Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:11 - ಪರಿಶುದ್ದ ಬೈಬಲ್‌

11 ಈಗ ನೀವು ನನ್ನ ಮಾತನ್ನು ಕೇಳಿರಿ, ನೀವು ಸೆರೆಹಿಡಿದ ನಿಮ್ಮ ಸಹೋದರ ಸಹೋದರಿಯರನ್ನು ಹಿಂದಕ್ಕೆ ಕಳುಹಿಸಿರಿ. ಯಾಕೆಂದರೆ ಯೆಹೋವನು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಇಲ್ಲವಾದರೆ ಯೆಹೋವನ ಕೋಪಾಗ್ನಿಯೂ ನಿಮ್ಮ ಮೇಲೆ ಉರಿಯುತ್ತದೆಯಷ್ಟೇ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಉರಿಯುತ್ತಾ ಇದೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುತ್ತಾ ಇದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ನೀವು ನನ್ನ ಮಾತು ಕೇಳಿ ನಿಮ್ಮ ನಿಮ್ಮ ಸಹೋದರರಲ್ಲಿ ನೀವು ಸೆರೆಯಾಗಿ ತೆಗೆದುಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಏಕೆಂದರೆ ಯೆಹೋವ ದೇವರ ಕೋಪಾಗ್ನಿಯು ನಿಮ್ಮ ಮೇಲೆ ಇರುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:11
10 ತಿಳಿವುಗಳ ಹೋಲಿಕೆ  

ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.


ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.


ಕರುಣೆ ತೋರುವವರು ಧನ್ಯರು. ಅವರು ಕರುಣೆ ಹೊಂದುವರು.


“ನನಗೆ ಬೇಕಾಗಿರುವ ವಿಶೇಷ ದಿವಸ ಯಾವುದೆಂದು ನಾನು ಹೇಳುತ್ತೇನೆ. ಅದು ಜನರನ್ನು ಸ್ವತಂತ್ರರನ್ನಾಗಿ ಮಾಡುವ ದಿವಸ, ಜನರಿಂದ ಅವರ ಭಾರವನ್ನು ತೆಗೆದುಹಾಕುವ ದಿವಸ; ತೊಂದರೆಗೀಡಾಗಿರುವ ಜನರನ್ನು ವಿಮುಕ್ತರನ್ನಾಗಿ ಮಾಡುವ ದಿವಸ; ಅವರ ಹೆಗಲಿನಿಂದ ಭಾರದ ಹೊರೆಯನ್ನು ಇಳಿಸುವ ದಿವಸ.


ಈ ಕೂಟದಲ್ಲಿ ನಮ್ಮ ಹಿರಿಯರು, ಪ್ರಧಾನರು ಒಂದು ತೀರ್ಮಾನಕ್ಕೆ ಬರಲಿ. ಆಮೇಲೆ ನಮ್ಮನಮ್ಮ ಊರಿನಲ್ಲಿ ಅನ್ಯಸ್ತ್ರೀಯರನ್ನು ಮದುವೆ ಆದವರು ತಮ್ಮ ಪ್ರಧಾನರೊಂದಿಗೆ ಒಂದು ನೇಮಿತ ಸಮಯದಲ್ಲಿ ಇಲ್ಲಿಗೆ ಬರಲಿ. ಆಗ ದೇವರು ನಮ್ಮ ಮೇಲಿರುವ ತನ್ನ ಕೋಪವನ್ನು ನಿವಾರಿಸುವನು” ಎಂದು ಹೇಳಿದರು.


ಇಸ್ರೇಲರ ಸೈನ್ಯದವರು ಯೆಹೂದದಲ್ಲಿ ವಾಸಿಸುವ ಅವರ ಸ್ವಂತ ಕುಟುಂಬದವರಲ್ಲಿ ಎರಡು ಲಕ್ಷ ಮಂದಿಯನ್ನು ಸೆರೆಹಿಡಿದರು. ಅವರ ಹೆಂಗಸರು, ಮಕ್ಕಳು ಮತ್ತು ಅಧಿಕವಾದ ಬೆಲೆಬಾಳುವ ವಸ್ತುಗಳನ್ನು ಸೂರೆಮಾಡಿದರು. ಇಸ್ರೇಲರು ಇವರೆಲ್ಲರನ್ನೂ, ಅಮೂಲ್ಯ ವಸ್ತುಗಳನ್ನೂ ಸಮಾರ್ಯಕ್ಕೆ ತಂದರು.


ಆಗ ಇಸ್ರೇಲರ ಸೈನಿಕರು ತಮ್ಮ ಮನೆಗೆ ಯುದ್ಧದಿಂದ ಹಿಂತಿರುಗುವುದನ್ನು ಎಫ್ರಾಯೀಮಿನ ಕೆಲವು ನಾಯಕರು ನೋಡಿದರು. ಆ ನಾಯಕರು ಅವರನ್ನು ಎಚ್ಚರಿಸಿದರು. ಆ ನಾಯಕರುಗಳು ಯಾರೆಂದರೆ: ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರೆಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ ಮತ್ತು ಹೆದ್ಲ್ಯೆಯನ ಮಗನಾದ ಅಮಾಸ.


ನೀನು ನನ್ನ ಮೇಲೆ ಕೋಪಗೊಂಡಿದ್ದರಿಂದ ನಿನ್ನ ದಂಡನೆಯು ನನ್ನನ್ನು ಕೊಲ್ಲುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು