Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:18 - ಪರಿಶುದ್ದ ಬೈಬಲ್‌

18 ಲೇವಿಯರ ಹೆಂಡತಿಯರಿಗೂ ಮಕ್ಕಳಿಗೂ ಎಲ್ಲರಿಗೂ ಅದರಲ್ಲಿ ಪಾಲು ದೊರೆಯಿತು. ಯಾರ್ಯಾರ ಹೆಸರುಗಳು ಲೇವಿಯರ ಕುಟುಂಬದ ಪಟ್ಟಿಯಲ್ಲಿ ಬರೆಯಲ್ಪಟ್ಟಿತ್ತೊ ಅವರೆಲ್ಲರಿಗೆ ಪಾಲು ದೊರೆಯಿತು. ಯಾಕೆಂದರೆ ಲೇವಿಯರು ತಮ್ಮನ್ನು ದೇವಾಲಯದ ಸೇವೆಗೆ ಯಾವಾಗಲೂ ಸಿದ್ಧಪಡಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರವರ ಹೆಂಡತಿಯರು, ಗಂಡುಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನು ದೇವರಿಗೆ ನಂಬಿಕೆಯಿಂದ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರವರ ಹೆಂಡತಿಯರು, ಗಂಡು-ಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನೇ ದೇವರಿಗೆ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಲೇವಿಯರು, ಅವರವರ ಹೆಂಡತಿಯರು, ಗಂಡು ಹೆಣ್ಣು ಮಕ್ಕಳು ಅಂತು ತಮ್ಮ ಉದ್ಯೋಗದ ನಿವಿುತ್ತ ತಮ್ಮನ್ನು ದೇವರಿಗೆ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರ ಹೆಂಡತಿಯರಿಗೂ ಚಿಕ್ಕವರಿಗೂ ಪುತ್ರಪುತ್ರಿಯರಿಗೂ ಪಾಲು ಕೊಡುವುದಕ್ಕೂ ಇದ್ದರು. ಏಕೆಂದರೆ ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನೇ ತಾವು ಪರಿಶುದ್ಧಗೊಳಿಸುವಲ್ಲಿ ನಂಬಿಗಸ್ತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:18
6 ತಿಳಿವುಗಳ ಹೋಲಿಕೆ  

ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.


ಸರ್ವಶಕ್ತನಾದ ಯೆಹೋವನು ನೀತಿಯಿಂದ ನ್ಯಾಯತೀರಿಸುವನು. ಯೆಹೋವನು ಉನ್ನತೋನ್ನತನೆಂದು ಜನರೆಲ್ಲರೂ ಅರಿತುಕೊಳ್ಳುವರು. ಪರಿಶುದ್ಧನಾದ ದೇವರು ನ್ಯಾಯವಾದದ್ದನ್ನೇ ಮಾಡುವನು. ಜನರು ಆತನನ್ನು ಗೌರವಿಸುವರು.


ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ ಮತ್ತು ಶೆಕನ್ಯ ಇವರು ಕೋರೆಯ ಸಹಾಯಕರು. ಇವರು ಯಾಜಕರು ವಾಸಿಸುವ ಪಟ್ಟಣಗಳಲ್ಲಿದ್ದು ನಂಬಿಗಸ್ತಿಕೆಯಿಂದ ಸೇವೆ ಮಾಡಿದರು. ಕೂಡಿಸಿದ ಕಾಣಿಕೆಗಳನ್ನು ನಂಬಿಗಸ್ತಿಕೆಯಿಂದ ಯಾಜಕರ ಕುಟುಂಬದವರಿಗೆ ಪಕ್ಷಪಾತವಿಲ್ಲದೆ ಹಂಚಿದರು.


ಒಟ್ಟು ಇನ್ನೂರ ಹನ್ನೆರಡು ಮಂದಿ ಪವಿತ್ರಗುಡಾರದ ಬಾಗಿಲನ್ನು ಕಾಯುವುದಕ್ಕೆ ಆರಿಸಲ್ಪಟ್ಟಿದ್ದರು. ಅವರ ಹೆಸರುಗಳು ವಂಶದ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತವೆ. ದಾವೀದನೂ ದೇವರ ಮನುಷ್ಯನಾದ ಸಮುವೇಲನೂ ಇವರನ್ನು ಆರಿಸಿಕೊಂಡರು. ಯಾಕೆಂದರೆ ಇವರೆಲ್ಲರೂ ನಂಬಿಗಸ್ತರಾಗಿದ್ದರು.


ಒಟ್ಟುಗೂಡಿಸಿದ ಕಾಣಿಕೆಯಲ್ಲಿ ಯಾಜಕರೂ ತಮ್ಮ ಪಾಲನ್ನು ತೆಗೆದುಕೊಂಡರು. ಇದನ್ನು ವಂಶಾವಳಿಗನುಸಾರವಾಗಿ ಮಾಡಲಾಯಿತು. ಲೇವಿಯರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕಿಂತ ಹೆಚ್ಚು ವಯಸ್ಸಾದವರೂ ತಮ್ಮ ಪಾಲನ್ನು ಜವಾಬ್ದಾರಿಗಳಿಗನುಸಾರವಾಗಿಯೂ ತಮ್ಮ ಗುಂಪುಗಳಿಗನುಸಾರವಾಗಿಯೂ ಪಡೆದುಕೊಂಡರು.


ಆರೋನನ ಸಂತತಿಯ ಕೆಲವು ಯಾಜಕರಿಗೆ ಲೇವಿಯರು ವಾಸಿಸುತ್ತಿದ್ದ ಪಟ್ಟಣಗಳ ಹತ್ತಿರ ಹೊಲಗಳಿದ್ದವು. ಆರೋನನ ಸಂತತಿಯವರಲ್ಲಿ ಕೆಲವರು ಲೇವಿಯರ ಪಟ್ಟಣಗಳಲ್ಲಿಯೂ ವಾಸಮಾಡುತ್ತಿದ್ದರು. ಈ ಆರೋನನ ಸಂತತಿಯವರಿಗೆ ಪಾಲು ಕೊಡಲು ಕೆಲವರನ್ನು ನೇಮಿಸಲಾಯಿತು. ಗಂಡಸರಿಗೆ ಮತ್ತು ವಂಶಾವಳಿಯಲ್ಲಿ ಹೆಸರನ್ನು ಹೊಂದಿದ್ದ ಎಲ್ಲಾ ಲೇವಿಯರಿಗೆ ಸಂಗ್ರಹಿಸಲ್ಪಟ್ಟಿದ್ದರಲ್ಲಿ ಅವರವರ ಪಾಲು ದೊರೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು