Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:34 - ಪರಿಶುದ್ದ ಬೈಬಲ್‌

34 ಅಲ್ಲಿ ಪಶುಗಳನ್ನು ವಧಿಸಿ ಅದರ ಚರ್ಮಸುಲಿದು ಯಜ್ಞಕ್ಕಾಗಿ ಸಿದ್ಧಪಡಿಸಲು ಸಾಕಷ್ಟು ಯಾಜಕರು ಇರಲಿಲ್ಲ. ಆಗ ಅವರ ಬಂಧುಗಳಾದ ಲೇವಿಯರು ಬಂದು ಆ ಕೆಲಸ ಮುಗಿಯುವ ತನಕ ಅವರಿಗೆ ಸಹಾಯಮಾಡಿದರು. ಯೆಹೋವನ ಸೇವೆಗೆ ತಮ್ಮನ್ನು ಸಿದ್ಧಪಡಿಸಿಕೊಳ್ಳಲು ಲೇವಿಯರು ಯಾಜಕರಿಗಿಂತ ಹೆಚ್ಚು ಉತ್ಸುಕತೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯಾಜಕರು ಕೆಲವು ಮಂದಿಯಾದುದ್ದರಿಂದ ಸರ್ವಾಂಗಹೋಮದ ಪ್ರಾಣಿಗಳ ಚರ್ಮವನ್ನು ಸುಲಿಯುವುದು ಅವರಿಂದ ಆಗದೆ ಹೋಯಿತು. ಆದುದರಿಂದ ಮಿಕ್ಕ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸವು ಮುಗಿಯುವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. ತಮ್ಮನ್ನು ಶುದ್ಧಿಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಈ ಎಲ್ಲಾ ಪ್ರಾಣಿಗಳನ್ನು ವಧಿಸುವ ಕೆಲಸಕ್ಕೆ ಯಾಜಕರು ಸಾಲದೆಹೋದುದರಿಂದ ಆ ಕಾರ್ಯ ಮುಗಿವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯ ಮಾಡುತ್ತಿದ್ದರು; ಅಷ್ಟರಲ್ಲಿ ಮಿಕ್ಕ ಯಾಜಕರು ತಮ್ಮನ್ನೇ ಶುದ್ಧೀಪಡಿಸಿಕೊಳ್ಳುತ್ತಿದ್ದರು. ತಮ್ಮನ್ನು ಶುದ್ಧಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಚರ್ಮವನ್ನು ಸುಲಿಯುವದು [ಶುದ್ಧಿಪಡಿಸಿಕೊಂಡ] ಕೆಲವು ಮಂದಿ ಯಾಜಕರಿಂದ ಆಗದೆ ಹೋಯಿತು. ಆದದರಿಂದ ವಿುಕ್ಕ ಯಾಜಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸ ತೀರುವ ತನಕ ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಯಾಜಕರು ಸ್ವಲ್ಪ ಜನರಾಗಿದ್ದು, ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದುದರಿಂದ, ಕೆಲಸವು ತೀರುವವರೆಗೂ, ಮಿಕ್ಕ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವವರೆಗೂ ಲೇವಿಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಏಕೆಂದರೆ ಯಾಜಕರಿಗಿಂತ ತಮ್ಮನ್ನು ಪರಿಶುದ್ಧ ಮಾಡಿಕೊಳ್ಳುವುದರಲ್ಲಿ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:34
18 ತಿಳಿವುಗಳ ಹೋಲಿಕೆ  

ಪಸ್ಕದ ಪಶುಗಳನ್ನು ವಧಿಸಿದ ಬಳಿಕ ಲೇವಿಯರು ಅದರ ಚರ್ಮ ಸುಲಿದು ಅದರ ರಕ್ತವನ್ನು ಯಾಜಕರಿಗೆ ಕೊಟ್ಟರು. ಆ ರಕ್ತವನ್ನು ಯಾಜಕರು ವೇದಿಕೆಯ ಮೇಲೆ ಚಿಮಿಕಿಸಿದರು.


ಅದಕ್ಕೆ ಕಾರಣವೇನೆಂದರೆ, ನಿಯಮಿತ ದಿವಸದಲ್ಲಿ ಹಬ್ಬ ನಡೆಸಲು ಸಾಧ್ಯವಾಗಲಿಲ್ಲ. ಯಾಕೆಂದರೆ ಬೇಕಾದಷ್ಟು ಯಾಜಕರು ಆ ಪರಿಶುದ್ಧ ಸೇವೆಗಾಗಿ ತಮ್ಮನ್ನು ಸಿದ್ಧಪಡಿಸಿಕೊಂಡಿರಲಿಲ್ಲ. ಅಲ್ಲದೆ ಜೆರುಸಲೇಮಿನಲ್ಲಿಯೂ ಜನ ಸೇರಿ ಬರಲಿಲ್ಲ.


ನ್ಯಾಯವು ನೀತಿಯೊಂದಿಗೆ ಮರಳಿ ಬರುವುದು. ಆಗ ಜನರು ಒಳ್ಳೆಯವರೂ ಯಥಾರ್ಥವಂತರೂ ಆಗುವರು.


ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ ಸುತ್ತಲೂ ನಡೆಯಲು ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ.


ನನ್ನ ಗುರಾಣಿಯು ದೇವರೇ. ಆತನು ಯಥಾರ್ಥವಂತರನ್ನು ರಕ್ಷಿಸುವನು.


ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ಈ ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ.


ಆ ಲೇವಿಯರು ನಿನಗೆ ಕಾವಲುಗಾರರಾಗಿರಬೇಕು ಅಂದರೆ ಇಡೀ ಗುಡಾರವನ್ನು ಕಾಯಬೇಕು. ಆದರೆ ಅವರು ಪವಿತ್ರವಾದ ಪಾತ್ರೆಯನ್ನಾಗಲಿ ಯಜ್ಞವೇದಿಕೆಯನ್ನಾಗಲಿ ಮುಟ್ಟಬಾರದು; ಮುಟ್ಟಿದರೆ ಅವರೂ ಸಾಯುವರು ಮತ್ತು ನೀವೂ ಸಾಯುವಿರಿ.


ಇಸ್ರೇಲರ ಮಧ್ಯದಿಂದ ನಾನು ಲೇವಿಯರನ್ನು ಆರಿಸಿಕೊಂಡಿದ್ದೇನೆ ಮತ್ತು ದೇವದರ್ಶನಗುಡಾರದಲ್ಲಿ ಇಸ್ರೇಲರ ಪರವಾಗಿ ಕೆಲಸ ಮಾಡಲೂ ಮತ್ತು ಇಸ್ರೇಲರಿಗೆ ದೋಷಪರಿಹಾರ ಮಾಡುವುದಕ್ಕೂ ನಾನು ಅವರನ್ನು ಆರೋನ ಮತ್ತು ಅವನ ಪುತ್ರರಿಗೆ ಒಪ್ಪಿಸಿಕೊಟ್ಟಿದ್ದೇನೆ. ಇಸ್ರೇಲರನ್ನು ಶುದ್ಧಿಗೊಳಿಸುವ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಅವರು ಸಹಾಯ ಮಾಡುವರು. ಹೀಗಿರುವುದರಿಂದ ಇಸ್ರೇಲರು ಪವಿತ್ರವಸ್ತುಗಳ ಅತೀ ಸಮೀಪಕ್ಕೆ ಬಂದರೂ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”


“ನೀನು ಲೇವಿಯರನ್ನು ಶುದ್ಧೀಕರಿಸಿ ಅವರನ್ನು ವಿಶೇಷ ಕೊಡುಗೆಯಾಗಿ ನನಗೆ ಕೊಟ್ಟ ಮೇಲೆ, ಅವರು ಬಂದು ದೇವದರ್ಶನಗುಡಾರದ ಕೆಲಸವನ್ನು ಮಾಡಬಹುದು.


ಪವಿತ್ರ ಯಜ್ಞಕ್ಕಾಗಿ ಆರುನೂರು ಹೋರಿಗಳನ್ನೂ ಮೂರುಸಾವಿರ ಆಡುಕುರಿಗಳನ್ನೂ ಸಮರ್ಪಿಸಿದರು.


ಆ ಬಳಿಕ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ದರು. ಯಾಜಕರೂ ಲೇವಿಯರೂ ನಾಚಿಕೆಯಿಂದ ತಮ್ಮನ್ನು ಸೇವೆಗಾಗಿ ಸಿದ್ಧಪಡಿಸಿಕೊಂಡು ಸರ್ವಾಂಗಹೋಮಕ್ಕಾಗಿ ಕಾಣಿಕೆಗಳನ್ನು ಯೆಹೋವನ ಮಂದಿರಕ್ಕೆ ತಂದರು.


ಯೆಹೂದದ ಅರಸನಾದ ಹಿಜ್ಕೀಯನು ಸೇರಿಬಂದ ಜನರಿಗೆ ಒಂದು ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ವಧಿಸಿ ತಿನ್ನಲು ಕೊಟ್ಟನು. ಪ್ರಧಾನರು ಒಂದು ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಸೇರಿಬಂದ ಜನರಿಗೆ ಕೊಟ್ಟರು. ಎಷ್ಟೋ ಮಂದಿ ಯಾಜಕರು ಪವಿತ್ರ ಸೇವೆಗೆ ತಮ್ಮನ್ನು ಶುದ್ಧಪಡಿಸಿಕೊಂಡರು.


ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಮಾಡಿಕೊಂಡು ಹಬ್ಬವನ್ನು ಆಚರಿಸಲು ಸಿದ್ಧರಾದರು. ಪಸ್ಕದ ಕುರಿಮರಿಯನ್ನು ಎಲ್ಲಾ ಇಸ್ರೇಲರಿಗಾಗಿಯೂ ತಮಗಾಗಿಯೂ ಯಾಜಕರಿಗಾಗಿಯೂ ಲೇವಿಯರು ವಧಿಸಿದರು.


ನನ್ನ ಪವಿತ್ರಸ್ಥಳದಲ್ಲಿ ಸೇವೆಮಾಡಲು ಲೇವಿಯರು ಆರಿಸಲ್ಪಟ್ಟಿರುತ್ತಾರೆ. ಅವರು ಆಲಯದ ಪ್ರವೇಶ ದ್ವಾರವನ್ನು ಕಾವಲು ಕಾಯ್ದರು. ಆಲಯದೊಳಗೆ ಸೇವೆಮಾಡಿದರು. ಜನರು ಅರ್ಪಿಸುವ ಪ್ರಾಣಿಗಳನ್ನು ವಧಿಸಿ ಯಜ್ಞಕ್ಕಾಗಿ ಅವುಗಳನ್ನು ತಯಾರುಮಾಡಿ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದರು. ಜನರಿಗೆ ಸಹಾಯ ಮಾಡಿ, ಅವರ ಸೇವೆಮಾಡಲು ಅವರು ಆರಿಸಲ್ಪಟ್ಟಿದ್ದಾರೆ.


ಆದರೆ ಯಾಜಕರು ಸರಿಪಡಿಸಲಿಲ್ಲ. ಯೆಹೋವಾಷನು ರಾಜನಾದ ಇಪ್ಪತ್ತಮೂರನೆಯ ವರ್ಷದಲ್ಲಿ, ಯಾಜಕರಿನ್ನೂ ದೇವಾಲಯವನ್ನು ಸರಿಪಡಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು