Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:31 - ಪರಿಶುದ್ದ ಬೈಬಲ್‌

31 ಹಿಜ್ಕೀಯನು ಜನರಿಗೆ, “ಯೆಹೂದದ ಜನರೇ, ನೀವೀಗ ನಿಮ್ಮನ್ನು ಯೆಹೋವನಿಗೆ ಒಪ್ಪಿಸಿದ್ದೀರಿ. ನೀವೀಗ ಬಂದು ದೇವಾಲಯದಲ್ಲಿ ನಿಮ್ಮನಿಮ್ಮ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎಂದು ಹೇಳಲು ಜನರು ತಮ್ಮ ಯಜ್ಞಗಳನ್ನು ಸಮರ್ಪಿಸಲು ಮುಂದೆ ಬಂದರು. ಸರ್ವಾಂಗಹೋಮ ಅರ್ಪಿಸಬೇಕೆಂದಿದ್ದವರು ಸರ್ವಾಂಗಹೋಮಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಮೇಲೆ ಹಿಜ್ಕೀಯನು ಸಭೆ ಸೇರಿದವರಿಗೆ, “ನೀವು ಈಗ ಸರ್ವೇಶ್ವರನಿಗಾಗಿ ನಿಮ್ಮನ್ನೇ ಪ್ರತಿಷ್ಠಿಸಿಕೊಂಡಿದ್ದೀರಿ; ಹತ್ತಿರ ಬಂದು ಸರ್ವೇಶ್ವರನ ಆಲಯಕ್ಕೆ ಸಮಾಧಾನಬಲಿಗಳನ್ನೂ ಕೃತಜ್ಞತಾಬಲಿಗಳನ್ನೂ ಸಮರ್ಪಿಸಿರಿ,” ಎಂದನು. ಸಭೆ ಸೇರಿದ್ದವರು ಸಮಾಧಾನ ಬಲಿಗಳನ್ನೂ ಕೃತಜ್ಞತಾಬಲಿಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವಇಚ್ಛೆಯಿಂದ ದಹನಬಲಿಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಮೇಲೆ ಹಿಜ್ಕೀಯನು ಸಮೂಹದವರಿಗೆ - ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರಲ್ಲಾ; ಹತ್ತಿರ ಬಂದು ಯೆಹೋವನ ಆಲಯಕ್ಕೋಸ್ಕರ ಸಮಾಧಾನಯಜ್ಞಗಳನ್ನೂ ಕೃತಜ್ಞತಾ ಯಜ್ಞಗಳನ್ನೂ ಸಮರ್ಪಿಸಿರಿ ಅನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ ಅನೇಕರು ಸ್ವೇಚ್ಫೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಹಿಜ್ಕೀಯನು ಅವರಿಗೆ ಉತ್ತರಕೊಟ್ಟು, “ಈಗ ನೀವು ನಿಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದರಿಂದ, ಸಮೀಪಕ್ಕೆ ಬಂದು ಬಲಿಗಳನ್ನೂ, ಸ್ತೋತ್ರ ಅರ್ಪಣೆಗಳನ್ನೂ ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬನ್ನಿರಿ,” ಎಂದನು. ಆಗ ಸಭೆಯವರು ಬಲಿಗಳನ್ನೂ, ಸ್ತೋತ್ರದ ಅರ್ಪಣೆಗಳನ್ನೂ ಮತ್ತು ಇಷ್ಟಪೂರ್ವಕ ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:31
10 ತಿಳಿವುಗಳ ಹೋಲಿಕೆ  

ನೀವು ಆರೋನನ ಸಂತತಿಯವರಾದ ಯೆಹೋವನ ಯಾಜಕರನ್ನು ಹೊರಡಿಸಿಬಿಟ್ಟರಿ. ನೀವು ಲೇವಿಯರನ್ನೂ ಹೊರಡಿಸಿಬಿಟ್ಟಿರಿ. ಅನ್ಯಜನಾಂಗದವರಂತೆ ನೀವು ನಿಮ್ಮಲ್ಲಿಂದಲೇ ಯಾಜಕರನ್ನು ಆರಿಸಿಕೊಂಡಿರಿ. ಯಾವನಾದರೂ ಏಳು ಟಗರುಗಳನ್ನೂ ಒಂದು ಎಳೇ ಹೋರಿಯನ್ನೂ ತಂದರೆ ನೀವು ಅವನನ್ನು ‘ದೇವರಲ್ಲದವುಗಳ’ ಸೇವೆಮಾಡಲು ಯಾಜಕನನ್ನಾಗಿ ಮಾಡುವಿರಿ.


ಕಾಣಿಕೆ ಕೊಡುವುದಕ್ಕೆ ಬಯಸಿದ ಎಲ್ಲಾ ಗಂಡಸರು, ಹೆಂಗಸರು ಎಲ್ಲಾ ವಿಧದ ಚಿನ್ನದ ಆಭರಣಗಳನ್ನು ತಂದರು. ಅವರು ತಮ್ಮ ಕಡಗ, ಮೂಗುತಿ, ಉಂಗುರ, ಕಂಠಮಾಲೆ ಮತ್ತು ಇತರ ಚಿನ್ನದ ಆಭರಣಗಳನ್ನು ತಂದರು. ಅವರೆಲ್ಲರು ತಮ್ಮ ಎಲ್ಲಾ ಕೊಡುಗೆಗಳನ್ನು ಯೆಹೋವನಿಗೆ ಕೊಟ್ಟರು. ಇದು ಯೆಹೋವನಿಗೆ ಕೊಟ್ಟ ವಿಶೇಷವಾದ ಕಾಣಿಕೆಯಾಗಿತ್ತು.


ಆದ್ದರಿಂದ ಯಾವ ಸ್ಥಳದಲ್ಲಿಯಾದರೂ ಇಸ್ರೇಲರಲ್ಲಿ ಉಳಿದವರು ಇದ್ದಲ್ಲಿ ಅಂಥವರಿಗೆ ಆ ಸ್ಥಳದವರು ಸಹಾಯ ಮಾಡಬೇಕು. ಅವರಿಗೆ ಬೆಳ್ಳಿ, ಬಂಗಾರ, ಪಶುಗಳನ್ನು ಮತ್ತು ಇತರ ವಸ್ತುಗಳನ್ನು ಕೊಡಲಿ. ಜೆರುಸಲೇಮಿನಲ್ಲಿನ ದೇವಾಲಯಕ್ಕೆ ಕಾಣಿಕೆಗಳನ್ನು ಕೊಡಲಿ.”


ಯೆಹೋವನನ್ನು ಜ್ಞಾಪಕಮಾಡುವ ಸಬ್ಬತ್ ದಿನಗಳ ಜೊತೆಗೆ ನೀವು ಆ ಹಬ್ಬದ ದಿನಗಳನ್ನು ಆಚರಿಸಬೇಕು. ನೀವು ಆ ಕಾಣಿಕೆಗಳನ್ನು ನಿಮ್ಮ ಇತರ ಕಾಣಿಕೆಗಳ ಜೊತೆಗೆ ಅರ್ಪಿಸಬೇಕು. ನೀವು ಮಾಡಿದ ಹರಕೆಗಳನ್ನು ನೆರವೇರಿಸುವುದಕ್ಕಾಗಿ ಯೆಹೋವನಿಗೆ ಅರ್ಪಿಸುವ ಕಾಣಿಕೆಗಳ ಜೊತೆಗೆ ಅವುಗಳನ್ನು ಅರ್ಪಿಸಬೇಕು. ನೀವು ಯೆಹೋವನಿಗೆ ಅರ್ಪಿಸುವ ಯಾವುದೇ ವಿಶೇಷ ಸಮರ್ಪಣೆಗಳೊಂದಿಗೆ ಅವುಗಳನ್ನು ಸಮರ್ಪಿಸಬೇಕು.


ಅವನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆ ಹೊಯಿದು ಮಾಡಿದ ಕಡುಬುಗಳನ್ನೂ ಎಣ್ಣೆಬೆರೆಸಿದ ಹೋಳಿಗೆಗಳನ್ನೂ ತರಬೇಕು.


ಯೆಹೋವನಿಗಾಗಿ ಕಾಣಿಕೆಗಳನ್ನು ಕೂಡಿಸಿರಿ. ನಿಮ್ಮಲ್ಲಿ ಪ್ರತಿಯೊಬ್ಬನು ತಾನು ಕೊಡುವಂಥದ್ದನ್ನು ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಬಳಿಕ ಆ ಕಾಣಿಕೆಯನ್ನು ಯೆಹೋವನ ಸನ್ನಿಧಿಗೆ ತರಬೇಕು. ಚಿನ್ನ, ಬೆಳ್ಳಿ, ತಾಮ್ರ,


ಹೀಗೆ ಒಟ್ಟು ಎಪ್ಪತ್ತು ಹೋರಿಗಳನ್ನೂ ನೂರು ಟಗರುಗಳನ್ನೂ ಇನ್ನೂರು ಕುರಿಗಳನ್ನೂ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿದರು.


“ರಾಜನು ತನ್ನ ಇಚ್ಛೆಯ ಪ್ರಕಾರ ಯೆಹೋವನಿಗೆ ಸರ್ವಾಂಗಹೋಮ ಅಥವಾ ಸಮಾಧಾನಯಜ್ಞ ಅಥವಾ ಮನಃಪೂರ್ವಕವಾದ ಕಾಣಿಕೆಯನ್ನು ಸಮರ್ಪಿಸುವಾಗ ಅವನಿಗಾಗಿ ಪೂರ್ವದ ಬಾಗಿಲು ತೆಗೆಯಲ್ಪಡಬೇಕು. ಆದರೆ ಅವನು ಸಬ್ಬತ್ ದಿನದಂತೆ ತನ್ನ ಕಾಣಿಕೆಗಳನ್ನು ಸಮರ್ಪಿಸಿದ ನಂತರ ಅವನು ಹಿಂತಿರುಗಿದಾಗ ಪ್ರವೇಶ ದ್ವಾರವು ಮುಚ್ಚಲ್ಪಡಬೇಕು.


“ಸಮಾಧಾನಯಜ್ಞದ ಕಟ್ಟಳೆಗಳು ಇಂತಿವೆ: ಯಾರಾದರೂ ಯೆಹೋವನಿಗೆ ಕೃತಜ್ಞತೆಯಿಂದ ಸಮಾಧಾನಯಜ್ಞಗಳನ್ನು ಅರ್ಪಿಸಬೇಕೆಂದಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು