Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:21 - ಪರಿಶುದ್ದ ಬೈಬಲ್‌

21 ಇಸ್ರೇಲರು ಜೆರುಸಲೇಮಿನಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸಗಳ ತನಕ ಆಚರಿಸಿದರು. ಅವರೆಲ್ಲಾ ಹರ್ಷದಿಂದ ತುಂಬಿ ಹಬ್ಬವನ್ನು ಆಚರಿಸಿದರು. ಯಾಜಕರೂ ಲೇವಿಯರೂ ಪ್ರತಿದಿನ ಗಟ್ಟಿಯಾಗಿ ಸ್ತುತಿಗೀತೆಗಳನ್ನು ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಜೆರುಸಲೇಮಿನಲ್ಲಿ ಕೂಡಿಬಂದ ಇಸ್ರಯೇಲರು ಏಳು ದಿನಗಳವರೆಗೂ ಮಹಾಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಿದರು. ಲೇವಿಯರೂ ಯಾಜಕರೂ ಮಹಾವಾದ್ಯದೊಡನೆ ಸರ್ವೇಶ್ವರನನ್ನು ಪ್ರತಿದಿನವೂ ಕೀರ್ತಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆರೂಸಲೇವಿುನಲ್ಲಿ ಕೂಡಿಬಂದ ಇಸ್ರಾಯೇಲ್ಯರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ ಯಾಜಕರೂ ಮಹಾವಾದ್ಯದೊಡನೆ ಯೆಹೋವನನ್ನು ಪ್ರತಿದಿನವೂ ಕೀರ್ತಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ ಯೆರೂಸಲೇಮಿನಲ್ಲಿದ್ದ ಇಸ್ರಾಯೇಲರು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಲೇವಿಯರೂ ಯಾಜಕರೂ ಯೆಹೋವ ದೇವರಿಗೆ ಸಮರ್ಪಿತವಾದ ಮಹಾ ಶಬ್ದದ ವಾದ್ಯಗಳಿಂದ ಯೆಹೋವ ದೇವರಿಗೆ ಹಾಡಿ ಪ್ರತಿದಿನವೂ ಯೆಹೋವ ದೇವರನ್ನು ಸ್ತುತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:21
22 ತಿಳಿವುಗಳ ಹೋಲಿಕೆ  

“ಏಳು ದಿನಗಳವರೆಗೆ ನೀವು ಕೇವಲ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು. ಏಳನೆಯ ದಿನದಲ್ಲಿ ಯೊಹೋವನ ಘನತೆಗಾಗಿ ಒಂದು ದೊಡ್ಡ ಹಬ್ಬ ಮಾಡಬೇಕು.


ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು.


ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.


ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನ ಬಂತು. ಯೆಹೂದ್ಯರು ಪಸ್ಕದ ಕುರಿಮರಿಗಳನ್ನು ಕೊಯ್ಯುವ ದಿನ ಅದಾಗಿತ್ತು.


ಯೆಹೂದ್ಯರ ಹುಳಿಯಿಲ್ಲದ ರೊಟ್ಟಿಯ ಹಬ್ಬ ಅಂದರೆ ಪಸ್ಕಹಬ್ಬವು ಹತ್ತಿರವಾಗಿತ್ತು.


“ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ಈ ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕೆಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.


ಜೆರುಸಲೇಮಿನಲ್ಲಿ ಸಂತಸವು ತುಂಬಿತ್ತು. ಸೊಲೊಮೋನ್ ಅರಸನ ಸಮಯದಿಂದ ಅಂದಿನ ತನಕ ಅಂಥಾ ಹಬ್ಬವು ಆಚರಿಸಲ್ಪಟ್ಟಿರಲಿಲ್ಲ.


ಯೆಹೋಷಾಫಾಟನು ಜನರ ಸಲಹೆಗಳನ್ನು ಕೇಳಿದನು; ಯೆಹೋವನನ್ನು ಸ್ತುತಿಸಲು ಗಾಯಕರನ್ನು ಆರಿಸಿದನು; ಯಾಕೆಂದರೆ ಆತನು ಪರಿಶುದ್ಧನು ಮತ್ತು ಅದ್ಭುತಸ್ವರೂಪನು. ಅವರು ಸೈನ್ಯದ ಮುಂದುಗಡೆಯಲ್ಲಿ ಹೋಗುತ್ತಾ ಆತನಿಗೆ ಸ್ತುತಿಗೀತೆಯನ್ನು ಹಾಡಿದರು. ಆ ಗಾಯಕರು, “ಯೆಹೋವನಿಗೆ ಸ್ತೋತ್ರಮಾಡಿರಿ. ಆತನ ಕರುಣೆಯು ನಿರಂತರವಾದದ್ದು” ಎಂದು ಹಾಡಿದರು.


ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಂದು ಸೊಲೊಮೋನನು ನೆರೆದು ಬಂದಿದ್ದ ಜನರನ್ನು ಅವರ ಮನೆಗಳಿಗೆ ಕಳುಹಿಸಿದನು. ದೇವರಾದ ಯೆಹೋವನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಮತ್ತು ಎಲ್ಲಾ ಇಸ್ರೇಲರಿಗೂ ಕರುಣೆಯನ್ನು ತೋರಿಸಿದ್ದಕ್ಕಾಗಿ ಜನರೆಲ್ಲರೂ ಹರ್ಷಿಸುತ್ತಾ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು.


ನಿಮ್ಮ ಹೆಂಡತಿಮಕ್ಕಳೊಂದಿಗೆ, ಸೇವಕಸೇವಕಿಯರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿರುವ ಲೇವಿಯರೊಂದಿಗೆ, ಪರದೇಶಿಗಳೊಂದಿಗೆ, ಅನಾಥರೊಂದಿಗೆ ಮತ್ತು ವಿಧವೆಯರೊಂದಿಗೆ ಆನಂದದಿಂದ ಹಬ್ಬ ಮಾಡಿರಿ.


ಅಲ್ಲಿಗೆ ನಿಮ್ಮ ಹೆಂಡತಿ ಮಕ್ಕಳೊಂದಿಗೆ, ನಿಮ್ಮ ಸೇವಕರೊಂದಿಗೆ ಮತ್ತು ನಿಮ್ಮ ಪಟ್ಟಣದಲ್ಲಿ ಸ್ವಾಸ್ತ್ಯವನ್ನು ಹೊಂದದೆ ಇರುವ ಲೇವಿಯರೊಂದಿಗೆ ಹೋಗಿ ಯೆಹೋವನ ಸಮಕ್ಷಮದಲ್ಲಿ ಸಂತೋಷಪಡಬೇಕು.


ನೀವೂ ಮತ್ತು ನಿಮ್ಮ ಕುಟುಂಬಗಳವರೂ ಅಲ್ಲಿ ಒಟ್ಟಿಗೆ ಊಟ ಮಾಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿರುವನು. ನೀವು ದುಡಿದು ಸಂಪಾದಿಸಿದ ಎಲ್ಲಾ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಂಡು ಆ ಸ್ಥಳದಲ್ಲಿ ಆನಂದಿಸುವಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಆ ಎಲ್ಲಾ ಒಳ್ಳೆಯವುಗಳನ್ನು ನಿಮಗೆ ಕೊಟ್ಟನೆಂದು ನೀವು ಜ್ಞಾಪಿಸಿಕೊಳ್ಳುವಿರಿ.


“ಅದೇ ತಿಂಗಳ ಹದಿನೈದನೆಯ ದಿನದಲ್ಲಿ ಯೆಹೋವನ ಹುಳಿಯಿಲ್ಲದ ರೊಟ್ಟಿಯ ಹಬ್ಬವಿರುತ್ತದೆ. ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನುವಿರಿ.


ಆದರೆ ಆಶೇರ್, ಮನಸ್ಸೆ ಮತ್ತು ಜೆಬುಲೂನ್ ಪ್ರಾಂತ್ಯಗಳ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಜೆರುಸಲೇಮಿಗೆ ಹೋದರು.


ಇಸ್ರೇಲಿನ ಜನರೂ ಅಲ್ಲಿ ಸೇರಿಬಂದವರೂ ಪಸ್ಕಹಬ್ಬವನ್ನು ಮತ್ತು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು.


ಸೆರೆವಾಸದಿಂದ ಮರಳಿಬಂದ ಇಸ್ರೇಲರು ಬಿಡಾರಗಳನ್ನು ಹಾಕಿಕೊಂಡು ಅವುಗಳಲ್ಲಿ ವಾಸಿಸಿದರು. ನೂನನ ಮಗನಾದ ಯೆಹೋಶುವನ ಕಾಲದಿಂದ ಇಂದಿನವರೆಗೂ ಇಸ್ರೇಲರು ಇಂಥ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲಿಲ್ಲ. ಪ್ರತಿಯೊಬ್ಬರೂ ಬಹು ಸಂತೋಷಗೊಂಡಿದ್ದರು.


ರಾಜನಾದ ಹಿಜ್ಕೀಯನು ಮತ್ತು ಅವನ ಅಧಿಕಾರಿಗಳು ಯೆಹೋವನಿಗೆ ಸ್ತೋತ್ರ ಮಾಡಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಆಸಾಫ ಮತ್ತು ಅರಸನಾಗಿದ್ದ ದಾವೀದನು ರಚಿಸಿದ್ದ ಹಾಡುಗಳನ್ನು ಗಾಯಕರು ಹಾಡಿ ದೇವರನ್ನು ಸ್ತುತಿಸಿದರು. ಹೀಗೆ ಜನರೆಲ್ಲಾ ಸಂತೋಷಪಟ್ಟರು. ಅವರೆಲ್ಲರು ಅಡ್ಡಬಿದ್ದು ದೇವರನ್ನು ಆರಾಧಿಸಿದರು.


ಹಬ್ಬದ ದಿನಗಳು ಮುಗಿದ ನಂತರ ಅವರು ಮನೆಗೆ ಹೋದರು. ಆದರೆ ಬಾಲಕನಾದ ಯೇಸು ಜೆರುಸಲೇಮಿನಲ್ಲಿ ಉಳಿದುಕೊಂಡನು. ಆತನ ತಂದೆತಾಯಿಗಳಿಗೆ ಇದು ತಿಳಿದಿರಲಿಲ್ಲ. ಯೇಸುವು ಯಾತ್ರಿಕರ ಗುಂಪಿನಲ್ಲಿರಬಹುದೆಂದು ಭಾವಿಸಿಕೊಂಡ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು