Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:26 - ಪರಿಶುದ್ದ ಬೈಬಲ್‌

26 ಹೀಗೆ ಲೇವಿಯರು ದಾವೀದನ ಸಂಗೀತ ವಾದ್ಯಗಳೊಡನೆ ತಯಾರಾಗಿ ನಿಂತರು ಮತ್ತು ಯಾಜಕರು ತುತ್ತೂರಿಗಳೊಂದಿಗೆ ತಯಾರಾಗಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ಲೇವಿಯರು ದಾವೀದನ ವಾದ್ಯಗಳನ್ನೂ, ಯಾಜಕರೂ ತುತ್ತೂರಿಗಳನ್ನೂ ಹಿಡಿದು ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆ ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರಲು ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿಯನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರಲು ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವದಕ್ಕೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:26
13 ತಿಳಿವುಗಳ ಹೋಲಿಕೆ  

ನಾಲ್ಕು ಸಾವಿರ ಮಂದಿ ಲೇವಿಯರು ದ್ವಾರಪಾಲಕರಾಗಿಯೂ ನಾಲ್ಕು ಸಾವಿರ ಮಂದಿ ಲೇವಿಯರು ಗಾಯಕರಾಗಿಯೂ ಸೇವೆ ಮಾಡಬೇಕು. ನಾನು ಅವರಿಗಾಗಿ ವಿಶೇಷ ವಾದ್ಯಗಳನ್ನು ತಯಾರಿಸಿಟ್ಟಿರುತ್ತೇನೆ. ಅವರು ಅವುಗಳನ್ನು ನುಡಿಸುತ್ತಾ ದೇವರಿಗೆ ಸ್ತೋತ್ರ ಮಾಡಬೇಕು” ಅಂದನು.


ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಇವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವಾಗ ತುತ್ತೂರಿ ಊದುವ ಕೆಲಸವನ್ನು ಕೊಟ್ಟನು. ಓಬೇದೆದೋಮ್ ಮತ್ತು ಯೆಹೀಯ ಒಡಂಬಡಿಕೆಯ ಪೆಟ್ಟಿಗೆಗೆ ಕಾವಲುಗಾರರಾದರು.


ನಿಮ್ಮ ತಂತಿವಾದ್ಯಗಳಿಂದ ಹಾಡನ್ನು ಬಾರಿಸುವಿರಿ; ದಾವೀದನಂತೆ ನಿಮ್ಮ ವಾದ್ಯಗಳನ್ನು ಅಭ್ಯಾಸಿಸುವಿರಿ.


ನಾನು ಹೇಳುವುದೇನೆಂದರೆ: “ಯೆಹೋವನು ನನ್ನನ್ನು ರಕ್ಷಿಸಿದನು. ನಮ್ಮ ಜೀವಮಾನದ ಕಾಲವೆಲ್ಲಾ ಯೆಹೋವನ ಆಲಯದಲ್ಲಿ ನಾವು ಹಾಡುತ್ತಾ ವಾದ್ಯಬಾರಿಸುತ್ತಾ ಆತನನ್ನು ಸ್ತುತಿಸುವೆವು.”


ದೇವರ ಮಕ್ಕಳು ಹಬ್ಬಗಳನ್ನು ಆಚರಿಸಲು ಜೆರುಸಲೇಮಿಗೆ ಹೋಗುವರು. ಅವರು ಸಂತೋಷದಿಂದ ಹಾಡುತ್ತಾ ಕುಣಿದಾಡುವರು. “ಒಳ್ಳೆಯವುಗಳೆಲ್ಲ ಬರುವುದು ಜೆರುಸಲೇಮಿನಿಂದಲೇ” ಎಂದು ಅವರು ಹೇಳುವರು.


ಅಮಾವಾಸ್ಯೆಯಲ್ಲಿಯೂ ನಮ್ಮ ರಜಾಕಾಲವಾದ ಪೂರ್ಣಿಮೆಯಲ್ಲಿಯೂ ತುತ್ತೂರಿಯನ್ನು ಊದಿರಿ.


ಬೆನಾಯನೂ ಯೆಹಜೀಯೇಲನೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಬಳಿಯಲ್ಲಿ ತುತ್ತೂರಿಗಳನ್ನು ಯಾವಾಗಲೂ ಊದುವ ಯಾಜಕರಾಗಿದ್ದರು.


ಇದಲ್ಲದೆ, ನೀವು ಉತ್ಸವಕಾಲಗಳಲ್ಲಿಯೂ ಹಬ್ಬಗಳಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ನಿಮ್ಮನ್ನು ಗಮನಿಸಬೇಕೆಂದು ಆ ತುತ್ತೂರಿ ಧ್ವನಿಗಳು ನಿಮ್ಮ ದೇವರಿಗೆ ನೆನಪನ್ನುಂಟುಮಾಡುತ್ತವೆ. ನೀವು ಇದನ್ನು ಮಾಡಬೇಕೆಂದು ನಾನು ಆಜ್ಞಾಪಿಸುತ್ತೇನೆ. ನಿಮ್ಮ ದೇವರಾದ ಯೆಹೋವನು ನಾನೇ.”


ಯಾಜಕರಾದ ಆರೋನನ ಪುತ್ರರು ಮಾತ್ರವೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು