Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:23 - ಪರಿಶುದ್ದ ಬೈಬಲ್‌

23 ದಮಸ್ಕದ ಜನರು ಆರಾಧಿಸುವ ಆ ದೇವರುಗಳಿಗೆ ಆಹಾಜನು ಯಜ್ಞಗಳನ್ನರ್ಪಿಸಿದನು. ದಮಸ್ಕದ ಜನರು ಆಹಾಜನನ್ನು ಸೋಲಿಸಿದ್ದರು. ಆಗ ಆಹಾಜನು, “ಅರಾಮ್ಯರು ಪೂಜಿಸುವ ದೇವರು ಅವರಿಗೆ ಸಹಾಯ ಮಾಡಿದನು. ಆದ್ದರಿಂದ ನಾನು ಆ ದೇವರಿಗೆ ಯಜ್ಞವನ್ನರ್ಪಿಸಿ ಆರಾಧಿಸಿದರೆ ಆ ದೇವರು ನನಗೂ ಸಹಾಯ ಮಾಡುವನು” ಎಂದುಕೊಂಡನು. ಆಹಾಜನು ಆ ದೇವರುಗಳನ್ನು ಪೂಜಿಸುವುದರ ಮೂಲಕ ತಾನೂ ಪಾಪಮಾಡಿ ತನ್ನ ಪ್ರಜೆಗಳನ್ನೂ ಪಾಪಮಾಡುವದಕ್ಕೆ ಪ್ರೋತ್ಸಾಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹೇಗೆಂದರೆ “ಅರಾಮ್ ರಾಜರ ದೇವತೆಗಳು ಅವರಿಗೆ ಜಯವನ್ನು ಅನುಗ್ರಹಿಸುವೆ ಎಂದು ತಿಳಿದು; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವುದು” ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸಿದನು. ಆದರೆ ಆ ದೇವತೆಗಳ ದೆಸೆಯಿಂದ ಅವನಿಗೂ ಮತ್ತು ಎಲ್ಲಾ ಇಸ್ರಾಯೇಲರಿಗೂ ಕೇಡು ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೇಗೆಂದರೆ, ‘ಸಿರಿಯಾ ರಾಜರ ದೇವತೆಗಳು ಅವರಿಗೆ ಜಯವನ್ನನುಗ್ರಹಿಸಿವೆ; ಅಂತೆಯೇ ನಾನೂ ಅವುಗಳಿಗೆ ಬಲಿಸಮರ್ಪಿಸಿದರೆ ನನಗೂ ಜಯವಾಗುವುದು’, ಎಂದುಕೊಂಡನು; ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಬಲಿಕೊಟ್ಟನು. ಆದರೆ ಆ ದೇವತೆಗಳಿಂದ ಅವನಿಗೂ ಎಲ್ಲ ಇಸ್ರಯೇಲರಿಗೂ ಕೇಡು ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಹೇಗಂದರೆ - ಅರಾಮ್‍ರಾಜರ ದೇವತೆಗಳು ಅವರಿಗೆ ಜಯವನ್ನನುಗ್ರಹಿಸಿದವಲ್ಲಾ; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವದು ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸುವವನಾದನು. ಆ ದೇವತೆಗಳ ದೆಸೆಯಿಂದ ಅವನಿಗೂ ಎಲ್ಲಾ ಇಸ್ರಾಯೇಲ್ಯರಿಗೂ ಕೇಡುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಕೊನೆಗೆ ಆಹಾಜನು, “ಅರಾಮಿನ ಅರಸರ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ, ಅವು ನನಗೆ ಸಹ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ,” ಎಂದುಕೊಂಡು ತನ್ನನ್ನು ಸೋಲಿಸಿದ ದಮಸ್ಕದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಆ ದೇವರುಗಳು ಅವನನ್ನೂ, ಸಮಸ್ತ ಇಸ್ರಾಯೇಲರನ್ನೂ ಬೀಳುವಂತೆ ಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:23
11 ತಿಳಿವುಗಳ ಹೋಲಿಕೆ  

ಎದೋಮ್ಯರನ್ನು ಸೋಲಿಸಿ ಅಮಚ್ಯನು ಮನೆಗೆ ಹಿಂದಿರುಗಿ ಬಂದನು. ಸೇಯೀರಿನ ಜನರು ಪೂಜಿಸುತ್ತಿದ್ದ ವಿಗ್ರಹಗಳನ್ನು ತನ್ನೊಂದಿಗೆ ತಂದನು. ಅವನು ಅವುಗಳನ್ನು ಪೂಜಿಸತೊಡಗಿ ಅಡ್ಡಬಿದ್ದು ಧೂಪ ಹಾಕಿದನು.


ಆ ಬಳಿಕ ಅವರು ಗಾಳಿಯಂತೆ ಅಲ್ಲಿಂದ ಬೇರೆ ಸ್ಥಳಗಳ ಮೇಲೆ ದಾಳಿಮಾಡಲು ಹೊರಟುಹೋಗುವರು. ಬಾಬಿಲೋನಿನವರು ಆರಾಧಿಸುವ ಒಂದೇ ವಿಷಯ ಯಾವದೆಂದರೆ ಅವರ ಸ್ವಂತ ಶಕ್ತಿಯನ್ನೇ.”


“ಇಸ್ರೇಲೇ, ನಾನು ನಿನಗೆ ಸಹಾಯ ಮಾಡಿದರೂ ನೀನು ನನಗೆ ವಿರೋಧವಾಗಿ ಎದ್ದಿರುವೆ. ಆದ್ದರಿಂದ ನಾನು ನಿನ್ನನ್ನು ನಾಶಮಾಡುವೆನು.


ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.”


ಆದರೆ ಎಲ್ಲಾ ಕೊಲೆಗಾರರೂ ದುಷ್ಟರೂ ನಾಶಮಾಡಲ್ಪಡುವರು. ಅವರು ಯೆಹೋವನನ್ನು ಹಿಂಬಾಲಿಸುವವರಲ್ಲ.


“ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.


ಯೆಹೂದವೇ, ವಿಗ್ರಹಗಳ ಬೆನ್ನುಹತ್ತಿ ಹೋಗುವದನ್ನು ನಿಲ್ಲಿಸು! ಆ ಅನ್ಯದೇವರುಗಳ ಬಗ್ಗೆ ನಿನ್ನಲ್ಲಿರುವ ಬಯಕೆಯನ್ನು ತೊರೆದುಬಿಡು. ಆದರೆ ನೀನು ‘ಹಾಗೆ ಮಾಡಿದರೆ ಪ್ರಯೋಜನವೇನು? ನಾನು ಅವುಗಳನ್ನು ಬಿಡಲಾರೆ. ನಾನು ಆ ಅನ್ಯದೇವರುಗಳನ್ನು ಪ್ರೀತಿಸುತ್ತೇನೆ. ನಾನು ಅವುಗಳನ್ನು ಪೂಜಿಸಬಯಸುತ್ತೇನೆ’ ಎಂದು ಹೇಳುವೆ.


ಆಕೆಯು ತನ್ನ ಪ್ರಿಯತಮರ ಹಿಂದೆ ಓಡಿಹೋದರೂ ಅವರನ್ನು ಹಿಡಿಯಲಾರಳು. ಆಕೆಯು ತನ್ನ ಪ್ರಿಯತಮರನ್ನು ಹುಡುಕುವಳು. ಆದರೆ ಅವರು ಆಕೆಗೆ ಸಿಗುವುದಿಲ್ಲ. ಆಗ ಆಕೆ ಹೀಗೆ ಹೇಳುವಳು, ‘ನಾನು ನನ್ನ ಮೊದಲನೇ ಪತಿಯ ಬಳಿಗೆ (ಯೆಹೋವನು) ಹೋಗುವೆನು. ನಾನು ಆತನೊಂದಿಗೆ ಇದ್ದಾಗ ನನ್ನ ಜೀವಿತವು ಎಷ್ಟೋ ಚೆನ್ನಾಗಿತ್ತು. ಈಗಿನ ನನ್ನ ಜೀವಿತಕ್ಕಿಂತ ಆಗಿನ ಜೀವಿತವು ಎಷ್ಟೋ ಮೇಲಾಗಿತ್ತು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು