Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:16 - ಪರಿಶುದ್ದ ಬೈಬಲ್‌

16 ಯಾಜಕರು ದೇವಾಲಯದ ಒಳಭಾಗವನ್ನು ಪ್ರವೇಶಿಸಿ ಶುಚಿಮಾಡಿದರು. ದೇವಾಲಯದೊಳಗೆ ಇದ್ದ ಎಲ್ಲಾ ಹೊಲಸು ವಸ್ತುಗಳನ್ನು ಹೊರತೆಗೆದರು. ದೇವಾಲಯದ ಅಂಗಳಕ್ಕೆ ತಂದು ಅಲ್ಲಿಂದ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಬಿಸಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವುದಕ್ಕಾಗಿ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯಾಜಕರು ಸರ್ವೇಶ್ವರನ ಆಲಯವನ್ನು‍ ಶುದ್ಧಮಾಡುವುದಕ್ಕೆ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ಹೊರಗೆ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವದಕ್ಕೋಸ್ಕರ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯಾಜಕರು ಯೆಹೋವ ದೇವರ ಆಲಯವನ್ನು ಶುದ್ಧಿಮಾಡಲು ಅದರ ಒಳಭಾಗವನ್ನು ಪ್ರವೇಶಿಸಿ, ಯೆಹೋವ ದೇವರ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಯೆಹೋವ ದೇವರ ಆಲಯದ ಅಂಗಳದೊಳಗೆ ತಂದರು. ಆಗ ಲೇವಿಯರು ಅದನ್ನು ತೆಗೆದುಕೊಂಡು, ಕಿದ್ರೋನ್ ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:16
15 ತಿಳಿವುಗಳ ಹೋಲಿಕೆ  

ಆಸನು ತನ್ನ ತಾಯಿಯಾದ ಮಾಕಳನ್ನು ರಾಜಮಾತೆ ಎಂಬ ಪದವಿಯಿಂದ ತಳ್ಳಿಬಿಟ್ಟನು. ಯಾಕೆಂದರೆ ಆಕೆಯು ಅಶೇರ್ ದೇವತೆಯ ಅಸಹ್ಯವಾದ ಕಂಬವನ್ನು ಮಾಡಿಸಿದ್ದಳು. ಆಸನು ಅದನ್ನು ಕಡಿದು ಚೂರುಚೂರಾಗಿ ಮಾಡಿಸಿದನು. ನಂತರ ಅದನ್ನು ಕಿದ್ರೋನ್ ಕಣಿವೆಯಲ್ಲಿ ಸುಟ್ಟುಬಿಟ್ಟನು.


ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರೊಂದಿಗೆ ಹೊರಟನು. ಅವರು ಕಿದ್ರೋನ್ ಕಣಿವೆಯನ್ನು ದಾಟಿಹೋದರು. ಅದರ ಮತ್ತೊಂದು ಕಡೆಯಲ್ಲಿ ಆಲಿವ್ ಮರಗಳ ತೋಟವಿತ್ತು. ಯೇಸು ಮತ್ತು ಆತನ ಶಿಷ್ಯರು ಅಲ್ಲಿಗೆ ಹೋದರು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಸುಣ್ಣ ಹಚ್ಚಿದ ಸಮಾಧಿಗಳಂತಿದ್ದೀರಿ. ಆ ಸಮಾಧಿಗಳ ಹೊರಭಾಗ ಚಂದವಾಗಿ ಕಾಣುತ್ತದೆ. ಆದರೆ ಒಳಭಾಗ ಸತ್ತವರ ಎಲುಬುಗಳಿಂದಲೂ ಎಲ್ಲಾ ಬಗೆಯ ಹೊಲಸುಗಳಿಂದಲೂ ತುಂಬಿರುತ್ತದೆ.


ದೇವರು ಹೇಳಿದ್ದೇನೆಂದರೆ, “ಅದೇ ಸಮಯದಲ್ಲಿ ನೀನು ಅಶುದ್ಧರಾಗದ ಹಾಗೇ ನಾನು ನೋಡಿಕೊಳ್ಳುವೆನು. ಬೀಜ ಬೆಳೆಯಲು ನಾನು ಆಜ್ಞಾಪಿಸುವೆನು. ನಿಮಗೆ ಹಸಿವೆಯಾಗಲು ಬಿಡುವದಿಲ್ಲ.


ಆಮೇಲೆ ಯಾಜಕರು ಒಡಂಬಡಿಕೆಯ ಪೆಟ್ಟಿಗೆಯನ್ನು ಅದಕ್ಕಾಗಿ ಮಾಡಿದ್ದ ಮಹಾಪರಿಶುದ್ಧ ಸ್ಥಳದ ಕೆರೂಬಿಗಳ ರೆಕ್ಕೆಗಳ ಕೆಳಗೆ ಇಟ್ಟರು.


ಸೊಲೊಮೋನನು ಮಹಾಪವಿತ್ರ ಸ್ಥಳವನ್ನು ತಯಾರಿಸಿದನು. ಅದು ಇಪ್ಪತ್ತು ಮೊಳ ಉದ್ದ ಮತ್ತು ಇಪ್ಪತ್ತು ಮೊಳ ಅಗಲವಿತ್ತು. ದೇವಾಲಯದ ಅಗಲದಷ್ಟೇ ಅದು ಅಗಲವಿತ್ತು. ಅದರ ಗೋಡೆಗಳನ್ನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು. ಆ ಬಂಗಾರವು ಇಪ್ಪತ್ತಮೂರು ಟನ್ ತೂಕವಿತ್ತು.


ಜನರೆಲ್ಲರೂ ಜೋರಾಗಿ ಅಳುತ್ತಿದ್ದರು. ರಾಜನಾದ ದಾವೀದನು ಕಿದ್ರೋನ್ ಹಳ್ಳವನ್ನು ದಾಟಿಹೋದನು. ನಂತರ ಜನರೆಲ್ಲರೂ ಅರಣ್ಯಕ್ಕೆ ಹೋದರು.


ಆ ಜನರು ಜೆರುಸಲೇಮಿನೊಳಗಿದ್ದ ಅನ್ಯ ದೇವರುಗಳಿಗಾಗಿ ಮಾಡಿದ್ದ ಯಜ್ಞವೇದಿಕೆಗಳನ್ನು ಕೆಡವಿಹಾಕಿದರು; ವಿಗ್ರಹಗಳಿಗೆ ಧೂಪಸಮರ್ಪಣೆಗಾಗಿ ಮಾಡಿದ ವೇದಿಕೆಗಳನ್ನೂ ಹಾಳುಗೆಡವಿದರು. ಅವುಗಳನ್ನೆಲ್ಲಾ ಕಿದ್ರೋನ್ ಕಣಿವೆಯಲ್ಲಿ ಬಿಸಾಡಿದರು.


ಆ ಕೋಣೆಗಳನ್ನು ಶುದ್ಧಮಾಡಲು ನಾನು ಆಜ್ಞೆ ಮಾಡಿದೆನು. ಆಮೇಲೆ ದೇವಾಲಯದ ಪಾತ್ರೆಗಳನ್ನು, ವಸ್ತುಗಳನ್ನು, ಧಾನ್ಯಸಮರ್ಪಣೆಗಳನ್ನು ಮತ್ತು ಧೂಪವನ್ನು ಆ ಕೋಣೆಯೊಳಗೆ ತಂದಿಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು