Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:27 - ಪರಿಶುದ್ದ ಬೈಬಲ್‌

27 ಯಾಜಕರು ಮತ್ತು ಲೇವಿಯರು ಎದ್ದುನಿಂತು ಜನರನ್ನು ಯೆಹೋವನು ಆಶೀರ್ವದಿಸುವಂತೆ ಕೇಳಿಕೊಂಡರು. ದೇವರು ಪರಲೋಕದ ತನ್ನ ಪವಿತ್ರ ನಿವಾಸಕ್ಕೆ ಬಂದ ಆ ಪ್ರಾರ್ಥನೆಗೆ ಕಿವಿಗೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯಾಜಕರು ಆಗಿದ್ದ ಲೇವಿಯರು ಆಮೇಲೆ ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರ ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆ ಪರಲೋಕದಲ್ಲಿರುವ ಆ ದೇವರ ಪರಿಶುದ್ಧ ನಿವಾಸಕ್ಕೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರವು [ದೇವರಿಗೆ] ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:27
14 ತಿಳಿವುಗಳ ಹೋಲಿಕೆ  

ದೇವರು ತನ್ನ ಪವಿತ್ರ ಆಲಯದಲ್ಲಿ, ಅನಾಥರಿಗೆ ತಂದೆಯೂ ವಿಧವೆಯರಿಗೆ ಪಾಲಕನೂ ಆಗಿದ್ದಾನೆ.


ನಿನ್ನ ಪರಿಶುದ್ಧ ನಿವಾಸದಿಂದ ನನ್ನನ್ನು ನೋಡು. ನಿನ್ನ ಜನಾಂಗವಾದ ಇಸ್ರೇಲನ್ನು ಆಶೀರ್ವದಿಸು. ನೀನು ನಮಗೆ ಕೊಟ್ಟಿರುವ ದೇಶವನ್ನು ಆಶೀರ್ವದಿಸು. ಸಮೃದ್ಧಿಯಿಂದ ಕೂಡಿದ ಈ ದೇಶವನ್ನು ನಮಗೆ ಕೊಡುವೆ ಎಂದು ನಮ್ಮ ಪೂರ್ವಿಕರಿಗೆ ನೀನು ವಾಗ್ದಾನ ಮಾಡಿರುವೆ.’


ಆ ಬಳಿಕ ಯೆಹೋಯಾದನು ದೇವಾಲಯದೊಳಗೆ ಸೇವೆಮಾಡುವ ಜವಾಬ್ದಾರಿಕೆಯನ್ನು ಕೆಲವು ಯಾಜಕರಿಗೆ ವಹಿಸಿದನು. ಅವರೆಲ್ಲಾ ಲೇವಿಯರಾಗಿದ್ದರು. ದಾವೀದನು ಅವರಿಗೆ ದೇವಾಲಯದ ಜವಾಬ್ದಾರಿಕೆಯನ್ನು ಕೊಟ್ಟಿದ್ದನು. ಮೋಶೆಯು ಕೊಟ್ಟಿದ್ದ ನಿಯಮಕ್ಕನುಸಾರವಾಗಿ ಅವರು ಸರ್ವಾಂಗಹೋಮವನ್ನು ಅರ್ಪಿಸಿದರು. ದಾವೀದನು ಆಜ್ಞಾಪಿಸಿದಂತೆ ಅವರು ಹೋಮಗಳನ್ನೂ ಯಜ್ಞಗಳನ್ನೂ ಅರ್ಪಿಸುವಾಗ ಹಾಡುತ್ತಾ ಸಂತೋಷದಿಂದ ತಮ್ಮ ಕೆಲಸವನ್ನು ಮಾಡಿದರು.


ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. ಆ ದೇವದೂತನು ಅವನಿಗೆ, “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.


ಯೆಹೋವನು ಹೇಳುವುದೇನೆಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!


ಯೆಹೋವನೇ, ಈಗ ನಡೆಯುವ ಸಂಗತಿಗಳನ್ನು ಪರಲೋಕದಿಂದ ನೋಡು. ಪರಲೋಕದಲ್ಲಿರುವ ನಿನ್ನ ಪವಿತ್ರಸ್ಥಾನದಿಂದ ನಮ್ಮನ್ನು ದೃಷ್ಟಿಸು. ನಮ್ಮ ಮೇಲಿನ ಗಾಢವಾದ ಪ್ರೀತಿ ಎಲ್ಲಿದೆ? ನಿನ್ನ ಅಂತರಂಗದೊಳಗಿಂದ ಬಂದ ಕಾರ್ಯಗಳೆಲ್ಲಿ? ನಮ್ಮ ಮೇಲೆ ನಿನಗಿರುವ ಕರುಣೆ ಎಲ್ಲಿ? ನಿನ್ನ ದಯಾಪರವಾದ ಪ್ರೀತಿಯನ್ನು ನಮ್ಮಿಂದ ಯಾಕೆ ಅಡಗಿಸುವೆ?


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ದಯವಿಟ್ಟು ಅವನ ಪ್ರಾರ್ಥನೆಯನ್ನು ನಿನ್ನ ನಿವಾಸವಾದ ಪರಲೋಕದಿಂದ ಆಲಿಸಿ, ಜನರನ್ನು ಕ್ಷಮಿಸಿ, ಅವರಿಗೆ ಸಹಾಯ ಮಾಡು. ಜನರು ನಿಜವಾಗಿ ಆಲೋಚಿಸುವ ಸಂಗತಿಗಳು ನಿನಗೆ ಮಾತ್ರ ತಿಳಿದಿವೆ. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಗೂ ತೀರ್ಪುನೀಡು ಮತ್ತು ಅವನಿಗೆ ನ್ಯಾಯವಾದದ್ದನ್ನು ಮಾಡು.


ಯೆಹೋವನೇ, ನಾನು ಮತ್ತು ಇಸ್ರೇಲಿನ ಜನರೆಲ್ಲರೂ ಈ ಸ್ಥಳದ ಕಡೆಗೆ ತಿರುಗಿ, ನಿನ್ನಲ್ಲಿ ಪ್ರಾರ್ಥಿಸುತ್ತೇವೆ. ದಯವಿಟ್ಟು ಆ ಪ್ರಾರ್ಥನೆಗಳನ್ನು ಲಾಲಿಸು. ನೀನು ಪರಲೋಕದಲ್ಲಿ ವಾಸಿಸುತ್ತಿರುವಿಯೆಂದು ನಮಗೆ ಗೊತ್ತಿದೆ. ನೀನು ನಮ್ಮ ಪ್ರಾರ್ಥನೆಗಳನ್ನು ಅಲ್ಲಿಯೇ ಕೇಳಿ, ನಮಗೆ ಕ್ಷಮೆಯನ್ನು ಅನುಗ್ರಹಿಸು.


ಆ ಸಮಯದಲ್ಲಿ ಯೆಹೋವನು ಲೇವಿಕುಲದವರನ್ನು ಒಂದು ವಿಶೇಷವಾದ ಕೆಲಸಕ್ಕಾಗಿ ಬೇರೆ ಕುಲಗಳವರಿಂದ ಪ್ರತ್ಯೇಕಿಸಿದನು. ಅವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಎತ್ತಿಕೊಂಡು ಹೋಗುವ ಕೆಲಸ ಕೊಡಲ್ಪಟ್ಟಿತು. ಯೆಹೋವನ ಸನ್ನಿಧಾನದಲ್ಲಿ ಅವರು ಯಾಜಕರ ಕೆಲಸವನ್ನು ಮಾಡಿದರು. ಅಲ್ಲದೆ ಯೆಹೋವನ ಜನರಿಗೆ ದೇವರ ಆಶೀರ್ವಾದ ವಚನಗಳನ್ನು ಹೇಳುವ ಕೆಲಸವನ್ನು ಅವರು ಮಾಡಿದರು.


“ನನ್ನ ಆತ್ಮಕ್ಕೆ ಯಾವ ನಿರೀಕ್ಷೆಯೂ ಇರಲಿಲ್ಲ. ಆಗ ನಾನು ಯೆಹೋವನನ್ನು ಸ್ಮರಿಸಿದೆನು. ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದೆನು. ನೀನು ನಿನ್ನ ಪವಿತ್ರ ಆಲಯದಿಂದ ನನ್ನ ಪ್ರಾರ್ಥನೆಯನ್ನು ಕೇಳಿದೆ.


ಮೋಶೆಯು ಎಲ್ಲಾ ಕೆಲಸವನ್ನು ಸೂಕ್ಷ್ಮವಾಗಿ ಪರೀಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಎಲ್ಲವೂ ಮಾಡಲ್ಪಟ್ಟಿದ್ದರಿಂದ ಮೋಶೆ ಅವರನ್ನು ಆಶೀರ್ವದಿಸಿದನು.


ನಿನ್ನ ಜನರಾದ ಇಸ್ರೇಲರು ಮತ್ತು ನಾನು ಮಾಡುವ ಪ್ರಾರ್ಥನೆಯನ್ನು ಆಲೈಸು. ನಾವು ಈ ದೇವಾಲಯದ ಕಡೆಗೆ ತಿರುಗಿಕೊಂಡು ನಿನಗೆ ಪ್ರಾರ್ಥಿಸುವಾಗ ನಿನ್ನ ನಿವಾಸವಾದ ಪರಲೋಕದಿಂದ ನಮ್ಮ ಪ್ರಾರ್ಥನೆಯನ್ನು ಆಲೈಸು; ನಮ್ಮ ಪಾಪಗಳನ್ನು ಕ್ಷಮಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು