Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:22 - ಪರಿಶುದ್ದ ಬೈಬಲ್‌

22 ಈ ರೀತಿಯಾಗಿ ದೇವರಾದ ಯೆಹೋವನು ಜೆರುಸಲೇಮಿನ ಜನರನ್ನು ಅಶ್ಶೂರದ ಅರಸನಾದ ಸನ್ಹೇರೀಬನಿಂದಲೂ ಮತ್ತು ಇತರ ಎಲ್ಲಾ ಜನರಿಂದಲೂ ಪಾರುಮಾಡಿದನು; ಹಿಜ್ಕೀಯನನ್ನು ಮತ್ತು ಜೆರುಸಲೇಮಿನ ಜನರನ್ನೂ ಪರಿಪಾಲನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗೆ ಯೆಹೋವನು ಹಿಜ್ಕೀಯನನ್ನೂ ಯೆರೂಸಲೇಮಿನವರನ್ನೂ ಅಶ್ಶೂರ್ಯದ ಅರಸನಾದ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲಾ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೀಗೆ ಸರ್ವೇಶ್ವರ, ಹಿಜ್ಕೀಯನನ್ನೂ ಜೆರುಸಲೇಮಿನವರನ್ನೂ ಅಸ್ಸೀರಿಯದ ಅರಸ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗೆ ಯೆಹೋವನು ಹಿಜ್ಕೀಯನನ್ನೂ ಯೆರೂಸಲೇವಿುನವರನ್ನೂ ಅಶ್ಶೂರದ ಅರಸನಾದ ಸನ್ಹೇರೀಬನ ಕೈಗೂ ಸುತ್ತಣ ಎಲ್ಲಾ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೀಗೆ ಯೆಹೋವ ದೇವರು ಹಿಜ್ಕೀಯನನ್ನೂ, ಯೆರೂಸಲೇಮಿನ ನಿವಾಸಿಗಳನ್ನೂ, ಅಸ್ಸೀರಿಯದ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ, ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ, ಸಮಸ್ತ ಕಡೆಯಿಂದ ಅವರನ್ನು ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:22
16 ತಿಳಿವುಗಳ ಹೋಲಿಕೆ  

ದೇವರ ಪ್ರೀತಿಯ ಕಡೆಗೂ ಮತ್ತು ಕ್ರಿಸ್ತನ ತಾಳ್ಮೆಯ ಕಡೆಗೂ ನಿಮ್ಮ ಹೃದಯಗಳನ್ನು ಪ್ರಭುವೇ ಮುನ್ನಡೆಸಲಿ ಎಂದು ನಾವು ಪ್ರಾರ್ಥಿಸುತ್ತೇವೆ.


ಆದರೆ ಸತ್ಯದ ಆತ್ಮನು ಬಂದಾಗ, ಆತನು ನಿಮ್ಮನ್ನು ಸಕಲ ವಿಷಯದಲ್ಲಿಯೂ ಸತ್ಯಕ್ಕೆ ನಡೆಸುವನು. ಸತ್ಯದ ಆತ್ಮನು ಹೇಳುವುದು ಆತನ ಸ್ವಂತ ಮಾತುಗಳಲ್ಲ. ತಾನು ಕೇಳಿದ್ದನ್ನು ಮಾತ್ರ ಆತನು ಹೇಳುತ್ತಾನೆ. ಸಂಭವಿಸಲಿರುವ ಸಂಗತಿಗಳನ್ನು ಆತನು ನಿಮಗೆ ತಿಳಿಸುತ್ತಾನೆ.


ಆದರೆ ನಾನು ಯೆಹೂದ ದೇಶಕ್ಕೆ ಕರುಣೆಯನ್ನು ತೋರಿಸುವೆನು. ನಾನು ಅವರನ್ನು ರಕ್ಷಿಸುವೆನು. ಅವರನ್ನು ರಕ್ಷಿಸಲು ನಾನು ಬಿಲ್ಲುಬಾಣಗಳನ್ನು ಉಪಯೋಗಿಸುವದಿಲ್ಲ. ಅಥವಾ ಯುದ್ಧಾಶ್ವಗಳನ್ನಾಗಲಿ ಸೈನ್ಯವನ್ನಾಗಲಿ ಉಪಯೋಗಿಸುವದಿಲ್ಲ. ನನ್ನ ಸ್ವಂತ ಸಾಮರ್ಥ್ಯದಿಂದಲೇ ನಾನು ಅವರನ್ನು ರಕ್ಷಿಸುವೆನು.”


ರಾಜರುಗಳಿಗೆ ಸಹಾಯಮಾಡಿ ಯುದ್ಧಗಳಲ್ಲಿ ಗೆಲ್ಲಿಸುವವನೂ ನೀನೇ. ನಿನ್ನ ಸೇವಕನಾದ ದಾವೀದನನ್ನು ಅವನ ಶತ್ರುಗಳ ಖಡ್ಗಗಳಿಂದ ರಕ್ಷಿಸಿದವನೂ ನೀನೇ.


ಯೆಹೋವನು ಯಾವಾಗಲೂ ನಿಮ್ಮನ್ನು ನಡೆಸುವನು. ಒಣನೆಲದಲ್ಲಿ ನಿಮ್ಮ ಆತ್ಮಗಳನ್ನು ತೃಪ್ತಿಪಡಿಸುವನು. ನಿಮ್ಮ ಎಲುಬುಗಳಿಗೆ ಬಲವನ್ನು ಕೊಡುವನು. ನೀರಿನಿಂದ ತೇವವಾಗಿರುವ ತೋಟದಂತೆ ನೀವು ಇರುವಿರಿ. ನಿತ್ಯವೂ ನೀರಿರುವ ಬುಗ್ಗೆಯಂತೆ ನೀವಿರುವಿರಿ.


ನನಗೆ ಉಪದೇಶಿಸುತ್ತಾ ನನ್ನನ್ನು ಮುನ್ನಡೆಸು. ಬಳಿಕ ನಿನ್ನ ಮಹಿಮೆಗೆ ನನ್ನನ್ನು ಸೇರಿಸಿಕೊ.


ಈ ದೇವರೇ ಎಂದೆಂದಿಗೂ ನಮ್ಮ ದೇವರು! ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ!


ಹೀಗೆ ಯೆಹೋವನು ಅಂದು ಇಸ್ರೇಲರನ್ನು ರಕ್ಷಿಸಿದನು. ಯುದ್ಧವು ಬೇತಾವೆನಿನ ಆಚೆಯ ತನಕ ನಡೆಯಿತು. ಸೌಲನ ಬಳಿ ಒಟ್ಟು ಹತ್ತು ಸಾವಿರ ಮಂದಿ ಸೈನಿಕರಿದ್ದರು. ಎಫ್ರಾಯೀಮ್ ಬೆಟ್ಟಪ್ರದೇಶದ ಎಲ್ಲಾ ನಗರಗಳಿಗೂ ಯುದ್ಧವು ಹಬ್ಬಿತು.


ತಪ್ಪಿಸಿಕೊಂಡು ಉಳಿದ ಯೆಹೂದ ಕುಲದವರು ಮತ್ತೆ ವೃದ್ಧಿಯಾಗುವರು. ಅವರು ಆಳವಾಗಿ ಬೇರೂರಿ ಫಲವನ್ನು ಫಲಿಸುವರು.


ಆಗ ಯೆಹೋವನು ಅಶ್ಶೂರದ ಅರಸನ ಪಾಳೆಯಕ್ಕೆ ದೇವದೂತನನ್ನು ಕಳುಹಿಸಿದನು. ಆ ದೂತನು ಅಶ್ಶೂರದ ಎಲ್ಲಾ ಸೈನ್ಯದವರನ್ನೂ ಅವರ ಅಧಿಕಾರಿಗಳನ್ನೂ ಸಂಹರಿಸಿದನು. ಆಗ ಅಶ್ಶೂರದ ಅರಸನು ತನ್ನ ಸ್ವಂತ ದೇಶಕ್ಕೆ ಹಿಂತಿರುಗಿದನು. ಅವನ ಜನರು ಅವನ ವಿಷಯದಲ್ಲಿ ನಾಚಿಕೆಪಟ್ಟರು. ಅವನು ತನ್ನ ದೇವರಮಂದಿರದೊಳಕ್ಕೆ ಹೋದಾಗ ಅವನ ಸ್ವಂತ ಮಕ್ಕಳಲ್ಲಿ ಕೆಲವರು ಅವನನ್ನು ಖಡ್ಗದಿಂದ ಸಂಹರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು