Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:3 - ಪರಿಶುದ್ದ ಬೈಬಲ್‌

3 ಅದಕ್ಕೆ ಕಾರಣವೇನೆಂದರೆ, ನಿಯಮಿತ ದಿವಸದಲ್ಲಿ ಹಬ್ಬ ನಡೆಸಲು ಸಾಧ್ಯವಾಗಲಿಲ್ಲ. ಯಾಕೆಂದರೆ ಬೇಕಾದಷ್ಟು ಯಾಜಕರು ಆ ಪರಿಶುದ್ಧ ಸೇವೆಗಾಗಿ ತಮ್ಮನ್ನು ಸಿದ್ಧಪಡಿಸಿಕೊಂಡಿರಲಿಲ್ಲ. ಅಲ್ಲದೆ ಜೆರುಸಲೇಮಿನಲ್ಲಿಯೂ ಜನ ಸೇರಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾಕೆಂದರೆ ಯಾಜಕರಲ್ಲಿ ಸಾಕಷ್ಟು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಒಟ್ಟಾಗಿ ಸೇರಿ ಬಂದಿರಲಿಲ್ಲವಾದುದರಿಂದ ಕೂಡಲೆ ಪಸ್ಕಹಬ್ಬವನ್ನು ಆಚರಿಸಲು ಸಾಧ್ಯವಾಗುವುದಿಲ್ಲವೆಂದು ಅರಸನಿಗೂ ಅವನ ಸರದಾರರಿಗೂ ಯೆರೂಸಲೇಮಿನ ಸರ್ವಸಂಘದವರಿಗೂ ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎರಡನೆಯ ತಿಂಗಳಿನಲ್ಲಿ ಅದನ್ನು ಆಚರಿಸಬೇಕೆಂದು ಅಭಿಪ್ರಾಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎರಡನೆಯ ತಿಂಗಳಿನಲ್ಲಿ ಅದನ್ನು ಆಚರಿಸಬೇಕೆಂದು ಅಭಿಪ್ರಾಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯಾಜಕರು ತಮ್ಮನ್ನು ತಕ್ಕ ಹಾಗೆ ಪ್ರತಿಷ್ಠೆ ಮಾಡಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಕೂಡಿರಲಿಲ್ಲವಾದುದರಿಂದ ಆ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:3
8 ತಿಳಿವುಗಳ ಹೋಲಿಕೆ  

ಅಲ್ಲಿ ಪಶುಗಳನ್ನು ವಧಿಸಿ ಅದರ ಚರ್ಮಸುಲಿದು ಯಜ್ಞಕ್ಕಾಗಿ ಸಿದ್ಧಪಡಿಸಲು ಸಾಕಷ್ಟು ಯಾಜಕರು ಇರಲಿಲ್ಲ. ಆಗ ಅವರ ಬಂಧುಗಳಾದ ಲೇವಿಯರು ಬಂದು ಆ ಕೆಲಸ ಮುಗಿಯುವ ತನಕ ಅವರಿಗೆ ಸಹಾಯಮಾಡಿದರು. ಯೆಹೋವನ ಸೇವೆಗೆ ತಮ್ಮನ್ನು ಸಿದ್ಧಪಡಿಸಿಕೊಳ್ಳಲು ಲೇವಿಯರು ಯಾಜಕರಿಗಿಂತ ಹೆಚ್ಚು ಉತ್ಸುಕತೆಯಲ್ಲಿದ್ದರು.


ಆದ್ದರಿಂದ ಪ್ರಥಮ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಲು ಆರಂಭಿಸಿ ಅದೇ ತಿಂಗಳ ಇಪ್ಪತ್ತೊಂದನೇ ದಿನದ ಸಾಯಂಕಾಲದವರೆಗೂ ತಿನ್ನುವಿರಿ.


ಈ ತಿಂಗಳ ಹದಿನಾಲ್ಕನೆಯ ದಿನದವರೆಗೆ ನೀವು ಆ ಪಶುವನ್ನು ಸಾಕಬೇಕು. ಅಂದು ಸಂಜೆ ಇಸ್ರೇಲರೆಲ್ಲರೂ ಆ ಪಶುಗಳನ್ನು ಕೊಯ್ಯಬೇಕು.


ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಲೇವಿಯರು ಪವಿತ್ರ ಸೇವೆಯನ್ನು ಮಾಡಲು ಸಿದ್ಧರಾದರು. ತಿಂಗಳಿನ ಎಂಟನೆಯ ದಿನದಲ್ಲಿ ದೇವಾಲಯದ ಮಂಟಪಕ್ಕೆ ಲೇವಿಯರು ಬಂದರು. ಎಂಟು ದಿನಗಳಲ್ಲಿ ಅವರು ದೇವಾಲಯವನ್ನೆಲ್ಲಾ ಶುಚಿಮಾಡಿದರು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಅವರು ಶುಚಿಮಾಡುವ ಕಾರ್ಯವನ್ನು ಮುಗಿಸಿದರು.


ಈ ನಿರ್ಧಾರವು ಅರಸನಾದ ಹಿಜ್ಕೀಯನಿಗೂ ಜನರಿಗೂ ಸರಿಕಂಡಿತು.


ಆ ಬಳಿಕ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ದರು. ಯಾಜಕರೂ ಲೇವಿಯರೂ ನಾಚಿಕೆಯಿಂದ ತಮ್ಮನ್ನು ಸೇವೆಗಾಗಿ ಸಿದ್ಧಪಡಿಸಿಕೊಂಡು ಸರ್ವಾಂಗಹೋಮಕ್ಕಾಗಿ ಕಾಣಿಕೆಗಳನ್ನು ಯೆಹೋವನ ಮಂದಿರಕ್ಕೆ ತಂದರು.


ಯೆಹೂದದ ಅರಸನಾದ ಹಿಜ್ಕೀಯನು ಸೇರಿಬಂದ ಜನರಿಗೆ ಒಂದು ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ವಧಿಸಿ ತಿನ್ನಲು ಕೊಟ್ಟನು. ಪ್ರಧಾನರು ಒಂದು ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಸೇರಿಬಂದ ಜನರಿಗೆ ಕೊಟ್ಟರು. ಎಷ್ಟೋ ಮಂದಿ ಯಾಜಕರು ಪವಿತ್ರ ಸೇವೆಗೆ ತಮ್ಮನ್ನು ಶುದ್ಧಪಡಿಸಿಕೊಂಡರು.


ಪಸ್ಕದ ಕುರಿಮರಿಯನ್ನು ವಧಿಸಿ ಯೆಹೋವನಿಗಾಗಿ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಿಮ್ಮ ಸೋದರರಾದ ಇಸ್ರೇಲರಿಗೆ ಕುರಿಮರಿಯನ್ನು ಸಿದ್ಧಮಾಡಿರಿ. ಯೆಹೋವನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿರಿ. ಆತನು ಮೋಶೆಯ ಮೂಲಕ ನಮಗೆ ಈ ವಿಧಿನಿಯಮಗಳನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು