2 ಪೂರ್ವಕಾಲ ವೃತ್ತಾಂತ 32:21 - ಪರಿಶುದ್ದ ಬೈಬಲ್21 ಆಗ ಯೆಹೋವನು ಅಶ್ಶೂರದ ಅರಸನ ಪಾಳೆಯಕ್ಕೆ ದೇವದೂತನನ್ನು ಕಳುಹಿಸಿದನು. ಆ ದೂತನು ಅಶ್ಶೂರದ ಎಲ್ಲಾ ಸೈನ್ಯದವರನ್ನೂ ಅವರ ಅಧಿಕಾರಿಗಳನ್ನೂ ಸಂಹರಿಸಿದನು. ಆಗ ಅಶ್ಶೂರದ ಅರಸನು ತನ್ನ ಸ್ವಂತ ದೇಶಕ್ಕೆ ಹಿಂತಿರುಗಿದನು. ಅವನ ಜನರು ಅವನ ವಿಷಯದಲ್ಲಿ ನಾಚಿಕೆಪಟ್ಟರು. ಅವನು ತನ್ನ ದೇವರಮಂದಿರದೊಳಕ್ಕೆ ಹೋದಾಗ ಅವನ ಸ್ವಂತ ಮಕ್ಕಳಲ್ಲಿ ಕೆಲವರು ಅವನನ್ನು ಖಡ್ಗದಿಂದ ಸಂಹರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದನು; ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು. ಅಧ್ಯಾಯವನ್ನು ನೋಡಿ |
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.
ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿರುವನು; ಆದ್ದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯ ಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಬಹುದು. ನೆಬೂಕದ್ನೆಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟುಹೋಗುವಂತೆ ಆತನು ಮಾಡಬಹುದು.”