Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:20 - ಪರಿಶುದ್ದ ಬೈಬಲ್‌

20 ಮಹಾಯಾಜಕನಾದ ಅಜರ್ಯನೂ ಇತರ ಯಾಜಕರೂ ಉಜ್ಜೀಯನನ್ನು ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಾಣಿಸಿದ್ದರಿಂದ ಅವನನ್ನು ಕೂಡಲೇ ದೇವಾಲಯದಿಂದ ಹೊರಕ್ಕೆ ಹಾಕಿದರು. ಯೆಹೋವನು ಅವನನ್ನು ಶಿಕ್ಷಿಸಿದುದರಿಂದ ಉಜ್ಜೀಯನು ತಾನಾಗಿಯೇ ದೇವಾಲಯದೊಳಗಿಂದ ಅವಸರದಿಂದ ಹೊರಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಆತುರಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮಹಾಯಾಜಕನಾದ ಅಜರ್ಯನೂ ಎಲ್ಲ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠ ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಗಟ್ಟಿದರು. ಸರ್ವೇಶ್ವರ, ತನ್ನನ್ನು ದಂಡಿಸಿದ್ದಾರೆಂದು ಅವನಿಗೆ ತಿಳಿಯಿತು. ಎಂದೇ ಅವನು ಶೀಘ್ರವಾಗಿ ಹೊರಗೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಂಡುಬಂದಕಾರಣ ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿದದರಿಂದ ಅವನೂ ಶೀಘ್ರವಾಗಿ ಹೊರಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಮುಖ್ಯಯಾಜಕನಾದ ಅಜರ್ಯನೂ, ಯಾಜಕರೆಲ್ಲರೂ ಅವನನ್ನು ದೃಷ್ಟಿಸಿ ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಂಡುಬಂದದ್ದರಿಂದ ಅವರು ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಹಾಕಿದರು. ಯೆಹೋವ ದೇವರು ತನ್ನನ್ನು ಬಾಧಿಸಿದ್ದರಿಂದ ಅವನು ಸ್ವತಃ ಹೊರಗೆ ಹೋಗಲು ತ್ವರೆಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:20
8 ತಿಳಿವುಗಳ ಹೋಲಿಕೆ  

ಇದಾದ ಬಳಿಕ ಮೊರ್ದೆಕೈ ಹೆಬ್ಬಾಗಿಲ ಬಳಿಯಲ್ಲಿದ್ದ ತನ್ನ ಸ್ಥಾನಕ್ಕೆ ಹೋದನು. ಆದರೆ ಹಮಾನನು ತನ್ನ ಮನೆಗೆ ಅವಸರವಸರವಾಗಿ ನಡೆದನು. ನಾಚಿಕೆಯಿಂದಲೂ ಸಿಟ್ಟಿನಿಂದಲೂ ತನ್ನ ಮುಖವನ್ನು ಮುಚ್ಚಿಕೊಂಡಿದ್ದನು.


ಯೆಹೋವನು ನಿಮ್ಮನ್ನು ಉರಿಯುವ ಹುಣ್ಣುಗಳಿಂದ ಬಾಧಿಸುವನು; ಅವುಗಳು ಗುಣವಾಗುವುದಿಲ್ಲ. ಈ ಹುಣ್ಣುಗಳು ನಿಮ್ಮ ದೇಹದ ಎಲ್ಲಾ ಭಾಗಗಳಲ್ಲಿ ಅಂದರೆ ನಿಮ್ಮ ಪಾದದಿಂದ ಹಿಡಿದು ನಡುನೆತ್ತಿಯ ತನಕ ಇರುವವು.


ಜ್ವರ, ಬಾಧೆ, ದೇಹ ಊದಿಕೊಳ್ಳುವಿಕೆ ಇವುಗಳಿಂದ ನಿಮ್ಮನ್ನು ಶಿಕ್ಷಿಸುವನು. ನಿಮ್ಮ ದೇಶದೊಳಗೆ ಸಹಿಸಲಾರದ ಉಷ್ಣವನ್ನು ಕಳುಹಿಸಿ ಮಳೆಬೀಳದಂತೆ ಮಾಡುವನು. ನಿಮ್ಮ ಬೆಳೆ ರೋಗದಿಂದಲೂ ಬಿಸಿಲಿನಿಂದಲೂ ನಾಶವಾಗುವುದು. ಇವೆಲ್ಲಾ ನಿಮಗೆ ಉಂಟಾಗಿ ನೀವು ನಾಶವಾಗುವ ತನಕ ಮುಂದುವರಿಯುವವು.


“ನಾನು ನಿಮ್ಮ ಜನರಿಗೆ ಕಾನಾನ್ ದೇಶವನ್ನು ಕೊಡುತ್ತಿದ್ದೇನೆ. ನಿಮ್ಮ ಜನರು ಆ ದೇಶದಲ್ಲಿ ಪ್ರವೇಶಿಸಿ ನೆಲೆಸುವರು. ಆಗ ಯಾರ ಮನೆಯಲ್ಲಾದರೂ ಬೂಷ್ಟು ಉಂಟಾದರೆ,


ಯಾಜಕನು ಆ ವ್ಯಕ್ತಿಯನ್ನು ನೋಡಬೇಕು. ಚರ್ಮದ ಮೇಲೆ ಬೆಳ್ಳಗಾದ ಊತವಿದ್ದರೆ, ರೋಮವು ಬೆಳ್ಳಗಾಗಿದ್ದರೆ ಮತ್ತು ಚರ್ಮವು ಊತದಿಂದ ಹಸಿಯಾಗಿ ಕಂಡರೆ,


ಇದನ್ನು ಕೇಳಿ ಉಜ್ಜೀಯನು ಕೋಪಗೊಂಡನು. ಅವನು ಧೂಪ ಹಾಕಲು ಧೂಪಾರತಿಯನ್ನು ಕೈಯಲ್ಲಿ ಹಿಡಿದುಕೊಂಡಿದ್ದನು. ಅವನು ಯಾಜಕರ ಮೇಲೆ ಕೋಪಿಸಿಕೊಂಡಾಗ ಕುಷ್ಠರೋಗವು ಅವನ ಹಣೆಯಲ್ಲಿ ಕಾಣಿಸಿಕೊಂಡಿತು. ಇದು ಯಾಜಕರ ಮುಂದೆ ದೇವಾಲಯದೊಳಗೆ ಧೂಪವೇದಿಕೆಯ ಬಳಿಯಲ್ಲೇ ಆಯಿತು.


ಅರಸನಾದ ಉಜ್ಜೀಯನು ಕುಷ್ಠರೋಗಿಯಾದುದರಿಂದ ಅವನು ಯೆಹೋವನ ಆಲಯವನ್ನು ಪ್ರವೇಶಿಸಲಾಗಲಿಲ್ಲ. ಅವನು ದೂರದಲ್ಲಿದ್ದ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಿದನು. ಅವನ ಮಗನಾದ ಯೋತಾಮನು ಪ್ರಜಾಪಾಲನೆ ಮಾಡಿದನು.


ಬುಕ್ಕೀಯು ಅಬೀಷೂವನ ಮಗನು; ಅಬೀಷೂವನು ಫೀನೆಹಾಸನ ಮಗನು; ಫೀನೆಹಾಸನು ಎಲ್ಲಾಜಾರನ ಮಗನು. ಎಲ್ಲಾಜಾರನು ಪ್ರಧಾನಯಾಜಕನಾದ ಆರೋನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು