Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:20 - ಪರಿಶುದ್ದ ಬೈಬಲ್‌

20 ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಆಹಾಜನಿಗೆ ಸಹಾಯ ಕೊಡುವ ಬದಲು ಅವನಿಗೇ ಕಷ್ಟಕೊಡಲು ಯೆಹೂದಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಸ್ಸೀರಿಯದ ಅರಸ ತಿಲ್ಗತ್ಪಿಲ್ನೆಸರನು ಬಂದು, ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನು ತಲೆತಗ್ಗಿಸುವಂತೆ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು, ಅವನಿಗೆ ನೆರವಾಗುವುದಕ್ಕೆ ಬದಲಾಗಿ ಬಾಧೆಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:20
14 ತಿಳಿವುಗಳ ಹೋಲಿಕೆ  

ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.


ನೀವು, “ನಮಗೆ ಸಹಾಯ ಬೇಡ. ಓಡಿಹೋಗಲು ಕುದುರೆಗಳು ಬೇಕು” ಎಂದು ಹೇಳುವಿರಿ. ಅದು ಸರಿಯಾದ ಮಾತು. ನೀವು ಕುದುರೆಗಳ ಮೂಲಕವೇ ಓಡುವಿರಿ. ಆದರೆ ಶತ್ರುಗಳು ನಿಮ್ಮನ್ನು ಹಿಂದಟ್ಟುವರು. ಅವರು ನಿಮ್ಮ ಕುದುರೆಗಳಿಗಿಂತ ವೇಗಶಾಲಿಗಳಾಗಿದ್ದಾರೆ.


ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.


ಎಫ್ರಾಯೀಮು ತನ್ನ ವ್ಯಾಧಿಯನ್ನು ನೋಡಿದನು. ಯೆಹೂದವು ತನ್ನ ಗಾಯಗಳನ್ನು ನೋಡಿದನು. ಆಮೇಲೆ ಸಹಾಯಕ್ಕಾಗಿ ಅಶ್ಶೂರ್ಯರ ಬಳಿಗೆ ಹೋದರು. ಆ ಮಹಾ ಅರಸನ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಆದರೆ ಆ ಅರಸನು ನಿಮ್ಮನ್ನು ಗುಣಮಾಡನು. ನಿಮ್ಮ ಗಾಯಗಳನ್ನು ಗುಣಮಾಡಲು ಸಾಧ್ಯವಿಲ್ಲ.


ಕೊನೆಗೆ ನೀನು ಈಜಿಪ್ಟನ್ನು ಬಿಡುವೆ, ನಾಚಿಕೆಯಿಂದ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವೆ. ನೀನು ಆ ದೇಶಗಳನ್ನು ನಂಬಿರುವೆ, ಆದರೆ ಆ ದೇಶಗಳಿಂದ ನಿನಗೆ ಯಾವ ಅನುಕೂಲವೂ ಆಗದು. ಯೆಹೋವನು ಆ ದೇಶಗಳನ್ನು ನಿರಾಕರಿಸಿದ್ದಾನೆ.”


“ಆದರೆ ನಾನು ನಿಮಗೆ ಹೇಳುವುದೇನೆಂದರೆ, ಈಜಿಪ್ಟಿನಲ್ಲಿ ಅಡಗಿಕೊಂಡರೆ ಏನೂ ಪ್ರಯೋಜನವಾಗದು. ಈಜಿಪ್ಟು ನಿಮ್ಮನ್ನು ರಕ್ಷಿಸಲಾರದು.


ಯೆಹೋವನು ಅಶ್ಶೂರದವರ ಮೂಲಕ ಯೆಹೂದವನ್ನು ಶಿಕ್ಷಿಸುವನು. ಆತನು ಅಶ್ಶೂರವನ್ನು ಬಾಡಿಗೆಗೆ ತೆಗೆದುಕೊಂಡ ಕ್ಷೌರಿಕನ ಕತ್ತಿಯಂತೆ ತೆಗೆದುಕೊಂಡು ಯೆಹೂದದ ತಲೆಕೂದಲನ್ನೂ ಕೈಕಾಲುಗಳ ಕೂದಲನ್ನೂ ಗಡ್ಡವನ್ನೂ ಬೋಳಿಸಿಬಿಡುವನು.


ನಂತರ ಅಶ್ಶೂರದ ರಾಜನು ಇಸ್ರೇಲಿನಲ್ಲೆಲ್ಲಾ ಸಂಚರಿಸಿ ಸಮಾರ್ಯಕ್ಕೆ ಬಂದನು. ಅವನು ಸಮಾರ್ಯವನ್ನು ಮೂರು ವರ್ಷ ಮುತ್ತಿಗೆ ಹಾಕಿದನು.


ಬಾಳ್‌ಮಯೊನನ ಮಗನು ಬೇರ. ಅಶ್ಯೂರದ ಅರಸನಾದ ತಿಗ್ಲತ್ಪಿಲೆಸರನು ಬೇರನನ್ನು ಅವನ ಮನೆಯಿಂದ ಹೊರಡಿಸಿದನು; ಬೇರನು ಅವನ ಸೆರೆಯಾಳಾದನು. ಬೇರನು ರೂಬೇನ್ ಕುಲದ ಪ್ರಧಾನನಾಗಿದ್ದನು.


ಅದಕ್ಕಾಗಿ ಸಂದೇಶಕರು ರಾಜನ ಪತ್ರವನ್ನು ಇಡೀ ಇಸ್ರೇಲ್ ಮತ್ತು ಯೆಹೂದ ಪ್ರಾಂತ್ಯದ ಜನರಿಗೆ ಕೊಟ್ಟರು. ಅದರಲ್ಲಿ ಹೀಗೆ ಬರೆದಿದ್ದನು: “ಇಸ್ರೇಲಿನ ಮಕ್ಕಳೇ, ಅಬ್ರಹಾಮನೂ ಇಸಾಕನೂ ಯಾಕೋಬನೂ ಆರಾಧಿಸಿದ ದೇವರಾದ ಯೆಹೋವನ ಕಡೆಗೆ ತಿರುಗಿರಿ. ಆಗ ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದವರ ಕಡೆಗೆ ಆತನು ತಿರುಗಿಕೊಳ್ಳುವನು.


“ಆದರೆ ನೀವು ಯೆಹೋವನಿಗೆ ಭಯಪಡುವವರಾಗಿರಬೇಕು. ಯಾಕೆಂದರೆ ಆತನು ನಿಮಗೆ ಸಂಕಟದ ಕಾಲವನ್ನು ತಂದೊಡ್ಡುವನು. ಅದು ಎಫ್ರಾಯೀಮ್ ಯೆಹೂದದಿಂದ ಅಗಲಿಹೋದ ಸಮಯದಲ್ಲಾದ ಸಂಕಟದಂತಿರುವುದು. ಆ ಸಂಕಟವು ನಿಮ್ಮ ಜನಗಳಿಗೂ ನಿಮ್ಮ ಪೂರ್ವಿಕರ ಕುಟುಂಬಕ್ಕೂ ಬರುವದು. ದೇವರು ಏನು ಮಾಡುವನು? ಆತನು ಅಶ್ಶೂರದ ರಾಜನನ್ನು ನಿಮಗೆ ವಿರುದ್ಧವಾಗಿ ಯುದ್ಧಕ್ಕೆ ಬರಮಾಡುವನು.


ನಿನ್ನ ವಿಚಾರಗಳನ್ನು ಬದಲಾಯಿಸುವದು ನಿನಗೆ ಸುಲಭ. ಅಸ್ಸೀರಿಯಾ ನಿನ್ನನ್ನು ನಿರಾಶೆಗೊಳಿಸಿತು. ಆಗ ನೀನು ಅಸ್ಸೀರಿಯರನ್ನು ಬಿಟ್ಟು ಈಜಿಪ್ಟಿನ ಸಹಾಯವನ್ನು ಕೇಳಿದೆ, ಈಜಿಪ್ಟ್ ನಿನ್ನನ್ನು ನಿರಾಶೆಗೊಳಿಸುತ್ತದೆ.


ಆ ಬಳಿಕ ನೀನು ಅಶ್ಶೂರದವರೊಂದಿಗೆ ಸಂಭೋಗಿಸಲು ಹೋದಿ. ನೀನು ತೃಪ್ತಿಗೊಳ್ಳುವಷ್ಟು ಆನಂದ ಸಿಗಲಿಲ್ಲ. ನೀನೆಂದೂ ತೃಪ್ತಿಗೊಂಡವಳಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು