Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:1 - ಪರಿಶುದ್ದ ಬೈಬಲ್‌

1 ಅರಸನಾದ ಹಿಜ್ಕೀಯನು ಯೆಹೂದದವರಿಗೂ ಇಸ್ರೇಲರಿಗೂ ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳವರಿಗೂ ಸಂದೇಶ ಕಳುಹಿಸಿ, ಯೆಹೋವನ ಆಲಯಕ್ಕೆ ಬಂದು ಇಸ್ರೇಲಿನ ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸುವಂತೆ ಅವರನ್ನೆಲ್ಲಾ ಆಮಂತ್ರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಹಿಜ್ಕೀಯನು, ಇಸ್ರಯೇಲ್ ದೇವರಾದ ಸರ್ವೇಶ್ವರಸ್ವಾಮಿಯ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಮಹಾಲಯಕ್ಕೆ ಬರಬೇಕೆಂದು ಎಲ್ಲ ಇಸ್ರಯೇಲರಿಗೆ, ಯೆಹೂದ್ಯರಿಗೆ, ಎಫ್ರಯಿಮರಿಗೆ ಹಾಗು ಮನಸ್ಸೆಯವರಿಗೆ ದೂತರ ಮುಖಾಂತರ ಮತ್ತು ಪತ್ರಗಳ ಮೂಲಕ ತಿಳಿಯಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಹಿಜ್ಕೀಯನು - ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕವನ್ನಾಚರಿಸುವದಕ್ಕಾಗಿ ಯೆರೂಸಲೇವಿುನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು ಎಲ್ಲಾ ಇಸ್ರಾಯೇಲ್ಯರಿಗೂ ಯೆಹೂದ್ಯರಿಗೂ ಎಫ್ರಾಯೀಮ್ಯರಿಗೂ ಮನಸ್ಸೆಯರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಅವರು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಪಸ್ಕವನ್ನು ಆಚರಿಸಲು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯಕ್ಕೆ ಬರುವಂತೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ ಎಫ್ರಾಯೀಮ್ಯರಿಗೂ ಮನಸ್ಸೆಯವರಿಗೂ ಪತ್ರಗಳನ್ನು ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:1
17 ತಿಳಿವುಗಳ ಹೋಲಿಕೆ  

“ಎಫ್ರಾಯೀಮೇ, ನಿನ್ನನ್ನು ಬಿಟ್ಟುಬಿಡಲು ನನಗೆ ಇಷ್ಟವಿಲ್ಲ. ಇಸ್ರೇಲೇ, ನಿನ್ನನ್ನು ಸಂರಕ್ಷಿಸಲು ನನಗೆ ಇಷ್ಟ. ನಿನ್ನನ್ನು ಅದ್ಮದಂತೆ ಮಾಡಲು ನನಗೆ ಮನಸ್ಸಿಲ್ಲ. ನಿನ್ನನ್ನು ಜೆಬೊಯೀಮಿನಂತೆ ಮಾಡಲು ನನಗೆ ಮನಸ್ಸಿಲ್ಲ. ನಾನು ನನ್ನ ನಿರ್ಧಾರವನ್ನು ಬದಲಾಯಿಸುತ್ತಿದ್ದೇನೆ. ನಿನ್ನ ಮೇಲಿರುವ ನನ್ನ ಪ್ರೀತಿಯು ಆಳವಾಗಿದೆ.


ಇಸ್ರೇಲಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆ ದುಷ್ಕೃತ್ಯಗಳು ಅವರನ್ನು ತಮ್ಮ ದೇವರ ಬಳಿಗೆ ಹಿಂತಿರುಗಿ ಬಾರದಂತೆ ಮಾಡುತ್ತಿವೆ. ಅವರು ಯಾವಾಗಲೂ ಇತರ ದೇವರುಗಳ ಹಿಂದೆ ಹೇಗೆ ಹೋಗೋಣ ಎಂದು ಮಾರ್ಗವನ್ನು ಹುಡುಕುತ್ತಿದ್ದಾರೆ. ಅವರಿಗೆ ಯೆಹೋವನ ಪರಿಚಯವಿಲ್ಲ.


ಪಸ್ಕದ ಕುರಿಮರಿಯನ್ನು ವಧಿಸಿ ಯೆಹೋವನಿಗಾಗಿ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಿಮ್ಮ ಸೋದರರಾದ ಇಸ್ರೇಲರಿಗೆ ಕುರಿಮರಿಯನ್ನು ಸಿದ್ಧಮಾಡಿರಿ. ಯೆಹೋವನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿರಿ. ಆತನು ಮೋಶೆಯ ಮೂಲಕ ನಮಗೆ ಈ ವಿಧಿನಿಯಮಗಳನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.


ಆದರೆ ಒಬ್ಬ ದೇವರ ಮನುಷ್ಯನು ಅಮಚ್ಯನ ಬಳಿಗೆ ಬಂದು, “ಅರಸನೇ, ಇಸ್ರೇಲಿನ ಸೈನಿಕರು ನಿನ್ನೊಂದಿಗೆ ಯುದ್ಧಕ್ಕೆ ಹೋಗಲು ಬಿಡಬೇಡ. ಯೆಹೋವನು ಇಸ್ರೇಲರೊಂದಿಗೂ ಎಫ್ರಾಯೀಮಿನ ಜನರೊಂದಿಗೂ ಇರಲಿಲ್ಲ.


ಲೇವಿಯರು ಇಸ್ರೇಲನ್ನು ಬಿಟ್ಟುಬಂದ ಬಳಿಕ ಇಸ್ರೇಲರಲ್ಲಿ ದೇವರಾದ ಯೆಹೋವನಿಗೆ ನಂಬಿಗಸ್ತರಾಗಿ ಸೇವಿಸುವವರು ಜೆರುಸಲೇಮ್ ನಗರಕ್ಕೆ ಬಂದು ದೇವರಿಗೆ ಯಜ್ಞಗಳನ್ನು ಅರ್ಪಿಸಿ ಆರಾಧಿಸಿದರು.


ಇಸ್ರೇಲ್ ಪ್ರಾಂತ್ಯದಲ್ಲಿದ್ದ ಯಾಜಕರೂ ಲೇವಿಯರೂ ರೆಹಬ್ಬಾಮನನ್ನು ಸೇರಿಕೊಂಡರು.


ಹನ್ನೆರಡು ಕುಲಗಳಿಗೆ ಅವರವರ ಪ್ರದೇಶಗಳ ಪೂರ್ಣಸ್ವಾಸ್ತ್ಯವನ್ನು ಕೊಡಲಾಯಿತು. ಯೋಸೇಫನ ಮನೆತನದವರು ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ವಿಂಗಡಿಸಲ್ಪಟ್ಟಿದ್ದರು. ಪ್ರತಿಯೊಂದು ಕುಲಕ್ಕೂ ಸ್ವಲ್ಪಸ್ವಲ್ಪ ಪ್ರದೇಶ ದೊರೆಯಿತು. ಆದರೆ ಲೇವಿ ಕುಲದ ಜನರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಅವರಿಗೆ ವಾಸಿಸಲು ಕೆಲವು ಊರುಗಳನ್ನು ಮಾತ್ರ ಕೊಡಲಾಯಿತು. ಈ ಊರುಗಳು ಪ್ರತಿಯೊಂದು ಕುಲದ ಜನರ ಪ್ರದೇಶದಲ್ಲಿ ಇದ್ದವು. ಅವರ ಪಶುಗಳಿಗಾಗಿ ಹುಲ್ಲುಗಾವಲುಗಳನ್ನು ಕೊಡಲಾಯಿತು.


ದೇವರು ಅವುಗಳನ್ನು ತನ್ನ ಜನರಿಗಾಗಿ ಸಿದ್ಧಪಡಿಸಿದ್ದಕ್ಕಾಗಿಯೂ ಅದನ್ನು ಅಲ್ಪಕಾಲಾವಧಿಯಲ್ಲಿ ಮಾಡಿದ್ದಕ್ಕಾಗಿಯೂ ಹಿಜ್ಕೀಯನು ಮತ್ತು ಯೆಹೂದದ ಜನರು ಸಂತೋಷಪಟ್ಟರು.


ಹಿಜ್ಕೀಯ ಅರಸನೂ ಅಧಿಕಾರಿಗಳೂ ಜೆರುಸಲೇಮಿನ ಸಭೆಯವರೆಲ್ಲರೂ ಎರಡನೆಯ ತಿಂಗಳಲ್ಲಿ ಹಬ್ಬವನ್ನು ಆಚರಿಸಲು ನಿರ್ಧರಿಸಿದರು.


ಯೆರೆಮೀಯನು ಬಾಬಿಲೋನಿನಲ್ಲಿದ್ದ ಯೆಹೂದ್ಯ ಸೆರೆಯಾಳುಗಳಿಗೆ, ಅಂದರೆ ಹಿರಿಯನಾಯಕರಿಗೆ, ಯಾಜಕರಿಗೆ, ಪ್ರವಾದಿಗಳಿಗೆ ಮತ್ತು ಇನ್ನುಳಿದ ಸಮಸ್ತ ಜನರಿಗೆ ಪತ್ರವನ್ನು ಕಳುಹಿಸಿದನು. ಇವರನ್ನು ನೆಬೂಕದ್ನೆಚ್ಚರನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳಾಗಿ ಕೊಂಡೊಯ್ದನು.


ನ್ಯಾಯಾಧೀಶರು ಇಸ್ರೇಲನ್ನು ಆಳಿದ ದಿನಗಳಿಂದ ಜನರು ಪಸ್ಕಹಬ್ಬವನ್ನು ಈ ರೀತಿಯಲ್ಲಿ ಆಚರಿಸಿರಲಿಲ್ಲ. ಇಸ್ರೇಲಿನ ರಾಜರುಗಳಾಗಲಿ ಇಲ್ಲವೆ ಯೆಹೂದದ ರಾಜರುಗಳಾಗಲಿ ಈ ರೀತಿ ಪಸ್ಕಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು