Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:5 - ಪರಿಶುದ್ದ ಬೈಬಲ್‌

5-6 ಆಹಾಜನು ಪಾಪಮಾಡಿದ್ದರಿಂದ ದೇವರು ಅರಾಮ್ಯರನ್ನು ಅವನ ವಿರುದ್ಧವಾಗಿ ಕಳುಹಿಸಿ ಅವನು ಸೋತು ಹೋಗುವಂತೆ ಮಾಡಿದನು. ಅವರಲ್ಲಿ ಬಹುಮಂದಿ ಸೆರೆಹಿಡಿಯಲ್ಪಟ್ಟರು. ಅರಾಮ್ಯರ ಅರಸನು ಅವರನ್ನೆಲ್ಲಾ ದಮಸ್ಕಕ್ಕೆ ಒಯ್ದನು. ಇಸ್ರೇಲರ ಅರಸನಾದ ಪೆಕಹನು ಬಂದು ಆಹಾಜನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಪೆಕಹನ ತಂದೆಯ ಹೆಸರು ರೆಮಲ್ಯ. ಪೆಕಹನೂ ಅವನ ಸೈನ್ಯವೂ ಯೆಹೂದ ಸೈನಿಕರಲ್ಲಿ ಒಂದೇ ದಿವಸದಲ್ಲಿ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಧೈರ್ಯಶಾಲಿ ಸೈನಿಕರನ್ನು ಕೊಂದರು. ಯೆಹೂದದ ಜನರನ್ನು ಪೆಕಹನು ಸೋಲಿಸಿದನು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿಧೇಯರಾಗಲು ನಿರಾಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು. ಅರಾಮ್ಯರು ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈ ಕಾರಣ ದೇವರಾದ ಸರ್ವೇಶ್ವರ ಅಹಾಜನನ್ನು ಸಿರಿಯಾದ ಅರಸನ ಕೈಗೆ ಒಪ್ಪಿಸಿದನು. ಸಿರಿಯಾದವರು ಅವನನ್ನು ಸೋಲಿಸಿ ಅವನ ಜನರಲ್ಲಿ ದೊಡ್ಡ ಗುಂಪನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ, ಅವನು ಇಸ್ರಯೇಲ್ ರಾಜನ ಕೈವಶವಾಗಿ ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದದರಿಂದ ಅವನ ದೇವರಾದ ಯೆಹೋವನು ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು; ಅರಾಮ್ಯರು ಅವನನ್ನು ಸೋಲಿಸಿ ಅವನ ಜನರಲ್ಲಿ ದೊಡ್ಡ ಗುಂಪನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು ಅವನಿಂದಲೂ ಪೂರ್ಣವಾಗಿ ಅಪಜಯಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಆಹಾಜನ ದೇವರಾದ ಯೆಹೋವ ದೇವರು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದರು. ಅರಾಮ್ಯರು ಅವನನ್ನು ಹೊಡೆದು, ಅವರಲ್ಲಿ ಅನೇಕರನ್ನು ಸೆರೆಹಿಡಿದು, ದಮಸ್ಕಕ್ಕೆ ತೆಗೆದುಕೊಂಡು ಹೋದರು. ಇದಲ್ಲದೆ ಆಹಾಜನು ಇಸ್ರಾಯೇಲಿನ ಅರಸನ ಕೈವಶವಾಗಿ, ಅವನಿಂದಲೂ ಕಠಿಣವಾಗಿ ಸೋತು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:5
11 ತಿಳಿವುಗಳ ಹೋಲಿಕೆ  

ಆಹಾಜನು ಯೋಥಾಮನ ಮಗನು. ಯೋಥಾಮನು ಉಜ್ಜೀಯನ ಮಗನು. ರೆಚೀನ್ ಎಂಬವನು ಅರಾಮ್ಯರ ಅರಸನಾಗಿದ್ದನು. ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ಅರಸನಾಗಿದ್ದನು. ಆಗ ಆಹಾಜನು ಯೆಹೂದದ ಅರಸನಾಗಿದ್ದನು. ರೆಚೀನ್ ಮತ್ತು ಪೆಕಹ ಇವರಿಬ್ಬರೂ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು. ಆದರೆ ಆ ನಗರವನ್ನು ಸೋಲಿಸಲು ಅವರಿಂದಾಗಲಿಲ್ಲ.


ಅರಾಮ್ಯರ ಸೈನ್ಯವು ಸ್ವಲ್ಪ ಮಂದಿಯಿಂದ ಕೂಡಿದ್ದರೂ ಯೆಹೂದದ ದೊಡ್ಡ ಸೈನ್ಯವನ್ನು ಸೋಲಿಸಿಬಿಟ್ಟಿತು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದುದರಿಂದ ದೇವರಾದ ಯೆಹೋವನು ಹಾಗೆ ಮಾಡಿದನು. ಈ ರೀತಿಯಾಗಿ ಯೆಹೋವಾಷನು ಶಿಕ್ಷಿಸಲ್ಪಟ್ಟನು.


ಅವರು, “ನಾವು ಹೋಗಿ ಯೆಹೂದಕ್ಕೆ ವಿರುದ್ಧವಾಗಿ ಯುದ್ಧ ಮಾಡೋಣ. ಯೆಹೂದ ರಾಜ್ಯವನ್ನು ನಾವಿಬ್ಬರೂ ಭಾಗ ಮಾಡಿಕೊಳ್ಳೋಣ ಮತ್ತು ಟಾಬೇಲನ ಮಗನನ್ನು ಯೆಹೂದದ ಹೊಸ ಅರಸನಾಗಿ ಮಾಡೋಣ ಎಂದು ಮಾತಾಡಿಕೊಳ್ಳುತ್ತಿದ್ದಾರೆ.”’”


ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.


ಯೆಹೋಯಾಕೀಮನು ಯೆಹೂದ ದೇಶದ ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಯೆಹೋಯಾಕೀಮನು ಯೆಹೋವನ ಚಿತ್ತಕ್ಕೆ ಒಳಗಾಗಲಿಲ್ಲ. ಅವನು ತನ್ನ ದೇವರಾದ ಯೆಹೋವನ ವಿರುದ್ಧವಾಗಿ ಪಾಪಮಾಡಿದನು.


ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.


ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಶತ್ರುಗಳು ಇಸ್ರೇಲರ ಮೇಲೆ ಧಾಳಿಮಾಡಿ ಅವರ ಸ್ವತ್ತನ್ನು ತೆಗೆದುಕೊಳ್ಳುವಂತೆ ಯೆಹೋವನು ಮಾಡಿದನು. ಸುತ್ತಮುತ್ತಲಿದ್ದ ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರು ಶತ್ರುಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆಗಲಿಲ್ಲ.


ನಮ್ಮ ಜನರು ರಣರಂಗದಲ್ಲಿ ಕೊಲ್ಲಲ್ಪಟ್ಟರು; ನಮ್ಮ ಹೆಂಡತಿಮಕ್ಕಳು ಸೆರೆಹಿಡಿಯಲ್ಪಟ್ಟರು.


ಈಗಿನಂತೆ, ನಿನ್ನ ದುಷ್ಟತನವು ಹೊರಬರುವುದಕ್ಕಿಂತ ಮೊದಲು ನೀನು ಅದನ್ನು ಮಾಡಿದೆ. ಈಗ ಎದೋಮಿನ ಹೆಣ್ಣುಮಕ್ಕಳು (ಪಟ್ಟಣಗಳು) ಮತ್ತು ಆಕೆಯ ನೆರೆಯವರು ನಿನ್ನನ್ನು ಗೇಲಿ ಮಾಡುವರು. ಫಿಲಿಷ್ಟಿಯರ ಹೆಣ್ಣುಮಕ್ಕಳು ಸಹ ನಿನ್ನನ್ನು ಗೇಲಿ ಮಾಡುವರು. ನಿನ್ನ ಸುತ್ತಲೂ ಇರುವವರು ನಿನ್ನನ್ನು ಕಡೆಗಾಣಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು