Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:3 - ಪರಿಶುದ್ದ ಬೈಬಲ್‌

3 ಬೆನ್‌ಹಿನ್ನೋಮ್ ಕಣಿವೆಯಲ್ಲಿ ಧೂಪಹಾಕಿದನು. ತನ್ನ ಸ್ವಂತ ಮಕ್ಕಳನ್ನು ಬೆಂಕಿಯಲ್ಲಿ ಸುಟ್ಟು ವಿಗ್ರಹಗಳಿಗೆ ಆಹುತಿಕೊಟ್ಟನು. ಆ ದೇಶದ ಜನರು ಮಾಡಿದ ಭಯಂಕರ ಪಾಪಗಳನ್ನು ತಾನೂ ಮಾಡಿದನು. ಇಸ್ರೇಲ್ ಜನರು ಆ ದೇಶವನ್ನು ಪ್ರವೇಶಿಸಿದಾಗ ದೇವರು ಅವರನ್ನು ಹೊರಗೆ ಹೊರಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಬೆನ್ ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯ ಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಅಗ್ನಿಪ್ರವೇಶ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ಬೆನ್‍ಹಿನ್ನೋಮ್ ಎಂಬ ಕಣಿವೆಯಲ್ಲಿ ಧೂಪ ಹಾಕಿಸಿದ್ದಲ್ಲದೆ ಸರ್ವೇಶ್ವರಸ್ವಾಮಿ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಜನಾಂಗಗಳ ಅಸಹ್ಯಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಬೆನ್‍ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಓಡಿಸಿಬಿಟ್ಟ ಜನಾಂಗಗಳ ಅಸಹ್ಯಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಆಹುತಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ಆಹಾಜನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಧೂಪವನ್ನರ್ಪಿಸಿ, ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:3
20 ತಿಳಿವುಗಳ ಹೋಲಿಕೆ  

ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.


ಯೆಹೋವನು ದುಷ್ಟತನವೆಂದು ಪರಿಗಣಿಸಿದ್ದನ್ನೇ ಮನಸ್ಸೆ ಮಾಡಿದನು. ಇಸ್ರೇಲರು ಆ ದೇಶವನ್ನು ವಶಪಡಿಸುವದಕ್ಕಿಂತ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನರ ಪಾಪಕೃತ್ಯಗಳನ್ನು ಅನುಸರಿಸಿದನು.


“ನೀವು ನಿಮ್ಮ ಯಾವ ಮಕ್ಕಳನ್ನೂ ಅಗ್ನಿಯ ಮೂಲಕ ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡುವಿರಿ. ನಾನೇ ಯೆಹೋವನು!


ತೋಫೆತ್ ಎನ್ನುವುದು ಬೆನ್‌ಹಿನ್ನೋಮ್‌ನ ಮಗನಿಗೆ ಸೇರಿದ ಒಂದು ಕಣಿವೆ. ಅಲ್ಲಿ ಸುಳ್ಳುದೇವರಾದ ಮೋಲೆಕನ ಗೌರವಾರ್ಥವಾಗಿ ಜನರು ತಮ್ಮ ಮಕ್ಕಳನ್ನು ಆಹುತಿ ಕೊಡುತ್ತಿದ್ದರು ಮತ್ತು ಯಜ್ಞವೇದಿಕೆಯ ಮೇಲೆ ಸುಡುತ್ತಿದ್ದರು. ಯೋಷೀಯನು, ಜನರು ಮತ್ತೆ ಆ ಸ್ಥಳವನ್ನು ಉಪಯೋಗಿಸದಂತೆ ನಾಶಗೊಳಿಸಿದನು.


ಆ ಸೀಮೆಯು ಜೆರುಸಲೇಮ್ ಎಂದು ಕರೆಯಲ್ಪಟುವ ಯೆಬೂಸಿಯ ನಗರದ ದಕ್ಷಿಣ ಮಾರ್ಗವಾಗಿ ಬೆನ್‌ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಆ ಸ್ಧಳದಲ್ಲಿ ಸೀಮೆಯು ಹಿನ್ನೋಮ್ ಕಣಿವೆಯ ಪಶ್ಚಿಮದಿಕ್ಕಿನ ಬೆಟ್ಟದ ತುದಿಗೆ ಹೋಗುತ್ತದೆ. ಇದು ರೆಫಾಯೀಮ್ ಕಣಿವೆಯ ಉತ್ತರದ ಕೊನೆ.


ದೇವರಾದ ಯೆಹೋವನು ಒಂದು ಸಾವಿರ ಟಗರು, ಹತ್ತುಸಾವಿರ ಎಣ್ಣೆಯ ಹೊಳೆಗಳಲ್ಲಿ ಸಂತೋಷಿಸುವನೋ? ನಾನು ಮಾಡಿದ ತಪ್ಪಿನ ಪರಿಹಾರಕ್ಕಾಗಿ ನನ್ನ ಚೊಚ್ಚಲ ಮಗನನ್ನು ಸಮರ್ಪಿಸಲೋ? ನನ್ನ ಶರೀರದಿಂದ ಬಂದ ಮಗನನ್ನು ನನ್ನ ಪಾಪಗಳಿಗಾಗಿ ಸಮರ್ಪಿಸಲೋ?


“ಬೆನ್‌ಹಿನ್ನೊಮ್ ಕಣಿವೆಯಲ್ಲಿ ಅವರು ಸುಳ್ಳುದೇವರಾದ ಬಾಳನಿಗಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿದ್ದಾರೆ. ತಮ್ಮ ಮಕ್ಕಳನ್ನು ಆಹುತಿಕೊಡುವದಕ್ಕಾಗಿ ಈ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಇಂಥಾ ಭಯಂಕರವಾದ ಕೆಲಸವನ್ನು ಮಾಡಲು ನಾನು ಅವರಿಗೆ ಆಜ್ಞಾಪಿಸಿಲ್ಲ. ಯೆಹೂದದ ಜನರು ಇಂಥಾ ಭಯಂಕರವಾದ ಕಾರ್ಯವನ್ನು ಮಾಡುವರೆಂದು ನಾನೆಂದೂ ಊಹಿಸಿರಲಿಲ್ಲ.


‘ಜೆರುಸಲೇಮಿನ ಮನೆಗಳು ಈ ತೋಫೆತಿನಷ್ಟೆ “ಹೊಲಸಾಗುವವು.” ಯೆಹೂದದ ರಾಜರ ಅರಮನೆಗಳು ಈ ತೋಫೆತಿನಂತೆ ಹಾಳಾಗುವವು. ಏಕೆಂದರೆ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರುಗಳನ್ನು ಪೂಜಿಸಿದರು. ಅವರು ನಕ್ಷತ್ರಗಳನ್ನು ಪೂಜಿಸಿ ಅವುಗಳ ಗೌರವಾರ್ಥವಾಗಿ ಧೂಪಹಾಕಿದರು. ಅವರು ಸುಳ್ಳುದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದರು.’”


ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.


ಅಹಾಜನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು. ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಆಹುತಿಕೊಟ್ಟನು. ಇಸ್ರೇಲರು ದೇಶಕ್ಕೆ ಬಂದ ಕಾಲದಲ್ಲಿ ಯೆಹೋವನು ಬಲಾತ್ಕಾರದಿಂದ ಓಡಿಸಿದ ಜನಾಂಗಗಳ ಅಸಹ್ಯ ಪಾಪಗಳನ್ನು ಅವನು ಅನುಸರಿಸಿದನು.


“ನೀವು ನಿಮ್ಮ ವಾಗ್ದತ್ತ ದೇಶಕ್ಕೆ ಬಂದಾಗ ಸುತ್ತಮುತ್ತಲಿನ ಜನರು ನಡೆಯುವ ರೀತಿಯಲ್ಲಿ ನೀವು ನಡೆಯಬಾರದು. ಅವರ ಅಸಹ್ಯವಾದ ಪದ್ದತಿಗಳನ್ನು ಅನುಸರಿಸಬಾರದು.


ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ.


ನಿಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ನಿಮ್ಮ ಯಜ್ಞವೇದಿಕೆಯ ಬೆಂಕಿಯ ಮೇಲೆ ಬಲಿಯನ್ನಾಗಿ ಅರ್ಪಿಸಬೇಡಿ. ನಿಮ್ಮ ಭವಿಷ್ಯವನ್ನು ತಿಳಿದುಕೊಳ್ಳುವುದಕ್ಕಾಗಿ ಕಣಿಹೇಳುವವರ ಬಳಿಗಾಗಲಿ, ಮಂತ್ರಗಾರರ ಬಳಿಗಾಗಲಿ ಬೇತಾಳಿಕರ ಬಳಿಗಾಗಲಿ, ಮಾಟಗಾರರ ಬಳಿಗಾಗಲಿ ಹೋಗಬೇಡಿ.


ಇಸ್ರೇಲಿನ ಜನರು ದುಷ್ಕೃತ್ಯಗಳನ್ನು ಮಾಡಿದರು ಮತ್ತು ಸುಳ್ಳುದೇವರಾದ ಬಾಳನ ಸೇವೆ ಮಾಡಿದರು. ಯೆಹೋವನು ಇಸ್ರೇಲರ ಈ ದುಷ್ಕೃತ್ಯಗಳನ್ನು ನೋಡಿದನು.


ಇಸ್ರೇಲರು ಯೆಹೋವನನ್ನು ಅನುಸರಿಸದೆ ಬಾಳ್ ದೇವರನ್ನೂ ಅಷ್ಟೋರೆತ್ ದೇವತೆಯನ್ನೂ ಪೂಜಿಸತೊಡಗಿದರು.


ಅವನು ಮಾತ್ರವಲ್ಲದೆ ಎಲ್ಲಾ ಯಾಜಕರು, ಯೆಹೂದದ ಜನನಾಯಕರು ಬಹಳ ಪಾಪಗಳನ್ನು ಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟುಹೋಗಿದ್ದರು. ಅವರು ಬೇರೆ ದೇಶಗಳ ನಡವಳಿಕೆಯನ್ನು ಅನುಸರಿಸಿದರು. ಆ ನಾಯಕರುಗಳು ದೇವಾಲಯವನ್ನು ಹಾಳುಮಾಡಿದರು. ಜೆರುಸಲೇಮಿನಲ್ಲಿದ್ದ ಆ ಆಲಯವನ್ನು ಯೆಹೋವನು ತನಗಾಗಿ ಪ್ರತಿಷ್ಠಿಸಿಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು