Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:20 - ಪರಿಶುದ್ದ ಬೈಬಲ್‌

20 ಹೀಗೆ ಅರಸನಾದ ಹಿಜ್ಕೀಯನು ಯೆಹೂದ ದೇಶದಲ್ಲಿ ಈ ಒಳ್ಳೆಯ ಕಾರ್ಯವನ್ನು ಮಾಡಿದನು. ದೇವರಾದ ಯೆಹೋವನ ದೃಷ್ಟಿಯಲ್ಲಿ ಯೋಗ್ಯವಾದದ್ದನ್ನು ನಂಬಿಗಸ್ತಿಕೆಯಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ, ನೀತಿವಂತನೂ, ನಂಬಿಗಸ್ತನೂ ಆಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹಿಜ್ಕೀಯನು ಜುದೇಯದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಸರ್ವೇಶ್ವರನಿಗೆ ಒಳ್ಳೆಯವನು, ನೀತಿವಂತನು ಹಾಗು ನಂಬಿಗಸ್ತನು ಆಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ ನೀತಿವಂತನೂ ನಂಬಿಗಸ್ತನೂ ಆಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಉತ್ತಮವಾದದ್ದನ್ನೂ, ಸರಿಯಾದದ್ದನ್ನೂ, ಸತ್ಯವಾದದ್ದನ್ನೂ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:20
11 ತಿಳಿವುಗಳ ಹೋಲಿಕೆ  

“ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ ಸೇವೆಮಾಡಿದ್ದೇನೆಂಬುದನ್ನು ನೆನಪುಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಕೀಯನು ಬಹಳ ಜೋರಾಗಿ ಗೋಳಾಡಿದನು.


ಯೆಹೋವನು ಯೋಗ್ಯವೆಂದು ಹೇಳಿದ ಕಾರ್ಯಗಳನ್ನು ಯೋಷೀಯನು ಮಾಡಿದನು. ಯೋಷೀಯನು ತನ್ನ ಪೂರ್ವಿಕನಾದ ದಾವೀದನಂತೆ ದೇವರನ್ನು ಅನುಸರಿಸಿದನು. ಯೋಷೀಯನು ದೇವರ ಬೋಧನೆಗಳಲ್ಲಿ ಯಾವುದೇ ಬದಲಾವಣೆ ಮಾಡದೆ ಅವುಗಳನ್ನು ಅನುಸರಿಸಿದನು.


ಈ ಕಾರಣದಿಂದ ನಾನು ಯಾವುದನ್ನು ಸರಿಯಾದದ್ದು ಎಂದು ನಂಬಿದ್ದೇನೋ ಅದನ್ನು ದೇವರ ಮುಂದೆಯೂ ಮನುಷ್ಯರ ಮುಂದೆಯೂ ಮಾಡಲು ಯಾವಾಗಲು ಪ್ರಯತ್ನಿಸುತ್ತಿದ್ದೇನೆ.


ನನ್ನ ಪ್ರಿಯ ಸ್ನೇಹಿತನೇ, ಕ್ರಿಸ್ತನಲ್ಲಿ ಸಹೋದರರಾದವರಿಗೆ ನೀನು ಸಹಾಯ ಮಾಡುತ್ತಿರುವುದು ಒಳ್ಳೆಯದೇ ಸರಿ. ನಿನಗೆ ಗೊತ್ತಿಲ್ಲದ ಸಹೋದರರಿಗೂ ನೀನು ಸಹಾಯ ಮಾಡುತ್ತಿರುವೆ!


ವಿಶ್ವಾಸಿಗಳಾದ ನಿಮ್ಮೊಡನೆ ನಾವಿದ್ದಾಗ ತಪ್ಪಿಲ್ಲದವರಾಗಿಯೂ ಪರಿಶುದ್ಧರಾಗಿಯೂ ಮತ್ತು ನಿರ್ದೋಷಿಗಳಾಗಿಯೂ ಜೀವಿಸಿದ್ದೆವು. ಇದು ನಿಜವೆಂಬುದು ನಿಮಗೂ ತಿಳಿದಿದೆ ಮತ್ತು ದೇವರಿಗೂ ತಿಳಿದಿದೆ.


ಯೇಸು ತನ್ನ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡು ಅವನ ಬಗ್ಗೆ, “ಇವನು ನಿಜವಾದ ಇಸ್ರೇಲ. ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.


ಯೆಹೋವನು ಇಚ್ಛಿಸಿದ ಕಾರ್ಯಗಳನ್ನು ದಾವೀದನು ಯಾವಾಗಲೂ ಮಾಡುತ್ತಿದ್ದನು. ಯೆಹೋವನ ಆಜ್ಞೆಗಳಿಗೆ ಅವನು ಯಾವಾಗಲೂ ವಿಧೇಯತೆಯಿಂದಿದ್ದನು. ದಾವೀದನು ಹಿತ್ತಿಯನಾದ ಊರೀಯನ ವಿಷಯದಲ್ಲಿ ಮಾತ್ರ ಯೆಹೋವನಿಗೆ ಅವಿಧೇಯನಾದನು.


ಹಿಜ್ಕೀಯನು ತನ್ನ ಪೂರ್ವಿಕನಾದ ದಾವೀದನಂತೆ, ಯೆಹೋವನು ಯೋಗ್ಯವೆಂದು ಹೇಳಿದ್ದನ್ನು ಮಾಡಿದನು.


ಅಬೀಯನು ತನ್ನ ಪೂರ್ವಿಕರೊಂದಿಗೆ ವಿಶ್ರಾಂತಿಗೆ ಸೇರಿದನು. ಜನರು ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು. ಅಬೀಯನ ನಂತರ ಅವನ ಮಗನಾದ ಆಸನು ಪಟ್ಟಕ್ಕೆ ಬಂದನು. ಆಸನ ಆಳ್ವಿಕೆಯ ಹತ್ತು ವರ್ಷ ದೇಶದಲ್ಲಿ ಸಮಾಧಾನ ನೆಲೆಸಿತ್ತು.


ಆಗ ಹೊಸ ಅರಸನು ಬರುವನು. ಆತನು ನ್ಯಾಯವಾದವುಗಳನ್ನು ಮತ್ತು ಒಳ್ಳೆಯವುಗಳನ್ನು ಮಾಡುವನು. ಆತನು ದಾವೀದನ ವಂಶದವನಾಗಿದ್ದಾನೆ. ಆತನು ಪ್ರಾಮಾಣಿಕನೂ ಪ್ರೀತಿದಯೆಗಳಿಂದ ತುಂಬಿದವನೂ ಆಗಿರುವನು. ಆತನ ನ್ಯಾಯತೀರ್ಪು ನ್ಯಾಯಕ್ಕನುಸಾರವಾಗಿರುವದು.


ಐದು ತಲಾಂತು ತೆಗೆದುಕೊಂಡ ಸೇವಕನು ತಕ್ಷಣವೇ ಹೋಗಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು