Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:15 - ಪರಿಶುದ್ದ ಬೈಬಲ್‌

15 ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ ಮತ್ತು ಶೆಕನ್ಯ ಇವರು ಕೋರೆಯ ಸಹಾಯಕರು. ಇವರು ಯಾಜಕರು ವಾಸಿಸುವ ಪಟ್ಟಣಗಳಲ್ಲಿದ್ದು ನಂಬಿಗಸ್ತಿಕೆಯಿಂದ ಸೇವೆ ಮಾಡಿದರು. ಕೂಡಿಸಿದ ಕಾಣಿಕೆಗಳನ್ನು ನಂಬಿಗಸ್ತಿಕೆಯಿಂದ ಯಾಜಕರ ಕುಟುಂಬದವರಿಗೆ ಪಕ್ಷಪಾತವಿಲ್ಲದೆ ಹಂಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇವನ ಕೈಕೆಳಗೆ ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬುವವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು, ನಂಬಿಕೆಯಿಂದ ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ಭೇದಮಾಡದೆ ಅವರವರ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇವನ ಕೈಕೆಳಗೆ ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು, ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ವ್ಯತ್ಯಾಸಮಾಡದೆ, ಅವರವರ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇವನ ಕೈಕೆಳಗೆ ಏದೆನ್, ವಿುನ್ಯಾವಿುನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ವ್ಯತ್ಯಾಸ ಮಾಡದೆ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ನಂಬಿಗಸ್ತಿಕೆಯಿಂದ ಸರತಿ ಸರತಿಯಾಗಿ ಹಿರಿಯರು ಕಿರಿಯರು ಎಂಬ ವ್ಯತ್ಯಾಸಮಾಡದೆ ಪಾಲು ಹಂಚುವುದಕ್ಕೆ ಏದೆನನೂ, ಮಿನ್ಯಾಮೀನನೂ, ಯೇಷೂವನ ಶೆಮಾಯನೂ, ಅಮರ್ಯನೂ, ಶೆಕನ್ಯನೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:15
8 ತಿಳಿವುಗಳ ಹೋಲಿಕೆ  

ಕೋನನ್ಯ ಮತ್ತು ಶಿಮ್ಮಿಯು ಈ ಜನರ ಮೇಲ್ವಿಚಾರಕರಾಗಿದ್ದರು; ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಾಕ್ಯ, ಮಹತ್ ಮತ್ತು ಬೆನಾಯ ಇವರನ್ನು ಸಹಾಯಕರಾಗಿ ಅರಸನಾದ ಹಿಜ್ಕೀಯನೂ ದೇವಾಲಯದ ಮೇಲ್ವಿಚಾರಕನಾದ ಅಜರ್ಯನೂ ಆರಿಸಿದರು.


ದೇವಾಲಯದಲ್ಲಿ ಸೇವೆಮಾಡಲು ಪ್ರಾರಂಭಿಸಿದ ಲೇವಿಯರ ಪಟ್ಟಿ: ಕೆಹಾತ್ಯನ ಕುಟುಂಬದ ಅಮಾಸೈಯ ಮಗನಾದ ಮಹತ್ ಮತ್ತು ಅಜರ್ಯನ ಮಗನಾದ ಯೋವೇಲ್; ಮೆರಾರೀಯ ಸಂತತಿಯಲ್ಲಿ ಅಬ್ದೀಯ ಮಗನಾದ ಕೀಷ, ಯೆಹಲ್ಲೆಲೇಲನ ಮಗನಾದ ಅಜರ್ಯ; ಗೆರ್ಷೋನ್ಯನ ಸಂತತಿಯಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್; ಎಲೀಚಾಫಾನ್ಯನ ಸಂತತಿಯಲ್ಲಿ ಶಿಮ್ರಿ ಮತ್ತು ಯೆಗೀಯೇಲ್; ಆಸಾಫಾನ ಸಂತತಿಯವರಿಂದ ಜೆಕರ್ಯ ಮತ್ತು ಮತ್ತನ್ಯ; ಹೇಮಾನನ ಸಂತತಿಯಿಂದ ಯೆಹೀಯೇಲ್ ಮತ್ತು ಶಿಮ್ಮೀ; ಯೆದೂತೂನನ ಸಂತತಿಯಲ್ಲಿ ಶೆಮಾಯ ಮತ್ತು ಉಜ್ಜೀಯೇಲ್.


ಪ್ರತಿಯೊಬ್ಬರಿಗೂ ಕೆಲಸಗಳನ್ನು ಗೊತ್ತುಪಡಿಸಲು ಚೀಟುಹಾಕಿ ನೇಮಕ ಮಾಡಿದರು. ಅವರು ಯಾವ ಪಕ್ಷಪಾತವನ್ನೂ ಮಾಡಲಿಲ್ಲ. ದೊಡ್ಡವರು, ಚಿಕ್ಕವರು, ಉಪಾಧ್ಯಾಯರು, ವಿದ್ಯಾರ್ಥಿಗಳು ಎಂಬ ಬೇಧಭಾವವಿಲ್ಲದೆ ಆರಿಸಲ್ಪಟ್ಟರು.


ಒಟ್ಟು ಇನ್ನೂರ ಹನ್ನೆರಡು ಮಂದಿ ಪವಿತ್ರಗುಡಾರದ ಬಾಗಿಲನ್ನು ಕಾಯುವುದಕ್ಕೆ ಆರಿಸಲ್ಪಟ್ಟಿದ್ದರು. ಅವರ ಹೆಸರುಗಳು ವಂಶದ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತವೆ. ದಾವೀದನೂ ದೇವರ ಮನುಷ್ಯನಾದ ಸಮುವೇಲನೂ ಇವರನ್ನು ಆರಿಸಿಕೊಂಡರು. ಯಾಕೆಂದರೆ ಇವರೆಲ್ಲರೂ ನಂಬಿಗಸ್ತರಾಗಿದ್ದರು.


ಕೋರೆ ಎಂಬ ಲೇವಿಯು ಜನರು ದೇವರಿಗೆ ಸ್ವ ಇಚ್ಛೆಯಿಂದ ಸಮರ್ಪಿಸಿದ ಕಾಣಿಕೆಗೆ ಮುಖ್ಯಸ್ತನಾಗಿದ್ದನು. ಅವನು ಅದರ ಲೆಕ್ಕವನ್ನು ಒಪ್ಪಿಸುತ್ತಿದ್ದನು. ಅಲ್ಲದೆ ಯೆಹೋವನಿಗೆ ಕೊಟ್ಟವುಗಳನ್ನು ಮತ್ತು ಯೆಹೋವನಿಗೆ ಮೀಸಲಾಗಿಟ್ಟ ಕಾಣಿಕೆಗಳನ್ನು ಹಂಚಿಕೊಡುವುದು ಅವನ ಜವಾಬ್ದಾರಿಕೆಯಾಗಿತ್ತು. ಅಲ್ಲದೆ ಅವನು ಪೂರ್ವದ ಬಾಗಿಲಿನ ದ್ವಾರಪಾಲಕನಾಗಿದ್ದನು. ಅವನು ಲೇವಿಯನಾದ ಇಮ್ನನ ಮಗನು.


ಇವರನ್ನು ವಿಶಿಷ್ಟಕಾರ್ಯಗಳಿಗಾಗಿ ಚೀಟುಹಾಕಿ ಆರಿಸಲಾಯಿತು. ಆರೋನನ ಸಂತತಿಯವರೂ ಯಾಜಕರೂ ಆಗಿದ್ದ ತಮ್ಮ ಸಂಬಂಧಿಕರು ಮಾಡಿದಂತೆಯೇ ಚೀಟುಹಾಕಿ ವಿಶಿಷ್ಟ ಕಾರ್ಯಗಳಿಗಾಗಿ ಇವರನ್ನು ಆರಿಸಿಕೊಳ್ಳಲಾಯಿತು. ರಾಜನಾದ ದಾವೀದನ, ಚಾದೋಕನ, ಅಹೀಮೆಲೆಕನ ಮತ್ತು ಲೇವಿಕುಲದ ನಾಯಕರ ಎದುರಿಗೆ ಚೀಟುಹಾಕಿದರು. ಹಿರಿಯ ಅಥವಾ ಕಿರಿಯ ಕುಟುಂಬಗಳೆನ್ನದೆ ಎಲ್ಲರಿಗೂ ಸಮಾನವಾಗಿ ಕೆಲಸಗಳನ್ನು ಹಂಚಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು