Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:25 - ಪರಿಶುದ್ದ ಬೈಬಲ್‌

25 ಯೆಹೂದದ ಪ್ರತಿಯೊಂದು ಪಟ್ಟಣಗಳಲ್ಲಿ ಆಹಾಜನು ಧೂಪಹಾಕಲು ಮತ್ತು ಬೇರೆ ದೇವರುಗಳನ್ನು ಪೂಜಿಸಲು ಉನ್ನತಸ್ಥಳಗಳನ್ನು ಮಾಡಿಸಿದನು; ಅನ್ಯ ದೇವರುಗಳಿಗೆ ಧೂಪಹಾಕಲು ಜನರನ್ನು ಪ್ರೋತ್ಸಾಹಿಸಿದನು. ಈ ರೀತಿಯಾಗಿ ತನ್ನ ಪೂರ್ವಿಕರು ಆರಾಧಿಸಿದ ದೇವರಾದ ಯೆಹೋವನನ್ನು ಆಹಾಜನು ರೇಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅನ್ಯದೇವತೆಗಳಿಗೆ ಧೂಪಹಾಕುವುದಕ್ಕಾಗಿ ಯೆಹೂದದ ಎಲ್ಲಾ ಪಟ್ಟಣಗಳಲ್ಲಿಯೂ ಪೂಜಾಸ್ಥಳಗಳನ್ನು ಏರ್ಪಡಿಸಿದನು. ಹೀಗೆ ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ರೇಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅನ್ಯದೇವತೆಗಳಿಗೆ ಧೂಪಹಾಕುವುದಕ್ಕಾಗಿ ಜುದೇಯದ ಎಲ್ಲ ಪಟ್ಟಣಗಳಲ್ಲೂ ಪೂಜಾಸ್ಥಳಗಳನ್ನು ನಿರ್ಮಿಸಿದನು. ಹೀಗೆ ತನ್ನ ಪಿತೃಗಳ ದೇವರಾದ ಸರ್ವೇಶ್ವರನನ್ನು ರೇಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅನ್ಯದೇವತೆಗಳಿಗೆ ಧೂಪಹಾಕುವದಕ್ಕಾಗಿ ಯೆಹೂದದ ಎಲ್ಲಾ ಪಟ್ಟಣಗಳಲ್ಲಿಯೂ ಪೂಜಾಸ್ಥಳಗಳನ್ನು ಏರ್ಪಡಿಸಿದನು. ಹೀಗೆ ತನ್ನ ಪಿತೃಗಳ ದೇವರಾದ ಯೆಹೋವನನ್ನು ರೇಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪ ಸುಡುವುದಕ್ಕೆ ಎತ್ತರ ಸ್ಥಳಗಳನ್ನು ಕಟ್ಟಿಸಿ, ತನ್ನ ಪಿತೃಗಳ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:25
9 ತಿಳಿವುಗಳ ಹೋಲಿಕೆ  

ಬೆನ್‌ಹಿನ್ನೋಮ್ ಕಣಿವೆಯಲ್ಲಿ ಧೂಪಹಾಕಿದನು. ತನ್ನ ಸ್ವಂತ ಮಕ್ಕಳನ್ನು ಬೆಂಕಿಯಲ್ಲಿ ಸುಟ್ಟು ವಿಗ್ರಹಗಳಿಗೆ ಆಹುತಿಕೊಟ್ಟನು. ಆ ದೇಶದ ಜನರು ಮಾಡಿದ ಭಯಂಕರ ಪಾಪಗಳನ್ನು ತಾನೂ ಮಾಡಿದನು. ಇಸ್ರೇಲ್ ಜನರು ಆ ದೇಶವನ್ನು ಪ್ರವೇಶಿಸಿದಾಗ ದೇವರು ಅವರನ್ನು ಹೊರಗೆ ಹೊರಡಿಸಿದ್ದನು.


ಆಹಾಜನು ಬೆಟ್ಟದ ಮೇಲೆ ಪ್ರತಿಯೊಂದು ಹಸಿರು ಮರದಡಿಯಲ್ಲಿದ್ದ ಉನ್ನತಸ್ಥಳಗಳಲ್ಲಿ ಧೂಪಹಾಕಿ ಯಜ್ಞಗಳನ್ನರ್ಪಿಸುತ್ತಿದ್ದನು.


ಇದಲ್ಲದೆ ದೇವಾಲಯದಿಂದ ಉಪಕರಣಗಳನ್ನೆಲ್ಲಾ ಆಹಾಜನು ಹೊರತೆಗೆದು ಅವುಗಳನ್ನು ಒಡೆದು ಚೂರುಚೂರು ಮಾಡಿದನು; ದೇವಾಲಯದ ಬಾಗಿಲನ್ನು ಮುಚ್ಚಿಸಿದನು. ಅವನು ವೇದಿಕೆಗಳನ್ನು ಮಾಡಿಸಿ ಜೆರುಸಲೇಮಿನ ರಸ್ತೆಗಳ ಮೂಲೆ ಮೂಲೆಗಳಲ್ಲಿ ಕಟ್ಟಿಸಿದನು.


ಆರಂಭದಿಂದ ಕೊನೆಯ ತನಕ ಆಹಾಜನು ಮಾಡಿದ ಇತರ ಕಾರ್ಯಗಳೆಲ್ಲವನ್ನು ಕುರಿತು ಯೆಹೂದದ ಮತ್ತು ಇಸ್ರೇಲರ ಅರಸರ ಗ್ರಂಥದಲ್ಲಿ ಬರೆದಿರುತ್ತವೆ.


ಯೆಹೂದದ ರಾಜರು ನನ್ನನ್ನು ತ್ಯಜಿಸಿದರು ಮತ್ತು ಇತರ ದೇವರುಗಳಿಗೆ ಧೂಪವನ್ನು ಸುಟ್ಟರು. ಅವರು ನನ್ನಲ್ಲಿ ಹೆಚ್ಚು ಕೋಪವನ್ನು ಉಂಟುಮಾಡಿದರು. ಅವರು ಅನೇಕ ವಿಗ್ರಹಗಳನ್ನು ನಿರ್ಮಿಸಿದರು. ಆದಕಾರಣವೇ ನಾನು ನನ್ನ ಕೋಪವನ್ನು ಈ ಸ್ಥಳದ ವಿರುದ್ಧ ತೋರ್ಪಡಿಸುತ್ತೇನೆ. ನನ್ನ ಕೋಪವು ಆರಿಹೋಗದ ಬೆಂಕಿಯಂತಿರುತ್ತದೆ!’


ಅರಸನಾದ ಆಹಾಜನು ಸತ್ತ ವರ್ಷದಲ್ಲಿ ಈ ದುಃಖದ ಸಂದೇಶವು ಕೊಡಲ್ಪಟ್ಟಿತು:


“ಯೆಹೂದದ ಜನರೇ, ನೀವು ಅನೇಕ ವಿಗ್ರಹಗಳನ್ನು ಇಟ್ಟುಕೊಂಡಿದ್ದೀರಿ. ಯೆಹೂದದಲ್ಲಿ ಎಷ್ಟು ಪಟ್ಟಣಗಳಿವೆಯೋ, ಅಷ್ಟು ವಿಗ್ರಹಗಳಿವೆ. ತುಚ್ಛ ದೇವರಾದ ಬಾಳನನ್ನು ಪೂಜಿಸಲು ನೀವು ಅನೇಕ ಬಲಿಪೀಠಗಳನ್ನು ಕಟ್ಟಿಕೊಂಡಿದ್ದೀರಿ. ಜೆರುಸಲೇಮಿನಲ್ಲಿ ಎಷ್ಟು ಬೀದಿಗಳಿವೆಯೋ ಅಷ್ಟು ಬಲಿಪೀಠಗಳಿವೆ.


ಸರ್ವಶಕ್ತನಾದ ಯೆಹೋವನು ನಿಮ್ಮನ್ನು ನೆಟ್ಟನು. ನಿಮಗೆ ಕೇಡು ಬರುವದೆಂದು ಆತನು ಸಾರಿರುವನು. ಏಕೆಂದರೆ ಇಸ್ರೇಲ್ ವಂಶವೂ ಯೆಹೂದ ವಂಶವೂ ದುಷ್ಕೃತ್ಯಗಳನ್ನು ಮಾಡಿವೆ. ಬಾಳನಿಗೆ ಹೋಮವನ್ನರ್ಪಿಸಿ ನನಗೆ ಕೋಪ ಬರುವಂತೆ ಮಾಡಿವೆ.”


“ನೀನು ಎಲ್ಲಾ ದುಷ್ಕೃತ್ಯಗಳನ್ನು ಮಾಡಿದ ನಂತರ ಸುಳ್ಳು ದೇವರುಗಳಿಗಾಗಿ ಎತ್ತರವಾದ ಸ್ಥಳಗಳಲ್ಲಿ ಹೆಚ್ಚು ಪೂಜಾಸ್ಥಳಗಳನ್ನು ಮಾಡಿದೆ. ಪ್ರತಿಯೊಂದು ರಸ್ತೆಯ ಚೌಕಗಳಲ್ಲಿ ಅನ್ಯದೇವರುಗಳಿಗಾಗಿ ಪೂಜಾಸ್ಥಳಗಳನ್ನು ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು