Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:13 - ಪರಿಶುದ್ದ ಬೈಬಲ್‌

13 ಅವರು ಕುಟುಂಬದ ನಾಯಕರಾಗಿದ್ದು ಅವರ ಅಧೀನದಲ್ಲಿ ಯುದ್ಧವೀರರಾದ ಮೂರು ಲಕ್ಷದ ಏಳು ಸಾವಿರದ ಐನೂರು ಸೈನಿಕರಿದ್ದರು. ಇವರು ವೈರಿಯೊಂದಿಗೆ ಕಾದಾಡಿ ಅರಸನಿಗೆ ಜಯಗಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇವರ ಕೈಕೆಳಗಿದ್ದ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು ಅವನ ವೈರಿಗಳಿಗೆ ವಿರುದ್ಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇವರ ಕೈಕೆಳಗಿದ್ದ ಯೋಧರ ಸಂಖ್ಯೆ, ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು, ಅವನ ವೈರಿಗಳಿಗೆ ವಿರುದ್ಧ, ಪರಾಕ್ರಮದಿಂದ ಯುದ್ಧ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇವರ ಕೈಕೆಳಗಿರುವ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು ಅವನ ವೈರಿಗಳಿಗೆ ವಿರೋಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ 3,07,500 ಮಂದಿಯುಳ್ಳ ಸೈನ್ಯವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:13
9 ತಿಳಿವುಗಳ ಹೋಲಿಕೆ  

ಅಮಚ್ಯನು ಯೆಹೂದ ಪ್ರಾಂತ್ಯದ ಜನರನ್ನು ಒಟ್ಟುಗೂಡಿಸಿ ಅವರನ್ನು ಕುಟುಂಬಗಳಿಗನುಸಾರವಾಗಿ ವಿಭಾಗ ಮಾಡಿದನು. ಈ ಗುಂಪುಗಳಿಗೆ ಸಹಸ್ರಾಧಿಪತಿಗಳನ್ನು ಮತ್ತು ಶತಾಧಿಪತಿಗಳನ್ನು ನೇಮಿಸಿದನು. ಇವರು ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಗಳಲ್ಲಿ ಇಪ್ಪತ್ತು ವರ್ಷಕ್ಕಿಂತ ಮೇಲ್ಪಟ್ಟವರನ್ನು ಸೈನಿಕರನ್ನಾಗಿ ಆರಿಸಿದರು. ಒಟ್ಟು ಮೂರು ಲಕ್ಷ ಸೈನಿಕರು ಬರ್ಜಿ ಗುರಾಣಿಗಳೊಂದಿಗೆ ಯುದ್ಧ ಮಾಡಲು ನುರಿತರಾಗಿದ್ದರು.


ಆಸನ ಬಳಿ ಮೂರು ಲಕ್ಷ ಸೈನಿಕರಿದ್ದರು, ಯೆಹೂದಕುಲದ ಇವರು ಗುರಾಣಿಗಳನ್ನೂ ಬರ್ಜಿಗಳನ್ನೂ ಬಳಸಬಲ್ಲವರಾಗಿದ್ದರು. ಇವರಲ್ಲದೆ ಬೆನ್ಯಾಮೀನ್ ಕುಲದಿಂದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಸೈನಿಕರಿದ್ದರು. ಇವರು ಸಣ್ಣ ಗುರಾಣಿಗಳನ್ನೂ ಬಿಲ್ಲುಬಾಣಗಳನ್ನೂ ಬಳಸಬಲ್ಲವರಾಗಿದ್ದರು. ಇವರೆಲ್ಲರೂ ರಣವೀರರಾಗಿದ್ದರು.


ಅಬೀಯನ ಬಳಿ ನಾಲ್ಕು ಲಕ್ಷ ಮಂದಿ ವೀರ ಸೈನಿಕರಿದ್ದರು. ಅವನು ಸೈನ್ಯವನ್ನು ಯುದ್ಧದಲ್ಲಿ ಮುನ್ನಡೆಸಿದನು. ಯಾರೊಬ್ಬಾಮನ ಬಳಿಯಲ್ಲಿ ಎಂಟು ಲಕ್ಷ ಮಂದಿ ಸೈನಿಕರು ಇದ್ದರು. ಯಾರೊಬ್ಬಾಮನು ಅಬೀಯನ ಮೇಲೆ ಯುದ್ಧಕ್ಕೆ ತಯಾರಾದನು.


ರೆಹಬ್ಬಾಮನು ಜೆರುಸಲೇಮಿಗೆ ಬಂದು ಯೆಹೂದ ಮತ್ತು ಬೆನ್ಯಾಮೀನ್ ಕುಲದ ಒಂದು ಲಕ್ಷ ಎಂಭತ್ತುಸಾವಿರ ಮಂದಿ ನುರಿತ ಸೈನಿಕರನ್ನು ಒಟ್ಟು ಸೇರಿಸಿದನು. ಇಸ್ರೇಲರೊಂದಿಗೆ ಯುದ್ಧಮಾಡಿ ಅವರ ರಾಜ್ಯವನ್ನು ಮತ್ತೆ ಪಡೆದುಕೊಳ್ಳಬೇಕೆಂಬುದೇ ಅವನ ಉದ್ದೇಶವಾಗಿತ್ತು.


ರೆಹಬ್ಬಾಮನು ಬಲಾಢ್ಯನಾದ ರಾಜನಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ ನಂತರ ಅವನೂ ಯೆಹೂದದ ಜನರೂ ದೇವರಾದ ಯೆಹೋವನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದರು.


ಸೈನ್ಯಕ್ಕೆ ಒಟ್ಟು ಎರಡು ಸಾವಿರದ ಆರುನೂರು ಮಂದಿ ಸೇನಾಪತಿಗಳಿದ್ದರು.


ಉಜ್ಜೀಯನು ಸೈನಿಕರಿಗೆ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು ಮತ್ತು ಕವಣೆಗೆ ಕಲ್ಲುಗಳನ್ನು ಒದಗಿಸಿದನು.


ಆಸನು ಜನರಿಗೆ, “ನಾವು ಈ ಪಟ್ಟಣಗಳ ಸುತ್ತಲೂ ಕೋಟೆಯನ್ನು ಕಟ್ಟೋಣ; ಬುರುಜುಗಳನ್ನೂ ಕದಗಳನ್ನೂ ಭದ್ರಪಡಿಸೋಣ. ನಾವು ನಮ್ಮ ದೇವರಾದ ಯೆಹೋವನನ್ನು ಅನುಸರಿಸುವದರಿಂದ ಈ ದೇಶವು ನಮ್ಮದಾಗಿರುತ್ತದೆ. ಆದ್ದರಿಂದ ನಾವು ಹೀಗೆ ಮಾಡೋಣ. ಆತನು ನಮ್ಮ ಸುತ್ತಲೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು. ಅಂತೆಯೇ ಅವರು ಕಟ್ಟಿ ಪೂರೈಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು