Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:36 - ಪರಿಶುದ್ದ ಬೈಬಲ್‌

36 ದೇವರು ಅವುಗಳನ್ನು ತನ್ನ ಜನರಿಗಾಗಿ ಸಿದ್ಧಪಡಿಸಿದ್ದಕ್ಕಾಗಿಯೂ ಅದನ್ನು ಅಲ್ಪಕಾಲಾವಧಿಯಲ್ಲಿ ಮಾಡಿದ್ದಕ್ಕಾಗಿಯೂ ಹಿಜ್ಕೀಯನು ಮತ್ತು ಯೆಹೂದದ ಜನರು ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ದೇವರು ತಾನೇ ತನ್ನ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ, ಹಿಜ್ಕೀಯನೂ ಮತ್ತು ಎಲ್ಲಾ ಜನರೂ ಸಂತೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಹೀಗೆ ಸರ್ವೇಶ್ವರನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ಯಾರೂ ಗಮನಿಸುವುದಕ್ಕೆ ಮುಂಚೆಯೇ, ದೇವರು ತಾವೇ ತಮ್ಮ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ ಹಿಜ್ಕೀಯನೂ ಎಲ್ಲ ಜನರೂ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃಸ್ಥಾಪಿತವಾಯಿತು. ಯಾರೂ ನೆನಸದೆ ಇರುವಲ್ಲಿ ದೇವರು ತಾನೇ ತನ್ನ ಪ್ರಜೆಗಳಿಗೋಸ್ಕರ ಈ ಕಾರ್ಯವನ್ನು ನೆರವೇರಿಸಿದ್ದರಿಂದ ಹಿಜ್ಕೀಯನೂ ಎಲ್ಲಾ ಜನರೂ ಸಂತೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಗ ದೇವರು ತಮ್ಮ ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ, ಜನರೆಲ್ಲರೂ ಸಂತೋಷಪಟ್ಟರು. ಏಕೆಂದರೆ ಈ ಕಾರ್ಯವು ತ್ವರೆಯಾಗಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:36
10 ತಿಳಿವುಗಳ ಹೋಲಿಕೆ  

ಪೇತ್ರನು ಹೇಳಿದ್ದನ್ನು ಸ್ವೀಕರಿಸಿಕೊಂಡ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿನ ಸುಮಾರು ಮೂರುಸಾವಿರ ಜನರು ವಿಶ್ವಾಸಿಗಳ ಗುಂಪಿಗೆ ಸೇರಿದರು.


ಜನರು ತಾವು ಹೇಳಬೇಕಾದದ್ದನ್ನು ಆಲೋಚಿಸಿಕೊಂಡರೂ ನಾಲಿಗೆಗೆ ತಕ್ಕ ಮಾತುಗಳನ್ನು ಕೊಡುವವನು ಯೆಹೋವನೇ.


ಯೆಹೋವನೇ, ಕುಗ್ಗಿಹೋದವರ ಕೋರಿಕೆಯನ್ನು ನೀನು ಕೇಳುವೆ. ಅವರ ಮೊರೆಗೆ ಕಿವಿಗೊಟ್ಟು ಅವರನ್ನು ಪ್ರೋತ್ಸಾಹಿಸುವೆ.


ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಅವರು ಏಳು ದಿನಗಳ ತನಕ ಸಂತಸದಿಂದ ಆಚರಿಸಿದರು. ಯಾಕೆಂದರೆ ಅಶ್ಶೂರದ ಅರಸನ ಮನಸ್ಸನ್ನು ಮಾರ್ಪಡಿಸುವುದರ ಮೂಲಕ ಯೆಹೋವನು ಯೆಹೂದ್ಯರನ್ನು ಬಹಳ ಸಂತೋಷಗೊಳಿಸಿದ್ದನು. ಇಸ್ರೇಲ್ ದೇವರ ಆಲಯದ ಕಟ್ಟಡವು ಪೂರ್ಣಗೊಳ್ಳಲು ಅಶ್ಶೂರದ ಅರಸನು ಸಹಾಯ ಮಾಡಿದನು.


ಇಸ್ರೇಲರ ನಾಯಕರುಗಳು ಪೂರ್ಣಹೃದಯದಿಂದಲೂ ಸ್ವಇಚ್ಛೆಯಿಂದಲೂ ಇಷ್ಟೆಲ್ಲಾ ಕಾಣಿಕೆಗಳನ್ನು ಕೊಟ್ಟಿದ್ದರಿಂದ ಇಸ್ರೇಲರು ಸಂತೋಷಗೊಂಡರು; ಅರಸನಾದ ದಾವೀದನೂ ತುಂಬ ಸಂತೋಷಗೊಂಡನು.


ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿ ಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು.


ಆ ದಿವಸ ಎಷ್ಟೋ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಪಾನದ್ರವ್ಯದ ಹೋಮಗಳನ್ನೂ ಸಮರ್ಪಿಸಿದರು. ಹೀಗೆ ದೇವಾಲಯದಲ್ಲಿ ಆರಾಧನೆಯು ಮತ್ತೆ ಪ್ರಾರಂಭವಾಯಿತು.


ಅರಸನಾದ ಹಿಜ್ಕೀಯನು ಯೆಹೂದದವರಿಗೂ ಇಸ್ರೇಲರಿಗೂ ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳವರಿಗೂ ಸಂದೇಶ ಕಳುಹಿಸಿ, ಯೆಹೋವನ ಆಲಯಕ್ಕೆ ಬಂದು ಇಸ್ರೇಲಿನ ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸುವಂತೆ ಅವರನ್ನೆಲ್ಲಾ ಆಮಂತ್ರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು