Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:7 - ಪರಿಶುದ್ದ ಬೈಬಲ್‌

7 ಗತಿಸಿದ ವರ್ಷಗಳಲ್ಲಿ ಅತಲ್ಯಳ ಮಕ್ಕಳು ದೇವಾಲಯದೊಳಗೆ ಬಲಾತ್ಕಾರದಿಂದ ನುಗ್ಗಿ ಅಲ್ಲಿದ್ದ ಪವಿತ್ರ ವಸ್ತುಗಳನ್ನು ತೆಗೆದು ಬಾಳ್ ದೇವರ ಪೂಜೆಗಾಗಿ ಉಪಯೋಗಿಸಿದ್ದರು. ಅತಲ್ಯಳು ಬಹಳ ದುಷ್ಟಳಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳನಿಗಾಗಿ ಕೊಟ್ಟು ಬಿಟ್ಟಿದ್ದಾರಲ್ಲಾ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಸರ್ವೇಶ್ವರನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳ್‍ದೇವತೆಗಳಿಗಾಗಿ ಕೊಟ್ಟುಬಿಟ್ಟಿದ್ದಾರಲ್ಲವೇ?,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅತಿ ದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳ್‍ದೇವತೆಗಳಿಗೋಸ್ಕರ ಕೊಟ್ಟುಬಿಟ್ಟರಲ್ಲಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆ ದುಷ್ಟ ಸ್ತ್ರೀಯಾದ ಅತಲ್ಯಳ ಪುತ್ರರು ಯೆಹೋವ ದೇವರ ಆಲಯವನ್ನು ಒಡೆದುಬಿಟ್ಟು, ಯೆಹೋವ ದೇವರ ಆಲಯಕ್ಕೆ ಪ್ರತಿಷ್ಠೆ ಮಾಡಿದವುಗಳನ್ನೆಲ್ಲಾ ಬಾಳನಿಗೆ ಕೊಟ್ಟುಬಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:7
18 ತಿಳಿವುಗಳ ಹೋಲಿಕೆ  

ಅವರು ಬಂದು ಯೆಹೂದದೇಶದ ಮೇಲೆ ಆಕ್ರಮಣ ಮಾಡಿದರು; ರಾಜನಿವಾಸದಲ್ಲಿದ್ದ ನಿಕ್ಷೇಪವನ್ನೆಲ್ಲಾ ಸೂರೆಮಾಡಿದರು. ಅಲ್ಲದೆ ಯೆಹೋರಾಮನ ಪತ್ನಿ, ಮಕ್ಕಳನ್ನೂ ಕೊಂಡೊಯ್ದರು. ಯೆಹೋರಾಮನ ಕೊನೆಯ ಮಗನು ಮಾತ್ರ ಉಳಿದನು. ಅವನ ಹೆಸರು ಯೆಹೋವಾಹಾಜ.


ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.


ಅಧರ್ಮಸ್ವರೂಪನು ಕಾಣಿಸಿಕೊಳ್ಳುತ್ತಾನೆ. ಪ್ರಭುವಾದ ಯೇಸು ಅವನನ್ನು ತನ್ನ ಬಾಯಿಯ ಉಸಿರಿನಿಂದಲೇ ಕೊಲ್ಲುವನು; ತನ್ನ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಪಡಿಸುವನು.


“ಆಕೆಯು ಬಾಳನ ಸೇವೆಮಾಡಿದ್ದುದರಿಂದ ನಾನು ಆಕೆಯನ್ನು ಶಿಕ್ಷಿಸುವೆನು. ಬಾಳನಿಗೆ ಆಕೆ ಧೂಪ ಹಾಕಿದಳು. ಆಕೆ ವಸ್ತ್ರಾಭರಣಗಳಿಂದ ಭೂಷಿತಳಾಗಿ ಮೂಗುತಿಯನ್ನು ಧರಿಸಿಕೊಂಡು ತನ್ನ ಪ್ರೇಮಿಗಳ ಬಳಿಗೆ ಹೋದಳು. ನನ್ನನ್ನು ಮರೆತುಬಿಟ್ಟಳು.” ಇದು ಯೆಹೋವನು ಹೇಳಿದ ಮಾತು.


ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.


ನೀತಿವಂತರ ನೆನಪು ಆಶೀರ್ವಾದದಾಯಕ. ಕೆಡುಕರಾದರೋ ಬಹುಬೇಗನೆ ಮರೆಯಲ್ಪಡುವರು.


ಎಸ್ತೇರಳು ಉತ್ತರಿಸುತ್ತಾ, “ನಮ್ಮನ್ನು ದ್ವೇಷಿಸುವ ಮನುಷ್ಯನು ಈ ಕೆಟ್ಟ ಹಾಮಾನನೇ” ಎಂದು ಹೇಳಿದಳು. ಆಗ ಹಾಮಾನನು ಭಯದಿಂದ ನಡುಗಿದನು.


ಯೆಹೋವಾಷನು ಯಾಜಕರಿಗೆ, “ದೇವಾಲಯದಲ್ಲಿ ಬಹಳ ಹಣವಿದೆ. ಜನರು ಅನೇಕ ವಸ್ತುಗಳನ್ನು ಆಲಯಕ್ಕೆ ಕೊಟ್ಟಿದ್ದಾರೆ. ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಜನರು ಆಲಯದ ತೆರಿಗೆಯನ್ನು ಕೊಟ್ಟಿದ್ದಾರೆ. ಜನರು ತಮ್ಮ ಸ್ವ ಇಚ್ಛೆಯಿಂದ ಹಣವನ್ನು ಕೊಟ್ಟಿದ್ದಾರೆ. ಯಾಜಕರಾದ ನೀವು ಆ ಹಣವನ್ನು ತೆಗೆದುಕೊಂಡು, ಯೆಹೋವನ ಆಲಯವನ್ನು ಸರಿಪಡಿಸಿ. ಪ್ರತಿಯೊಬ್ಬ ಯಾಜಕನೂ ತಾನು ಜನರ ಸೇವೆಯಿಂದ ಪಡೆದ ಹಣವನ್ನು ಉಪಯೋಗಿಸಲೇಬೇಕು. ಅವನು ಆ ಹಣವನ್ನು ದೇವಾಲಯದ ಶಿಥಿಲತೆಯನ್ನು ಸರಿಪಡಿಸಲು ಉಪಯೋಗಿಸಲೇಬೇಕು” ಎಂದು ಹೇಳಿದನು.


ಇಸ್ರೇಲಿನ ಜನರು ದುಷ್ಕೃತ್ಯಗಳನ್ನು ಮಾಡಿದರು ಮತ್ತು ಸುಳ್ಳುದೇವರಾದ ಬಾಳನ ಸೇವೆ ಮಾಡಿದರು. ಯೆಹೋವನು ಇಸ್ರೇಲರ ಈ ದುಷ್ಕೃತ್ಯಗಳನ್ನು ನೋಡಿದನು.


ಸ್ವಲ್ಪಕಾಲವಾದ ಬಳಿಕ ಯೆಹೋವಾಷನು ದೇವಾಲಯವನ್ನು ಸರಿಪಡಿಸಲು ಆಲೋಚಿಸಿದನು.


ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗ ಸತ್ತದ್ದನ್ನು ನೋಡಿದಳು. ಅವಳು ಮೇಲೆದ್ದು ರಾಜನ ಕುಟುಂಬವನ್ನೆಲ್ಲ ಕೊಂದುಬಿಟ್ಟಳು.


ಅಹಾಬನು ಮತ್ತು ಅವನ ಕುಟುಂಬದವರು ಜೀವಿಸಿದ ಪ್ರಕಾರವೇ ಅಹಜ್ಯನೂ ಜೀವಿಸಿದನು. ದುಷ್ಕೃತ್ಯಗಳನ್ನು ಮಾಡಲು ಅವನ ತಾಯಿಯೇ ಅವನನ್ನು ಪ್ರೋತ್ಸಾಹಿಸಿದಳು.


ಈಗ ನಾನು ಆಕೆಯನ್ನು ಬಟ್ಟೆಯನ್ನು ಬಿಚ್ಚಿಹಾಕುವೆನು. ಆಕೆಯ ಬೆತ್ತಲೆತನವನ್ನು ಆಕೆಯ ಪ್ರಿಯತಮರೆಲ್ಲರೂ ನೋಡುವರು. ನನ್ನ ಕೈಯೊಳಗಿಂದ ಯಾರೂ ಆಕೆಯನ್ನು ರಕ್ಷಿಸಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು