2 ಪೂರ್ವಕಾಲ ವೃತ್ತಾಂತ 30:14 - ಪರಿಶುದ್ದ ಬೈಬಲ್14 ಆ ಜನರು ಜೆರುಸಲೇಮಿನೊಳಗಿದ್ದ ಅನ್ಯ ದೇವರುಗಳಿಗಾಗಿ ಮಾಡಿದ್ದ ಯಜ್ಞವೇದಿಕೆಗಳನ್ನು ಕೆಡವಿಹಾಕಿದರು; ವಿಗ್ರಹಗಳಿಗೆ ಧೂಪಸಮರ್ಪಣೆಗಾಗಿ ಮಾಡಿದ ವೇದಿಕೆಗಳನ್ನೂ ಹಾಳುಗೆಡವಿದರು. ಅವುಗಳನ್ನೆಲ್ಲಾ ಕಿದ್ರೋನ್ ಕಣಿವೆಯಲ್ಲಿ ಬಿಸಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವರು ಜೆರುಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರು ಯೆರೂಸಲೇವಿುನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ಹಳ್ಳದಲ್ಲಿ ಬೀಸಾಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು. ಅಧ್ಯಾಯವನ್ನು ನೋಡಿ |
“‘ಒಂದುವೇಳೆ ನೀವು, “ನಾವು ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ” ಎಂದು ಹೇಳಬಹುದು. ಆದರೆ ಜನರು ಯೆಹೋವನನ್ನು ಆರಾಧಿಸುತ್ತಿದ್ದ ವೇದಿಕೆಗಳನ್ನೂ ಎತ್ತರವಾದ ಸ್ಥಳಗಳನ್ನೂ ಹಿಜ್ಕೀಯನು ನಾಶಮಾಡಿದ್ದಾನೆ. ಅಲ್ಲದೆ, ಯೆಹೂದ ಮತ್ತು ಜೆರುಸಲೇಮಿನಲ್ಲಿರುವ ಜನರಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯಲ್ಲಿಯೇ ಆರಾಧಿಸಬೇಕು” ಎಂದು ಆಜ್ಞಾಪಿಸಿರುವುದು ನನಗೆ ಗೊತ್ತಿದೆ.