15 ಹಿಜ್ಕೀಯನು ನಿಮ್ಮನ್ನು ಮೋಸಗೊಳಿಸದಂತೆ ಜಾಗರೂಕರಾಗಿರಿ, ಅವನನ್ನು ನಂಬಬೇಡಿರಿ. ಯಾವ ದೇಶದ ದೇವರಿಗಾಗಲಿ ಅವನ ಜನರಿಗಾಗಲಿ ನನ್ನನ್ನು ನನ್ನ ಪೂರ್ವಿಕರನ್ನು ತಡೆಯಲು ಸಾಧ್ಯವಾಗಲಿಲ್ಲ. ನಿಮ್ಮ ದೇವರೂ ನನ್ನನ್ನು ತಡೆಯಲು ಸಾಧ್ಯವಿಲ್ಲ.’”
15 ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.
15 ನೀವು ಹಿಜ್ಕೀಯನಿಂದ ಮರುಳಾಗಿ ಮೋಸಹೋಗಬೇಡಿ; ಅವನನ್ನು ನಂಬಲೂಬೇಡಿ. ಯಾವ ರಾಜ್ಯಜನಾಂಗಗಳ ದೇವತೆಯೂ ತನ್ನ ಪ್ರಜೆಯನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆಹೋದರು. ಅಂದ ಮೇಲೆ, ನಿಮ್ಮ ದೇವರಂಥವನು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಬಲ್ಲನೇ?".
15 ನೀವು ಹಿಜ್ಕೀಯನಿಂದ ಮರುಳಾಗಿ ಈ ಪ್ರಕಾರ ಮೋಸಹೋಗಬೇಡಿರಿ. ಅವನನ್ನು ನಂಬಲೂಬೇಡಿರಿ. ಯಾವ ರಾಜ್ಯ ಜನಾಂಗಗಳ ದೇವತೆಯಾದರೂ ತನ್ನ ಪ್ರಜೆಯನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ನಿಮ್ಮ ದೇವರಂಥವನು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಬಲ್ಲನೇ ಎಂದು ಹೇಳಿಸಿದನು.
15 ಆದ್ದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ನಿಮ್ಮನ್ನು ದಾರಿತಪ್ಪಿಸಲು ಬಿಡಬೇಡಿರಿ. ಅವನ ಮಾತು ನಂಬಬೇಡಿರಿ. ನನ್ನ ಕೈಯೊಳಗಿಂದಲೂ, ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು? ಅನ್ನುತ್ತಾನೆ,” ಎಂದು ಹೇಳಿದರು.
ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.
ಆದರೆ ಫರೋಹನು, “ಯೆಹೋವನು ಯಾರು? ನಾನು ಆತನಿಗೆ ಯಾಕೆ ವಿಧೇಯನಾಗಬೇಕು. ಇಸ್ರೇಲರನ್ನು ನಾನು ಯಾಕೆ ಹೋಗಗೊಡಿಸಬೇಕು. ನೀವು ಯೆಹೋವನೆಂದು ಕರೆಯುವ ಆತನನ್ನು ನಾನು ಅರಿಯೆನು, ಆದ್ದರಿಂದ ಇಸ್ರೇಲರನ್ನು ಹೋಗಗೊಡಿಸುವುದಿಲ್ಲ” ಅಂದನು.
“‘ಹಿಜ್ಕೀಯನು ತನ್ನ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ. ಅವನು, “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಹೇಳುತ್ತಾನೆ. ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ. ಬೇರೆ ದೇಶದ ದೇವರುಗಳು ಅವರ ದೇಶವನ್ನು ಅಶ್ಶೂರದ ಅರಸನಿಂದ ಕಾಪಾಡಲು ಶಕ್ತರಾದರೋ? ಇಲ್ಲ!
ಮನುಷ್ಯರು ನನ್ನನ್ನು ಸ್ವೀಕರಿಸಿಕೊಳ್ಳುವಂತೆ ಮಾಡುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತಿದ್ದೇನೆ. ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೋ? ನಾನು ಮನುಷ್ಯರನ್ನು ಮೆಚ್ಚಿಸಬೇಕೆಂದಿದ್ದರೆ ಯೇಸು ಕ್ರಿಸ್ತನ ಸೇವಕನಾಗುತ್ತಿರಲಿಲ್ಲ.
ಆದರೆ ಪೌಲ ಎಂಬುವನು ಏನು ಮಾಡುತ್ತಿದ್ದಾನೆಂಬುದನ್ನು ನೋಡಿರಿ! ಅವನು ಏನು ಹೇಳುತ್ತಿದ್ದಾನೆಂಬುದನ್ನು ಕೇಳಿರಿ! ಪೌಲನು ಅನೇಕ ಜನರ ಮೇಲೆ ಪ್ರಭಾವಬೀರಿ ಅವರನ್ನು ಪರಿವರ್ತಿಸಿದ್ದಾನೆ. ಅವನು ಎಫೆಸದಲ್ಲಿಯೂ ಏಷ್ಯಾ ದೇಶದ ಎಲ್ಲಾ ಕಡೆಗಳಲ್ಲಿಯೂ ಹೀಗೆಯೇ ಮಾಡಿದ್ದಾನೆ. ಮನುಷ್ಯರು ತಯಾರಿಸುವ ದೇವರುಗಳು ನಿಜವಾದ ದೇವರುಗಳಲ್ಲ ಎಂದು ಹೇಳುತ್ತಿದ್ದಾನೆ.
ಹಿಜ್ಕೀಯನು ನಿಮ್ಮನ್ನು ಮೋಸಪಡಿಸುತ್ತಿದ್ದಾನೆ. ನೀವು ಜೆರುಸಲೇಮಿನಲ್ಲಿಯೇ ಇರುವಂತೆ ಹೇಳಿ ನಿಮಗೆ ಮೋಸಮಾಡುತ್ತಿದ್ದಾನೆ. ಹಾಗೆ ಮಾಡಿದರೆ ನೀವು ಅನ್ನನೀರಿಲ್ಲದೆ ಸಾಯುವಿರಿ. ನಿಮಗೆ ಹಿಜ್ಕೀಯನು, “ನಮ್ಮ ದೇವರಾದ ಯೆಹೋವನು ಅಶ್ಶೂರದ ರಾಜನಿಂದ ಕಾಪಾಡುವನು” ಎಂದು ಹೇಳುತ್ತಾನಲ್ಲಾ?
ಯೆಹೂದದ ರಾಜನಾದ ಹಿಜ್ಕೀಯನಿಗೆ ಇದನ್ನು ಹೇಳಿ: “ನೀನು ನಂಬುವ ದೇವರು ನಿನ್ನನ್ನು ಮೋಸಗೊಳಿಸಲು ಅವಕಾಶ ನೀಡಬೇಡ. ಅಶ್ಶೂರದ ರಾಜ ಜೆರುಸಲೇಮನ್ನು ಸೋಲಿಸುವುದಿಲ್ಲ ಎಂಬ ನಿನ್ನ ದೇವರ ಮಾತನ್ನು ನಂಬಬೇಡ.
ಯೆಹೋವನು, ‘ರಾಜನಾದ ಅಹಾಬನನ್ನು ನೀನು ಹೇಗೆ ಪ್ರೇರೇಪಿಸುವೆ?’ ಎಂದು ಉತ್ತರಿಸಿದಾಗ, ದೂತನು, ‘ಅಹಾಬನ ಎಲ್ಲಾ ಪ್ರವಾದಿಗಳು ಗಲಿಬಿಲಿಗೊಳ್ಳುವಂತೆ ಮಾಡುತ್ತೇನೆ. ರಾಜನಾದ ಅಹಾಬನಿಗೆ ಪ್ರವಾದಿಗಳು ಸುಳ್ಳುಹೇಳುವಂತೆ ನಾನು ಮಾಡುತ್ತೇನೆ. ಪ್ರವಾದಿಗಳ ಸಂದೇಶವೆಲ್ಲವೂ ಸುಳ್ಳಾಗಿರುವುದು’ ಎಂದನು. ಆದ್ದರಿಂದ ಯೆಹೋವನು, ‘ಸರಿ, ಹೋಗಿ ರಾಜನಾದ ಅಹಾಬನನ್ನು ಪ್ರೇರೇಪಿಸು. ನೀನು ಸಫಲನಾಗುವೆ’” ಎಂದು ಹೇಳಿದನು.
ಆ ಚಿಕ್ಕ ಕೊಂಬು ಅತಿ ಪ್ರಬಲವಾಯಿತು ಮತ್ತು ನಕ್ಷತ್ರಾಧಿಪತಿಯನ್ನು (ದೇವರನ್ನು) ವಿರೋಧಿಸತೊಡಗಿತು. ಆ ಚಿಕ್ಕ ಕೊಂಬು ನಕ್ಷತ್ರಾಧಿಪತಿಗೆ ನಿತ್ಯಹೋಮಗಳು ಸಲ್ಲದಂತೆ ಮಾಡಿತು. ಜನರು ನಕ್ಷತ್ರಾಧಿಪತಿಯನ್ನು ಪೂಜಿಸುವ ಸ್ಥಳವನ್ನು ಕೆಡವಿಬಿಟ್ಟಿತು.