Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:3 - ಪರಿಶುದ್ದ ಬೈಬಲ್‌

3 ಅವನು ತನ್ನ ಅಧಿಕಾರಿಗಳನ್ನೂ ಸೇನಾಪತಿಗಳನ್ನೂ ವಿಚಾರಿಸಿದನು. ಪಟ್ಟಣದ ಹೊರಗಿರುವ ಬುಗ್ಗೆಯನ್ನು ನಿಲ್ಲಿಸಿಬಿಡಬೇಕೆಂದು ಅವರೆಲ್ಲರೂ ಆಲೋಚನೆ ಮಾಡಿದರು. ಇದನ್ನು ಮಾಡಿ ಮುಗಿಸಲು ಅಧಿಕಾರಿಗಳೂ ಸೇನಾಪತಿಗಳೂ ಸಹಾಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಪಟ್ಟಣದ ಹೊರಗಿರುವ ಎಲ್ಲಾ ಒರತೆಗಳನ್ನು ಮುಚ್ಚಿಸಬೇಕೆಂದು ಮನಸ್ಸು ಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ಪಟ್ಟಣದ ಹೊರಗಿರುವ ಎಲ್ಲಾ ಬಾವಿಗಳನ್ನು ಮುಚ್ಚಿಸಬೇಕೆಂದು ಮನಸ್ಸುಮಾಡಿ ತನ್ನ ಪ್ರಮುಖರ ಮತ್ತು ಶೂರರ ಮುಂದೆ ಆ ಪ್ರಸ್ತಾಪವೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಪಟ್ಟಣದ ಹೊರಗಿರುವ ಎಲ್ಲಾ ಬಾವಿಗಳನ್ನು ಮುಚ್ಚಿಸಬೇಕೆಂದು ಮನಸ್ಸುಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನಿಟ್ಟು ಅವರ ಸಹಾಯವನ್ನು ಪಡಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಪಟ್ಟಣದ ಹೊರಗಿರುವ ನೀರಿನ ಬುಗ್ಗೆಗಳನ್ನು ಮುಚ್ಚಿಸುವುದಕ್ಕೆ ತನ್ನ ಪ್ರಧಾನರ ಮತ್ತು ತನ್ನ ಪರಾಕ್ರಮಶಾಲಿಗಳ ಸಂಗಡ ಯೋಚಿಸಿಕೊಂಡನು. ಅವರು ಅವನಿಗೆ ಸಹಾಯ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:3
13 ತಿಳಿವುಗಳ ಹೋಲಿಕೆ  

ಯುದ್ಧವನ್ನು ಆರಂಭಿಸುವ ಮೊದಲೇ ಎಚ್ಚರಿಕೆಯಿಂದ ಆಲೋಚಿಸು. ಜಯವನ್ನು ಗಳಿಸಬೇಕಾದರೆ ನಿನಗೆ ಅನೇಕ ಒಳ್ಳೆಯ ಆಲೋಚನೆಗಾರರು ಅಗತ್ಯ.


ಒಳ್ಳೆಯ ಸಮಾಲೋಚನೆಗಳೊಡನೆ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ. ನೀನು ಯುದ್ಧವನ್ನು ಆರಂಭಿಸುವುದಾಗಿದ್ದರೆ, ಮಾರ್ಗದರ್ಶನಕ್ಕಾಗಿ ಒಳ್ಳೆಯವರನ್ನು ಹುಡುಕು.


ಆಲೋಚನೆಯಿಲ್ಲದ ಯೋಜನೆಗಳು ವಿಫಲವಾಗುತ್ತವೆ. ಆಲೋಚಿಸಿ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ.


ಪವಿತ್ರ ಗ್ರಂಥ ಹೇಳುವಂತೆ: “ಪ್ರಭುವಿನ ಮನಸ್ಸನ್ನು ಯಾರು ಬಲ್ಲರು? ದೇವರಿಗೆ ಸಲಹೆಯನ್ನು ಯಾರು ಕೊಡಬಲ್ಲರು?”


ಯೆಹೋವನ ಆತ್ಮಕ್ಕೆ ಆತನು ಮಾಡಬೇಕಾದದ್ದನ್ನು ತಿಳಿಸಿದವರು ಯಾರೂ ಇಲ್ಲ. ಆತನು ಮಾಡಿದ ಕಾರ್ಯಗಳನ್ನು ಹೀಗೆ ಮಾಡಬೇಕೆಂದು ಹೇಳಿದವರಿಲ್ಲ.


ಹಿಜ್ಕೀಯ ಅರಸನೂ ಅಧಿಕಾರಿಗಳೂ ಜೆರುಸಲೇಮಿನ ಸಭೆಯವರೆಲ್ಲರೂ ಎರಡನೆಯ ತಿಂಗಳಲ್ಲಿ ಹಬ್ಬವನ್ನು ಆಚರಿಸಲು ನಿರ್ಧರಿಸಿದರು.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಹಿಜ್ಕೀಯನು ಮಾಡಿದ ಇತರ ಎಲ್ಲಾ ಮಹಾಕಾರ್ಯಗಳನ್ನೂ ಅವನು ನಗರಕ್ಕೆ ಕೆರೆಯಿಂದ ಕೊಳವೆಗಳ ಮೂಲಕ ನೀರಿನ ವ್ಯವಸ್ಥೆಮಾಡಿದ್ದನ್ನೂ ಬರೆಯಲಾಗಿದೆ.


“ಯುದ್ಧದಲ್ಲಿ ನನಗೆ ಸಹಾಯಮಾಡಲು ನನ್ನಲ್ಲಿ ಬೇಕಾದಷ್ಟು ವಿವೇಕವೂ ಬಲವೂ ಇದೆ” ಎಂದು ನೀನು ಹೇಳುವೆ. ಆದರೆ ನೀನು ಯಾರನ್ನು ನಂಬಿಕೊಂಡು ನನಗೆ ವಿರುದ್ಧವಾಗಿ ದಂಗೆ ಎದ್ದಿರುವೆ?


ಜೆರುಸಲೇಮಿನ ಮೇಲೆ ಧಾಳಿ ಮಾಡಲಿಕ್ಕೋಸ್ಕರ ಸನ್ಹೇರೀಬನು ಬಂದಿದ್ದಾನೆಂದು ಹಿಜ್ಕೀಯನಿಗೆ ತಿಳಿಯಿತು.


ಅನೇಕ ಜನರು ಒಟ್ಟಾಗಿ ಬಂದು ದೇಶದ ಮಧ್ಯದಲ್ಲಿ ಹರಿಯುವ ಹಳ್ಳಗಳನ್ನೂ ತೊರೆಗಳನ್ನೂ ಬುಗ್ಗೆಗಳನ್ನೂ ನಿಲ್ಲಿಸಿದರು. ಅಶ್ಶೂರದ ಅರಸನು ಬಂದಾಗ ಅವನಿಗೆ ನೀರು ಸಿಗದಂತೆ ಮಾಡಿದರು.


ನೀರನ್ನು ತಂದು ಪಟ್ಟಣದೊಳಗೆ ಶೇಖರಿಸಿಡು. ಯಾಕೆಂದರೆ ವೈರಿ ಸೈನ್ಯವು ನಿನ್ನ ನಗರವನ್ನು ಮುತ್ತುವವು. ನಗರದೊಳಗೆ ಅನ್ನ ನೀರನ್ನು ಯಾರಿಗೂ ತರಲು ಬಿಡುವುದಿಲ್ಲ. ನಿನ್ನ ಬುರುಜುಗಳನ್ನು ಬಲಪಡಿಸಿಕೊ. ಹೆಚ್ಚು ಇಟ್ಟಿಗೆಗಳನ್ನು ಮಾಡುವಂತೆ ಆವೆಮಣ್ಣನ್ನು ಶೇಖರಿಸು. ಗಾರೆಯನ್ನು ಕಲಸಿಕೊ. ಇಟ್ಟಿಗೆಗಳನ್ನು ಮಾಡುವ ಅಚ್ಚನ್ನು ತೆಗೆದುಕೊ.


ಹಿಜ್ಕೀಯನು ಗೀಹೋನ್ ಬುಗ್ಗೆಯನ್ನು ತಡೆದು ಆ ನೀರು ಪಶ್ಚಿಮದ ಕಡೆಯಲ್ಲಿದ್ದ ದಾವೀದ ನಗರಕ್ಕೆ ನೇರವಾಗಿ ಇಳಿದು ಬರುವಂತೆ ಮಾಡಿದನು. ಅವನು ಕೈಹಾಕಿದ ಕಾರ್ಯಗಳೆಲ್ಲವೂ ಸಫಲವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು