Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:5 - ಪರಿಶುದ್ದ ಬೈಬಲ್‌

5 ದೇಶದ ಜನರೆಲ್ಲಾ ಅರಸನ ಈ ಆಜ್ಞೆಯನ್ನು ಕೇಳಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನುತುಪ್ಪ ಮುಂತಾದ ಎಲ್ಲವುಗಳಲ್ಲಿ ಮತ್ತು ಪ್ರಥಮ ಫಲಗಳಲ್ಲಿ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದವೆಲ್ಲಾ ಹುಟ್ಟುವಳಿಯಿಂದ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು; ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲ್ಯರು ಧಾನ್ಯ ದ್ರಾಕ್ಷಾರಸ ಎಣ್ಣೆ ಜೇನು ಮುಂತಾದ ಎಲ್ಲಾ ಹುಟ್ಟುವಳಿಯಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು; ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ, ಇವುಗಳ ಮೊದಲನೆಯ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳವಾಗಿ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:5
22 ತಿಳಿವುಗಳ ಹೋಲಿಕೆ  

ಆಗ ಯೆಹೂದ ಪ್ರಾಂತ್ಯದ ಪ್ರತಿಯೊಬ್ಬರೂ ತಮ್ಮ ದಶಮಾಂಶ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಮುಂತಾದವುಗಳನ್ನು ತಂದುಕೊಟ್ಟರು. ಅವುಗಳನ್ನು ಉಗ್ರಾಣಗಳಲ್ಲಿ ಶೇಖರಿಸಿಡಲಾಯಿತು.


ನಿನಗೆ ಬರುವ ಆದಾಯದಿಂದಲೂ ಬೆಳೆಯ ಪ್ರಥಮ ಫಲದಿಂದಲೂ ಯೆಹೋವನನ್ನು ಸನ್ಮಾನಿಸು.


ಜನರು ಕಟ್ಟಿಗೆಯನ್ನೂ ಪ್ರಥಮಫಲಗಳನ್ನೂ ಸರಿಯಾದ ಸಮಯದಲ್ಲಿ ತರುವಂತೆ ನಾನು ಆಜ್ಞಾಪಿಸಿದೆನು. ನನ್ನ ದೇವರೇ, ಈ ಒಳ್ಳೆಯ ಕಾರ್ಯಗಳನ್ನೆಲ್ಲಾ ಮಾಡಿದ ನನ್ನನ್ನು ಮರೆಯಬೇಡ.


ಉಗ್ರಾಣಕ್ಕೆ ಮುಖ್ಯಸ್ತರನ್ನು ಆ ದಿನ ಆರಿಸಿದರು. ಜನರು ತಮ್ಮ ಪ್ರಥಮಫಲಗಳನ್ನು, ಪೈರಿನ ಹತ್ತನೆಯ ಒಂದಂಶವನ್ನು ತಂದರು. ಉಗ್ರಾಣದ ಮುಖ್ಯಸ್ತರು ಅವುಗಳನ್ನು ಕೋಣೆಯೊಳಗೆ ಶೇಖರಿಸಿಟ್ಟರು. ಎಲ್ಲರೂ ಅಚ್ಚುಕಟ್ಟಾಗಿ ತಮ್ಮತಮ್ಮ ಕೆಲಸಕಾರ್ಯಗಳನ್ನು ಮಾಡುವುದನ್ನು ನೋಡಿ ಜನರು ಸಂತೋಷಪಟ್ಟರು; ಹೆಚ್ಚಾದ ವಸ್ತುಗಳನ್ನು ಉಗ್ರಾಣದೊಳಕ್ಕೆ ತಂದರು.


ಯೆಹೋವನಿಗಾಗಿ ಕಾಣಿಕೆಗಳನ್ನು ಕೂಡಿಸಿರಿ. ನಿಮ್ಮಲ್ಲಿ ಪ್ರತಿಯೊಬ್ಬನು ತಾನು ಕೊಡುವಂಥದ್ದನ್ನು ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಬಳಿಕ ಆ ಕಾಣಿಕೆಯನ್ನು ಯೆಹೋವನ ಸನ್ನಿಧಿಗೆ ತರಬೇಕು. ಚಿನ್ನ, ಬೆಳ್ಳಿ, ತಾಮ್ರ,


ಇವರು ಸ್ತ್ರೀ ಸಹವಾಸದಿಂದ ಮಲಿನರಾಗದೆ ಕನ್ನಿಕೆಯರಂತೆ ಉಳಿದಿದ್ದರು. ಕುರಿಮರಿಯಾದಾತನು ಹೋದಕಡೆಯಲ್ಲೆಲ್ಲಾ ಅವರು ಆತನನ್ನು ಹಿಂಬಾಲಿಸುತ್ತಾರೆ. ಭೂಲೋಕದ ಜನರ ಮಧ್ಯದಿಂದ ಬಿಡುಗಡೆ ಹೊಂದಿದವರೇ 1,44,000 ಮಂದಿ. ದೇವರಿಗೂ ಕುರಿಮರಿಯಾದಾತನಿಗೂ ಅರ್ಪಿತರಾದವರಲ್ಲಿ ಇವರೇ ಮೊದಲಿಗರಾಗಿದ್ದರು.


ದೇವರು ಸತ್ಯವಾಕ್ಯದ ಮೂಲಕ ನಮಗೆ ಜೀವವನ್ನು ದಯಪಾಲಿಸಲು ತೀರ್ಮಾನಿಸಿದ್ದಾನೆ. ತನ್ನಿಂದ ಸೃಷ್ಟಿಸಲ್ಪಟ್ಟ ಎಲ್ಲಾ ವಸ್ತುಗಳಲ್ಲಿಯೂ ನಾವು ಅತ್ಯಂತ ಮುಖ್ಯರಾಗಬೇಕೆಂಬುದೇ ಆತನ ಅಪೇಕ್ಷೆ.


ಆದರೆ ಕ್ರಿಸ್ತನು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ. ನಿದ್ರೆಹೋದವರಲ್ಲಿ ಅಂದರೆ ಸತ್ತುಹೋದ ಎಲ್ಲಾ ವಿಶ್ವಾಸಿಗಳಲ್ಲಿ ಆತನೇ ಪ್ರಥಮ ಫಲವಾದನು.


“ಇದಲ್ಲದೆ, ಇಸ್ರೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲದ ಪದಾರ್ಥಗಳಲ್ಲಿ ಅಂದರೆ ಉತ್ತಮವಾದ ಎಣ್ಣೆ, ಹೊಸ ದ್ರಾಕ್ಷಾರಸ, ಧಾನ್ಯ ಇವುಗಳನ್ನೆಲ್ಲ ನಾನು ನಿಮಗೆ ಕೊಡುತ್ತೇನೆ.


“ನೀವು ಕೊಯ್ಯುವ ಪ್ರಥಮವಾದ ಬೆಳೆಗಳನ್ನು ಯೆಹೋವನಿಗೆ ಕೊಡಿರಿ. ಅವುಗಳನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ತನ್ನಿರಿ. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಎಂದಿಗೂ ಬೇಯಿಸಬಾರದು.”


“ವಾರಗಳ ಹಬ್ಬವನ್ನು ಆಚರಿಸಿರಿ. ಈ ಹಬ್ಬಕ್ಕಾಗಿ ಗೋಧಿಬೆಳೆಯ ಪ್ರಥಮ ಕಾಳನ್ನು ಉಪಯೋಗಿಸಿರಿ ಮತ್ತು ವರ್ಷಾಂತ್ಯದಲ್ಲಿ ಸುಗ್ಗಿಹಬ್ಬವನ್ನು ಆಚರಿಸಿರಿ.


“ಸುಗ್ಗಿ ಕಾಲದಲ್ಲಿ ನಿಮ್ಮ ಬೆಳೆಯ ಫಲವನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.”


“ಸುಗ್ಗಿಕಾಲದಲ್ಲಿ ನೀವು ಪ್ರಥಮಫಲವಾದ ಧಾನ್ಯವನ್ನು ಮತ್ತು ನಿಮ್ಮ ಪ್ರಥಮಫಲವಾದ ದ್ರಾಕ್ಷಾರಸವನ್ನು ನನಗೆ ಕೊಡಬೇಕು. ನೀವು ಅದನ್ನು ನಿಮಗಾಗಿಯೇ ಇಟ್ಟುಕೊಳ್ಳಬಾರದು. “ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಪ್ರತಿಷ್ಠಿಸಬೇಕು.


ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ.


“ಎಲ್ಲಾ ಬೆಳೆಗಳಲ್ಲಿ ಹತ್ತರಲ್ಲಿ ಒಂದಂಶವು ಯೆಹೋವನದ್ದಾಗಿರುತ್ತದೆ. ಹೊಲಗಳ ಬೆಳೆಗಳಾಗಲಿ ಮರಗಳ ಫಲಗಳಾಗಲಿ ಅದರಲ್ಲಿ ಹತ್ತರಲ್ಲಿ ಒಂದಂಶ ಯೆಹೋವನದ್ದಾಗಿರುತ್ತದೆ.


ಆಗ ಯೆಹೋವನು ಆರೋನನಿಗೆ ಹೀಗೆ ಹೇಳಿದನು: “ನನಗೆ ಬರಬೇಕಾಗಿರುವ ಕೊಡುಗೆಗಳನ್ನು ಮತ್ತು ಇಸ್ರೇಲರ ಪವಿತ್ರವಾದ ಎಲ್ಲಾ ಕಾಣಿಕೆಗಳನ್ನು ಕಾಯುವ ಜವಾಬ್ದಾರಿಕೆಯನ್ನು ನಾನೇ ನಿನಗೆ ವಹಿಸಿದ್ದೇನೆ. ಅವುಗಳನ್ನು ನಿನಗೂ ನಿನ್ನ ಸಂತತಿಯವರಿಗೂ ಪಾಲಾಗಿ ಕೊಟ್ಟಿದ್ದೇನೆ. ಅವು ಯಾವಾಗಲೂ ನಿಮ್ಮವೇ.


ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲವು ನಿಮಗೆ ಸಲ್ಲಬೇಕು. ನಿಮ್ಮ ಕುಟುಂಬಗಳಲ್ಲಿ ಶುದ್ಧರಾಗಿರುವವರೆಲ್ಲರೂ ಅವುಗಳನ್ನು ಊಟಮಾಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು