Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:10 - ಪರಿಶುದ್ದ ಬೈಬಲ್‌

10 ಅಮಚ್ಯನು ಇಸ್ರೇಲಿನ ಸೈನಿಕರನ್ನು ಎಫ್ರಾಯೀಮ್ ಪ್ರಾಂತ್ಯಕ್ಕೆ ಕಳುಹಿಸಿದನು. ಅವರು ಯೆಹೂದದ ಅರಸನ ಮೇಲೆಯೂ ಜನರ ಮೇಲೆಯೂ ಸಿಟ್ಟುಗೊಂಡು ಕೋಪದಿಂದಲೇ ತಮ್ಮ ಮನೆಗಳಿಗೆ ಹಿಂತೆರಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಅಮಚ್ಯನು ಎಫ್ರಾಯೀಮ್ಯ ರಿಂದ ಬಂದ ಸೈನಿಕರನ್ನು ಬೇರೆ ಮಾಡಿ, ಅವರನ್ನು ಅವರ ದೇಶಕ್ಕೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಬಹಳ ಕೋಪಗೊಂಡು ತಮ್ಮ ದೇಶಕ್ಕೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಅಮಚ್ಯನು ಎಫ್ರಯಿಮರಿಂದ ಬಂದ ಸೈನಿಕರನ್ನು ಬೇರೆಮಾಡಿ, ಅವರನ್ನು ಅವರ ನಾಡಿಗೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಕಡುಕೋಪಗೊಂಡು, ಬಲುಸಿಟ್ಟಿನಿಂದ ತಮ್ಮ ನಾಡಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಅಮಚ್ಯನು ಎಫ್ರಾಯೀಮ್ಯರಿಂದ ಬಂದ ಸೈನಿಕರನ್ನು ಬೇರೆ ಮಾಡಿ ಅವರನ್ನು ಅವರ ದೇಶಕ್ಕೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಬಹುಕೋಪಗೊಂಡು ಬಲುಸಿಟ್ಟಿನಿಂದ ತಮ್ಮ ದೇಶಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಅಮಚ್ಯನು ಎಫ್ರಾಯೀಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವರನ್ನು ಕಳುಹಿಸಿಬಿಟ್ಟನು. ಆದಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪಗೊಂಡವರಾಗಿ ತಮ್ಮ ಮನೆಗೆ ತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:10
5 ತಿಳಿವುಗಳ ಹೋಲಿಕೆ  

ಕೋಪಿಷ್ಠನು ಜಗಳ ಎಬ್ಬಿಸುವನು. ಉದ್ರೇಕಗೊಂಡವನು ಅನೇಕ ಪಾಪಗಳನ್ನು ಮಾಡುವನು.


ನೀನು ಅವರಿಗೆ, ‘ನಿಮ್ಮ ಸೋದರರಾದ ಇಸ್ರೇಲರ ವಿರುದ್ಧ ನೀವು ಯುದ್ಧಕ್ಕೆ ಹೋಗಲೇಬಾರದೆಂದು ಯೆಹೋವನು ಹೇಳುತ್ತಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ಮನೆಗೆ ಹೋಗಬೇಕು. ಈ ಸಂಗತಿಗಳೆಲ್ಲ ಸಂಭವಿಸುವಂತೆ ನಾನೇ ಮಾಡಿದೆನು’ ಎಂದು ಹೇಳು” ಎಂಬುದಾಗಿ ತಿಳಿಸಿದನು. ಆದ್ದರಿಂದ ರೆಹಬ್ಬಾಮನ ಸೈನ್ಯದಲ್ಲಿನ ಜನರೆಲ್ಲರೂ ಯೆಹೋವನ ಆಜ್ಞೆಯನ್ನು ಅನುಸರಿಸಿದರು. ಅವರು ತಮ್ಮ ಮನೆಗಳಿಗೆ ಹೋದರು.


ಇಸ್ರೇಲರು, “ದಾವೀದನಲ್ಲಿ ನಾವು ಹತ್ತುಪಾಲನ್ನು ಹೊಂದಿದ್ದೇವೆ. ಆದ್ದರಿಂದ ದಾವೀದನ ಮೇಲೆ ನಿಮಗಿಂತಲೂ ನಮಗೆ ಹೆಚ್ಚಿನ ಹಕ್ಕಿದೆ. ಆದರೆ ನೀವು ನಮ್ಮನ್ನು ಕಡೆಗಣಿಸಿದ್ದೇಕೆ? ರಾಜನನ್ನು ಹಿಂದಕ್ಕೆ ಕರೆತರಲು ಮಾತಾನಾಡಿದವರಲ್ಲಿ ನಾವೇ ಮೊದಲಿಗರು” ಎಂದು ಉತ್ತರಿಸಿದರು. ಆದರೆ ಯೆಹೂದದ ಜನರು ಇಸ್ರೇಲರಿಗೆ ಕಟುವಾಗಿ ಉತ್ತರಿಸಿದರು. ಯೆಹೂದ ಜನರ ಮಾತುಗಳು ಇಸ್ರೇಲರ ಮಾತುಗಳಿಗಿಂತ ಹೆಚ್ಚು ಕಟುವಾಗಿದ್ದವು.


ಅಮಚ್ಯನು ಆ ದೇವರ ಮನುಷ್ಯನಿಗೆ, “ಹಾಗಾದರೆ, ನಾನು ಈಗಾಗಲೇ ಅವರಿಗೆ ಕೊಟ್ಟಿರುವ ಹಣಕ್ಕೇನು ಮಾಡಲಿ?” ಎಂದು ಕೇಳಿದನು. ದೇವರ ಮನುಷ್ಯನು ಉತ್ತರಿಸಿದ್ದೇನೆಂದರೆ, “ಯೆಹೋವನ ಬಳಿಯಲ್ಲಿ ಯಾವ ಕೊರತೆಯೂ ಇಲ್ಲ. ನಿನಗೆ ಅದಕ್ಕಿಂತ ಅಧಿಕವಾಗಿ ಕೊಡಲು ಆತನು ಶಕ್ತನಾಗಿದ್ದಾನೆ” ಎಂದು ಹೇಳಿದನು.


ಅಮಚ್ಯನು ಧೈರ್ಯಗೊಂಡು ತನ್ನ ಸೈನ್ಯವನ್ನು ಎದೋಮ್ ರಾಜ್ಯದ ಉಪ್ಪಿನ ಕಣಿವೆಗೆ ನಡಿಸಿದನು. ಆ ಸ್ಥಳದಲ್ಲಿ ಅವನ ಸೈನಿಕರು ಸೇಯೀರಿನ ಹತ್ತು ಸಾವಿರ ಮಂದಿಯನ್ನು ಕೊಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು