Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:30 - ಪರಿಶುದ್ದ ಬೈಬಲ್‌

30 ಹಿಜ್ಕೀಯನು ಗೀಹೋನ್ ಬುಗ್ಗೆಯನ್ನು ತಡೆದು ಆ ನೀರು ಪಶ್ಚಿಮದ ಕಡೆಯಲ್ಲಿದ್ದ ದಾವೀದ ನಗರಕ್ಕೆ ನೇರವಾಗಿ ಇಳಿದು ಬರುವಂತೆ ಮಾಡಿದನು. ಅವನು ಕೈಹಾಕಿದ ಕಾರ್ಯಗಳೆಲ್ಲವೂ ಸಫಲವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಮೇಲಣ ಗೀಹೋನ್ ಎಂಬ ಬುಗ್ಗೆಗೆ ಕಟ್ಟೆಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪೂರ್ವದಿಕ್ಕಿನ ಕಣಿವೆಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲ ಕಾರ್ಯಗಳಲ್ಲೂ ಯಶಸ್ವಿ ಆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮೇಲಣ ಗೀಹೋನ್ ಎಂಬ ಬುಗ್ಗೆಗೆ ಕಟ್ಟೆಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಸಾರ್ಥಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು, ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:30
11 ತಿಳಿವುಗಳ ಹೋಲಿಕೆ  

ಆಗ ರಾಜನು ಅವರಿಗೆ, “ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.


ಅನೇಕ ಜನರು ಒಟ್ಟಾಗಿ ಬಂದು ದೇಶದ ಮಧ್ಯದಲ್ಲಿ ಹರಿಯುವ ಹಳ್ಳಗಳನ್ನೂ ತೊರೆಗಳನ್ನೂ ಬುಗ್ಗೆಗಳನ್ನೂ ನಿಲ್ಲಿಸಿದರು. ಅಶ್ಶೂರದ ಅರಸನು ಬಂದಾಗ ಅವನಿಗೆ ನೀರು ಸಿಗದಂತೆ ಮಾಡಿದರು.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಹಿಜ್ಕೀಯನು ಮಾಡಿದ ಇತರ ಎಲ್ಲಾ ಮಹಾಕಾರ್ಯಗಳನ್ನೂ ಅವನು ನಗರಕ್ಕೆ ಕೆರೆಯಿಂದ ಕೊಳವೆಗಳ ಮೂಲಕ ನೀರಿನ ವ್ಯವಸ್ಥೆಮಾಡಿದ್ದನ್ನೂ ಬರೆಯಲಾಗಿದೆ.


ನಂತರ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಗೀಹೋನ್ ಬುಗ್ಗೆಯ ಹತ್ತಿರ ಸೊಲೊಮೋನನನ್ನು ಅಭಿಷೇಕಿಸಿದರು. ಅನಂತರ ಅವರು ನಗರಕ್ಕೆ ಹೋದರು. ಅವರನ್ನು ಜನರು ಹಿಂಬಾಲಿಸಿದರು. ಈಗ ನಗರದ ಜನರು ತುಂಬಾ ಸಂತೋಷದಿಂದ ಇದ್ದಾರೆ. ಆ ಶಬ್ದವನ್ನೇ ನೀವು ಕೇಳುತ್ತಿರುವುದು.


ಚಾದೋಕನು, ನಾತಾನನು, ಬೆನಾಯನು ಮತ್ತು ರಾಜನ ಅಧಿಕಾರಿಗಳು ರಾಜನಾದ ದಾವೀದನಿಗೆ ವಿಧೇಯರಾದರು. ಅವರು ಸೊಲೊಮೋನನನ್ನು ರಾಜನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ, ಅವನೊಂದಿಗೆ ಗೀಹೋನಿಗೆ ಹೋದರು.


ಜೆಕರ್ಯನು ಜೀವಿಸುತ್ತಿದ್ದಾಗ ಉಜ್ಜೀಯನು ದೇವರನ್ನು ಅನುಸರಿಸಿದನು. ಅವನು ಉಜ್ಜೀಯನಿಗೆ ದೇವರಿಗೆ ಹೇಗೆ ಭಯಪಡಬೇಕು, ದೇವರನ್ನು ಹೇಗೆ ಗೌರವಿಸಬೇಕೆಂದು ಕಲಿಸಿಕೊಟ್ಟನು. ಉಜ್ಜೀಯನು ದೇವರಿಗೆ ವಿಧೇಯನಾಗಿ ಬಾಳಿದಾಗ ಯೆಹೋವ ದೇವರು ಅವನಿಗೆ ಯಶಸ್ಸನ್ನು ದಯಪಾಲಿಸಿದನು.


ಅವನು ತನ್ನ ಅಧಿಕಾರಿಗಳನ್ನೂ ಸೇನಾಪತಿಗಳನ್ನೂ ವಿಚಾರಿಸಿದನು. ಪಟ್ಟಣದ ಹೊರಗಿರುವ ಬುಗ್ಗೆಯನ್ನು ನಿಲ್ಲಿಸಿಬಿಡಬೇಕೆಂದು ಅವರೆಲ್ಲರೂ ಆಲೋಚನೆ ಮಾಡಿದರು. ಇದನ್ನು ಮಾಡಿ ಮುಗಿಸಲು ಅಧಿಕಾರಿಗಳೂ ಸೇನಾಪತಿಗಳೂ ಸಹಾಯ ಮಾಡಿದರು.


ಇದಾದ ನಂತರ ಮನಸ್ಸೆಯು ದಾವೀದನಗರಕ್ಕೆ ಹೊರಗಿನ ಗೋಡೆಯನ್ನು ಕಟ್ಟಿಸಿದನು. ಈ ಗೋಡೆಯು ಕಿದ್ರೋನಿನಲ್ಲಿದ್ದ ಗೀಹೋನ್ ಬುಗ್ಗೆಯ ಪಶ್ಚಿಮ ದಿಕ್ಕಿನಿಂದ ಮೀನು ಬಾಗಿಲಿನ ಮುಂದೆ ಹೋಗಿ, ಅಲ್ಲಿಂದ ಓಫೆಲ್ ಗುಡ್ಡಕ್ಕೆ ಸುತ್ತುಹಾಕಿತು. ಅವನು ಗೋಡೆಯನ್ನು ಬಹು ಎತ್ತರವಾಗಿ ಕಟ್ಟಿದನು. ಆಮೇಲೆ ಯೆಹೂದದಲ್ಲಿದ್ದ ಎಲ್ಲಾ ಕೋಟೆಗಳಲ್ಲಿ ಸೇನಾಪತಿಗಳನ್ನು ನೇಮಿಸಿದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು