Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:15 - ಪರಿಶುದ್ದ ಬೈಬಲ್‌

15 ಜೆರುಸಲೇಮಿನಲ್ಲಿ ವಿಜ್ಞಾನಿಗಳು ರೂಪಿಸಿದ ಯಂತ್ರಗಳನ್ನು ಉಜ್ಜೀಯನು ತಯಾರಿಸಿದನು. ಇವುಗಳನ್ನು ಪೌಳಿಗೋಡೆಯ ಮೇಲೆ ಇರಿಸಿದನು. ಇವು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ವೈರಿಗಳ ಮೇಲೆ ಹಾರಿಸಬಲ್ಲವಾಗಿದ್ದವು. ಉಜ್ಜೀಯನು ತುಂಬಾ ಪ್ರಸಿದ್ಧಿ ಹೊಂದಿದ್ದನು. ಬಹುದೂರದ ತನಕ ಅವನ ಹೆಸರು ಹಬ್ಬಿತು. ಅವನು ದೇವರ ವಿಶೇಷ ಸಹಾಯ ಪಡೆದುಕೊಂಡು ಬಲಿಷ್ಠನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ, ಅವನು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವುದಕ್ಕಾಗಿ, ತಜ್ಞರ ಕಲ್ಪನೆಯ ಮೇರೆಗೆ ಯಂತ್ರಗಳನ್ನು ಮಾಡಿಸಿ, ಅವುಗಳನ್ನು ಜೆರುಸಲೇಮಿನ ಬುರುಜುಗಳ ಮೇಲೆಯೂ ಆಳುವೇರಿಗಳ ಮೇಲೆಯೂ ಇಡಿಸಿದ್ದನು. ಬಲಿಷ್ಠನಾಗುವವರೆಗೂ ಅವನ ದೇವರ ಸಹಾಯವನ್ನು ಆಶ್ಚರ್ಯಕರವಾದ ರೀತಿಯಲ್ಲಿ ಪಡೆಯುತ್ತಿದ್ದನು; ಅವನ ಕೀರ್ತಿ ಬಲು ದೂರದವರೆಗೆ ಹಬ್ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಅವನು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವದಕ್ಕಾಗಿ ಜಾಣರ ಕಲ್ಪನೆಯ ಮೇರೆಗೆ ಯಂತ್ರಗಳನ್ನು ಮಾಡಿಸಿ ಅವುಗಳನ್ನು ಯೆರೂಸಲೇವಿುನಲ್ಲಿ ಬುರುಜುಗಳ ಮೇಲೆಯೂ ಆಳುವೇರಿಗಳ ಮೇಲೆಯೂ ಇಡಿಸಿದನು. ಅವನು ಬಲಿಷ್ಠನಾಗುವವರೆಗೂ ದೇವರ ಆಶ್ಚರ್ಯವಾದ ಸಹಾಯವನ್ನು ಹೊಂದಿದನು; ಅವನ ಕೀರ್ತಿಯು ದೂರದವರೆಗೆ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ, ಮಣ್ಣುದಿಬ್ಬಗಳ ಮೇಲೆಯೂ ಇರಲು, ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದ್ದರಿಂದ ಅವನ ಹೆಸರು ಬಹಳ ದೂರದವರೆಗೆ ಪ್ರಸಿದ್ಧಿಯಾಯಿತು. ಬಹು ಬಲಿಷ್ಠನಾಗುವ ಪರ್ಯಂತರ ಅವನು ಬಹು ಆಶ್ಚರ್ಯಕರವಾಗಿ ಸಹಾಯ ಪಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:15
9 ತಿಳಿವುಗಳ ಹೋಲಿಕೆ  

ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.


ಅವನ ತಾಯಿಯು ದಾನ್ ಕುಟುಂಬದವಳು, ತಂದೆಯು ತೂರ್ ಪಟ್ಟಣದವನು. ಅವನು ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ ಇವುಗಳ ಕೆಲಸಗಳಲ್ಲಿ ತುಂಬ ಚತುರನು. ಅಲ್ಲದೆ ನೀಲಿ, ಕೆಂಪು ಧೂಮ್ರವರ್ಣದ ಬಟ್ಟೆಗಳನ್ನು ಮತ್ತು ಬೆಲೆಬಾಳುವ ಲಿನಿನ್ ಬಟ್ಟೆಗಳನ್ನು ನೇಯುವುದರಲ್ಲಿ ನಿಪುಣನಾಗಿದ್ದಾನೆ. ನೀನು ಏನೇ ಹೇಳಿದರೂ ಅವನು ಮಾಡಿಕೊಡುವನು. ನಿನ್ನ ಮತ್ತು ದಾವೀದನ ಕುಶಲಕರ್ಮಿಗಳ ಜೊತೆಯಲ್ಲಿ ಅವನು ಕೆಲಸ ಮಾಡುವನು.


“ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಇವುಗಳ ಕೆಲಸಗಳಲ್ಲಿ ಪಳಗಿರುವ ಒಬ್ಬ ಕುಶಲಕರ್ಮಿಯನ್ನು ನೀನು ಕಳುಹಿಸಿಕೊಡಬೇಕು. ಅವನಿಗೆ ನೀಲಿ, ಕೆಂಪು, ನೇರಳೆ ವರ್ಣಗಳ ಬಟ್ಟೆಗಳನ್ನು ನೇಯುವುದೂ ಗೊತ್ತಿರಬೇಕು. ನನ್ನ ತಂದೆ ಆರಿಸಿಕೊಂಡಿರುವ ಕುಶಲಕರ್ಮಿಗಳ ಜೊತೆಯಲ್ಲಿ ಅವನು ಜೆರುಸಲೇಮಿನಲ್ಲಿಯೂ ಯೆಹೂದದಲ್ಲಿಯೂ ಕೆಲಸ ಮಾಡಬೇಕು.


ಬೆಚಲೇಲನು ಬಹಳ ಉತ್ತಮ ಚಿತ್ರಕಾರನಾಗಿದ್ದಾನೆ. ಬೆಳ್ಳಿಬಂಗಾರಗಳ ಮತ್ತು ತಾಮ್ರದ ವಸ್ತುಗಳನ್ನು ಅವನು ಮಾಡಬಲ್ಲನು.


ಉಜ್ಜೀಯನು ಸೈನಿಕರಿಗೆ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು ಮತ್ತು ಕವಣೆಗೆ ಕಲ್ಲುಗಳನ್ನು ಒದಗಿಸಿದನು.


ಬಲಶಾಲಿಯಾದ ಉಜ್ಜೀಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದ್ರೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು.


ನಾನು ಅದ್ಭುತಕಾರ್ಯಗಳಿಂದ ಅವರನ್ನು ಆಶ್ಚರ್ಯಗೊಳಿಸುತ್ತಾ ಇರುವೆನು. ಅವರ ಜ್ಞಾನಿಗಳು ತಮ್ಮ ಜ್ಞಾನವನ್ನು ಕಳೆದುಕೊಳ್ಳುವರು. ಅವರು ಅರ್ಥಮಾಡಿಕೊಳ್ಳಲಾರರು.”


ಯೆಹೋವನು ಉತ್ತರಿಸುತ್ತಾ, “ಇತರ ದೇಶಗಳನ್ನು ನೋಡು, ಅವರನ್ನು ಗಮನಿಸು. ನೀನು ಆಶ್ಚರ್ಯಪಡುವೆ. ನೀನು ನಿನ್ನ ಜೀವಮಾನದಲ್ಲಿಯೇ ಅಚ್ಚರಿಪಡುವಂಥ ವಿಷಯವನ್ನು ನಾನು ನಡಿಸುತ್ತೇನೆ. ನೀನು ಅದನ್ನು ನೋಡಿ ನಂಬುವೆ. ನಿನಗೆ ಅದರ ವಿಷಯವಾಗಿ ತಿಳಿಸಲ್ಪಟ್ಟರೂ ನೀನು ನಂಬುವದಿಲ್ಲ.


ಹಣ್ಣುಗಳನ್ನು ಕೊಡದ ಮರಗಳನ್ನು ಕಡಿಯಬಹುದು. ಆ ಮರಗಳಿಂದ ಆಯುಧಗಳನ್ನು ತಯಾರಿಸಿ ಆ ಪಟ್ಟಣದ ಜನರೊಂದಿಗೆ ಯುದ್ಧ ಮಾಡಬಹುದು. ಆ ಪಟ್ಟಣವು ನಿಮ್ಮ ಕೈವಶವಾಗುವ ತನಕ ನೀವು ಅದನ್ನು ಉಪಯೋಗಿಸಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು