Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:11 - ಪರಿಶುದ್ದ ಬೈಬಲ್‌

11 ಅಮಚ್ಯನು ಧೈರ್ಯಗೊಂಡು ತನ್ನ ಸೈನ್ಯವನ್ನು ಎದೋಮ್ ರಾಜ್ಯದ ಉಪ್ಪಿನ ಕಣಿವೆಗೆ ನಡಿಸಿದನು. ಆ ಸ್ಥಳದಲ್ಲಿ ಅವನ ಸೈನಿಕರು ಸೇಯೀರಿನ ಹತ್ತು ಸಾವಿರ ಮಂದಿಯನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ಕಣಿವೆಗೆ ಹೋಗಿ, ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ವಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರಕೊಂಡು ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ವಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡೆಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ, ಅಲ್ಲಿ ಸೇಯೀರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:11
7 ತಿಳಿವುಗಳ ಹೋಲಿಕೆ  

ಅಮಚ್ಯನು ಉಪ್ಪಿನ ಕಣಿವೆಯಲ್ಲಿ ಹತ್ತುಸಾವಿರ ಎದೋಮ್ಯರನ್ನು ಕೊಂದುಹಾಕಿ ಅವರಿಂದ ಸೆಲ ದುರ್ಗವನ್ನು ವಶಪಡಿಸಿಕೊಂಡು ಅದನ್ನು “ಯೊಕ್ತೆಯೇಲ್” ಎಂದು ಕರೆದನು. ಆ ಸ್ಥಳಕ್ಕೆ ಇಂದಿಗೂ ಅದೇ ಹೆಸರಿದೆ.


ದೇವರೇ, ನೀನು ನಮ್ಮನ್ನು ಕೋಪದಿಂದ ಕೈಬಿಟ್ಟಿರುವೆ; ನಮ್ಮನ್ನು ನಾಶಗೊಳಿಸಿರುವೆ. ನಮ್ಮನ್ನು ಪುನರ್‌ಸ್ಥಾಪಿಸು.


ದಾವೀದನು ಉಪ್ಪಿನ ಕಣಿವೆಯಲ್ಲಿ ಹದಿನೆಂಟು ಸಾವಿರ ಎದೋಮ್ಯರನ್ನು ಸೋಲಿಸಿದನು. ಅವನು ಮನೆಗೆ ಹಿಂದಿರುಗುವಷ್ಟರಲ್ಲಿ ಪ್ರಸಿದ್ಧನಾಗಿದ್ದನು.


ಅಮಚ್ಯನು ಇಸ್ರೇಲಿನ ಸೈನಿಕರನ್ನು ಎಫ್ರಾಯೀಮ್ ಪ್ರಾಂತ್ಯಕ್ಕೆ ಕಳುಹಿಸಿದನು. ಅವರು ಯೆಹೂದದ ಅರಸನ ಮೇಲೆಯೂ ಜನರ ಮೇಲೆಯೂ ಸಿಟ್ಟುಗೊಂಡು ಕೋಪದಿಂದಲೇ ತಮ್ಮ ಮನೆಗಳಿಗೆ ಹಿಂತೆರಳಿದರು.


ಯೆಹೂದದ ಸೈನಿಕರು ಸೇಯೀರಿನ ಹತ್ತುಸಾವಿರ ಮಂದಿಯನ್ನು ಸೆರೆಹಿಡಿದರು. ಅವರನ್ನು ಒಂದು ಕಡಿದಾದ ಬೆಟ್ಟದ ಬದಿಗೊಯ್ದು ಅಲ್ಲಿಂದ ಅವರನ್ನು ಕೆಳಕ್ಕೆ ದೂಡಿದರು. ಅವರು ಕೆಳಗೆ ಬಂಡೆಗೆ ಅಪ್ಪಳಿಸಿದಾಗ ಅವರ ದೇಹಗಳು ಚೂರುಚೂರಾದವು.


ಯೆಹೋವನು ಅಮಚ್ಯನ ಮೇಲೆ ಸಿಟ್ಟುಗೊಂಡನು. ಅವನ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ಅಮಚ್ಯನೇ, ಆ ಜನರು ಪೂಜಿಸುವ ವಿಗ್ರಹಗಳಿಗೇಕೆ ನೀನು ಪೂಜೆ ಮಾಡುವೆ? ತಮ್ಮನ್ನು ಪೂಜಿಸುವವರನ್ನು ಆ ದೇವರುಗಳು ನಿನ್ನಿಂದ ಕಾಪಾಡಲಾರದೆ ಹೋದವು” ಎಂದು ಹೇಳಿದನು.


ನಿನ್ನ ಹೆಚ್ಚಳಿಕೆಯು ನಿನ್ನನ್ನು ಮರುಳುಗೊಳಿಸಿತು. ನೀನು ಎತ್ತರವಾದ ಬೆಟ್ಟದಂಚಿನ ಗುಹೆಗಳಲ್ಲಿ ವಾಸಿಸುವೆ. ನಿನ್ನ ಮನೆಯು ಪರ್ವತಗಳಲ್ಲಿದೆ. ಆದ್ದರಿಂದ ನೀನು ನಿನ್ನಲ್ಲಿ ಹೇಳಿಕೊಳ್ಳುವದೇನೆಂದರೆ, ‘ಯಾರೂ ನನ್ನನ್ನು ಕೆಳಗೆ ಭೂಮಿಯ ಮೇಲೆ ಇಳಿಸಲಾರರು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು