಕ ದೈವೋಕ್ತಿಗಳೂ, ಹಾಗು ದೇವಾಲಯದ ಜೀರ್ಣೋದ್ಧಾರ ವೃತ್ತಾಂತವು, ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ದಾಖಲಿಸಲಾಗಿದೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವನ ಮಕ್ಕಳ ವಿವರ, ಅವನಿಗೆ ವಿರುದ್ಧ ಹೇಳಲಾದ ಅನೇಕ ದೈವೋಕ್ತಿಗಳು ಹಾಗು ದೇವಾಲಯದ ದುರಸ್ತಿಯ ವೃತ್ತಾಂತ ಇವು ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗ ಅಮಚ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನ ಮಕ್ಕಳ ವಿವರವೂ ಅವನಿಗೆ ವಿರುದ್ಧವಾಗಿ ಹೇಳಲ್ಪಟ್ಟ ಅನೇಕ ದೈವೋಕ್ತಿಗಳೂ ದೇವಾಲಯದ ಜೀರ್ಣೋದ್ಧಾರವೃತ್ತಾಂತವೂ ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ಅವನ ಪುತ್ರನನ್ನು ಕುರಿತೂ, ಅವನ ವಿರುದ್ಧ ನುಡಿದ ಪ್ರವಾದನೆಯ ಕುರಿತೂ, ದೇವರ ಆಲಯ ದುರಸ್ತು ಮಾಡುವುದನ್ನು ಕುರಿತೂ, ಅರಸರ ಚರಿತ್ರೆಯ ಪುಸ್ತಕದಲ್ಲಿ ಬರೆದಿರುತ್ತವೆ. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:27
10 ತಿಳಿವುಗಳ ಹೋಲಿಕೆ  

ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ರಾಜ್ಯಭಾರ ಮಾಡಿದನು. ಅವನ ತಾಯಿಯ ಹೆಸರು ಯೆಹೋವದ್ದಾನ್. ಆಕೆ ಜೆರುಸಲೇಮಿನವಳು.


ಯೆಹೋಯಾದನು ಮತ್ತು ರಾಜನು ದೇವಾಲಯವನ್ನು ದುರಸ್ತಿ ಮಾಡುವವರ ಕೈಗೆ ಅದನ್ನು ಕೊಟ್ಟರು. ಅವರು ಮರದ ಕುಶಲಕರ್ಮಿಗಳನ್ನೂ ಬಡಗಿಗಳನ್ನೂ ದೇವಾಲಯವನ್ನು ಸರಿಪಡಿಸಲು ನೇಮಿಸಿದರು. ಅಲ್ಲದೆ ತಾಮ್ರಕಬ್ಬಿಣಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನೂ ಕೆಲಸಕ್ಕೆ ನೇಮಿಸಿದರು.


ಯೆಹೋಷಾಫಾಟನು ಆರಂಭದಿಂದ ಕೊನೆಯವರೆಗೂ ಮಾಡಿದ ಬೇರೆ ಕಾರ್ಯಗಳು, ಹನಾನೀಯನ ಮಗನಾದ ಯೇಹು ಬರೆದ ಇಸ್ರೇಲ್ ರಾಜರ ಗ್ರಂಥದಲ್ಲಿ ದಾಖಲಾಗಿವೆ.


ಆಸನು ಪ್ರಾರಂಭದಿಂದ ಕೊನೆಯವರೆಗೆ ಮಾಡಿದ ಎಲ್ಲಾ ವಿಷಯಗಳು ಯೆಹೂದ ಮತ್ತು ಇಸ್ರೇಲ್ ರಾಜರ ಗ್ರಂಥದಲ್ಲಿ ಬರೆಯಲ್ಪಟ್ಟಿವೆ.


ಅಬೀಯನು ಮಾಡಿದ ಎಲ್ಲಾ ಕಾರ್ಯಗಳ ಕುರಿತು ಪ್ರವಾದಿ ಇದ್ದೋ ಬರೆದ ಪುಸ್ತಕದಲ್ಲಿ ದಾಖಲಾಗಿವೆ.


ಸೊಲೊಮೋನನು ಪ್ರಾರಂಭದಿಂದ ಅಂತ್ಯದ ತನಕ ಮಾಡಿದ ಎಲ್ಲಾ ವಿಷಯಗಳನ್ನು ಪ್ರವಾದಿಯಾದ ನಾತಾನನು ಬರೆದ ಲೇಖನಗಳಲ್ಲಿಯೂ, ಶೀಲೋವದ ಅಹೀಯನ ಪ್ರವಾದನೆಯಲ್ಲಿಯೂ ಮತ್ತು ದೇವದರ್ಶಿಯಾದ ಇದ್ದೋವಿನ ದರ್ಶನಗಳ ಪುಸ್ತಕದಲ್ಲಿಯೂ ಬರೆಯಲಾಗಿದೆ. ದೇವದರ್ಶಿಯಾದ ಇದ್ದೋ, ನೆಬಾಟನ ಮಗನಾದ ಯಾರೊಬ್ಬಾಮನ ವಿಷಯವಾಗಿಯೂ ಬರೆದಿದ್ದಾನೆ.


ಯೆಹೋವಾಷನ ಮಗನು ಅಮಚ್ಯ. ಅಮಚ್ಯನ ಮಗನು ಅಜರ್ಯ. ಅಜರ್ಯನ ಮಗನು ಯೋತಾಮ್.


ಶಿಮೆಯಾತನ ಮಗನಾದ ಯೋಜಾಕಾರನು ಮತ್ತು ಶೋಮೇರನ ಮಗನಾದ ಯೆಹೋಜಾಬಾದನು ಯೆಹೋವಾಷನ ಅಧಿಕಾರಿಗಳಾಗಿದ್ದರು. ಅವರು ಯೆಹೋವಾಷನನ್ನು ಕೊಂದರು. ಜನರು ಯೆಹೋವಾಷನನ್ನು ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಯೆಹೋವಾಷನ ನಂತರ ಅವನ ಮಗನಾದ ಅಮಚ್ಯನು ನೂತನ ರಾಜನಾದನು.


ಯೆಹೋಷಾಫಾಟ್, ಯೆಹೋರಾಮ್ ಮತ್ತು ಅಹಜ್ಯರು ಯೆಹೂದದ ರಾಜರಾಗಿದ್ದರು. ಅವರೆಲ್ಲ ಯೆಹೋವಾಷನ ಪೂರ್ವಿಕರು. ಅವರು ಅನೇಕ ವಸ್ತುಗಳನ್ನು ಯೆಹೋವನಿಗೆ ಕೊಟ್ಟಿದ್ದರು. ಅವುಗಳನ್ನೆಲ್ಲ ಆಲಯದಲ್ಲಿ ಇಟ್ಟಿದ್ದರು. ಯೆಹೋವಾಷನೂ ಯೆಹೋವನಿಗೆ ಅನೇಕ ವಸ್ತುಗಳನ್ನು ಕೊಟ್ಟಿದ್ದನು. ಯೆಹೋವಾಷನು ಅವುಗಳ ಜೊತೆಗೆ, ಆಲಯದಲ್ಲಿದ್ದ ಮತ್ತು ತನ್ನ ಮನೆಯಲ್ಲಿದ್ದ ಬಂಗಾರವನ್ನೆಲ್ಲ ತೆಗೆದುಕೊಂಡನು. ನಂತರ ಯೆಹೋವಾಷನು ಆ ಬೆಲೆಬಾಳುವ ವಸ್ತುಗಳನ್ನೆಲ್ಲ ಅರಾಮ್ಯರ ರಾಜನಾದ ಹಜಾಯೇಲನಿಗೆ ಕಳುಹಿಸಿದನು. ಆದ್ದರಿಂದ ಹಜಾಯೇಲನು ಜೆರುಸಲೇಮಿನ ವಿರುದ್ಧ ಯುದ್ಧಮಾಡದೆ ಹೊರಟುಹೋದನು.


ಯೆಹೋವಾಷನನ್ನು ಕೊಲ್ಲಲು ಸಂಚುಮಾಡಿದ ಸೇವಕರು ಯಾರೆಂದರೆ: ಜಾಬಾದ್ ಮತ್ತು ಯೆಹೋಜಾಬಾದ್, ಜಾಬಾದನ ತಾಯಿಯ ಹೆಸರು ಶಿಮ್ಗಾತ್, ಈಕೆ ಅಮ್ಮೋನಿಯಳು. ಯೆಹೋಜಾಬಾದನ ತಾಯಿಯು ಶಿಮ್ರೀತ್ ಎಂಬಾಕೆ, ಈಕೆ ಮೋವಾಬ್ಯಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು