2 ಪೂರ್ವಕಾಲ ವೃತ್ತಾಂತ 25:15 - ಪರಿಶುದ್ದ ಬೈಬಲ್15 ಯೆಹೋವನು ಅಮಚ್ಯನ ಮೇಲೆ ಸಿಟ್ಟುಗೊಂಡನು. ಅವನ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ಅಮಚ್ಯನೇ, ಆ ಜನರು ಪೂಜಿಸುವ ವಿಗ್ರಹಗಳಿಗೇಕೆ ನೀನು ಪೂಜೆ ಮಾಡುವೆ? ತಮ್ಮನ್ನು ಪೂಜಿಸುವವರನ್ನು ಆ ದೇವರುಗಳು ನಿನ್ನಿಂದ ಕಾಪಾಡಲಾರದೆ ಹೋದವು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ನಿನ್ನ ಕೈಯಿಂದ ನಿನ್ನ ಜನರನ್ನು ರಕ್ಷಿಸಲಾರದೆ ಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗ ಸರ್ವೇಶ್ವರ ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಹೇಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ - ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಭಕ್ತಿಯನ್ನೇಕೆ ಇಟ್ಟಿದ್ದೀ ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದಕಾರಣ ಯೆಹೋವ ದೇವರ ಕೋಪವು ಅಮಚ್ಯನ ಮೇಲೆ ಬಂತು. ದೇವರು ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿದರು. ಪ್ರವಾದಿಯು ಅರಸನಿಗೆ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆ ಹೋದ ದೇವರುಗಳನ್ನು ನೀನು ವಿಚಾರಿಸುವುದೇನು?” ಎಂದನು. ಅಧ್ಯಾಯವನ್ನು ನೋಡಿ |
ಆಗ ಯೆಹೋವನ ಪ್ರವಾದಿಯವರಲ್ಲೊಬ್ಬನು ಅಲ್ಲಿದ್ದನು. ಅವನ ಹೆಸರು ಓದೇದ್. ಓದೇದನು ಸಮಾರ್ಯಕ್ಕೆ ಬರುತ್ತಿದ್ದ ಇಸ್ರೇಲ್ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದದ ಜನರು ಸೋತುಹೋಗುವಂತೆ ಮಾಡಿದನು. ಯಾಕೆಂದರೆ ಆತನು ಅವರ ಮೇಲೆ ಸಿಟ್ಟಿಗೆದ್ದಿದ್ದನು. ನೀವು ಯೆಹೂದದ ಜನರನ್ನು ನಿಷ್ಕರುಣೆಯಿಂದ ಕೊಂದುಹಾಕಿದಿರಿ. ಈಗ ದೇವರು ನಿಮ್ಮ ಮೇಲೆ ಕೋಪಗೊಂಡಿದ್ದಾನೆ.