Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:6 - ಪರಿಶುದ್ದ ಬೈಬಲ್‌

6-7 ಹಿಜ್ಕೀಯನು ಸೈನಿಕರಿಗೆಲ್ಲಾ ದಳಪತಿಗಳನ್ನು ನೇಮಿಸಿದನು. ಜೆರುಸಲೇಮಿನ ನಗರದ ಹೆಬ್ಬಾಗಿಲ ಬಳಿಯಲ್ಲಿದ್ದ ಮೈದಾನದಲ್ಲಿ ಹಿಜ್ಕೀಯನು ಸೇನಾಪತಿಗಳೊಂದಿಗೆ ಸಮಾಲೋಚನೆ ನಡಿಸಿದನು; ಅವರನ್ನು ಪ್ರೋತ್ಸಾಹಿಸಿ ಹುರಿದುಂಬಿಸಿದನು. “ಧೈರ್ಯಶಾಲಿಗಳಾಗಿರಿ, ಬಲಗೊಳ್ಳಿರಿ, ಅಶ್ಶೂರದ ಅರಸನಿಗಾಗಲಿ ಅರಸನೊಂದಿಗಿರುವ ಆ ದೊಡ್ಡ ಸೈನ್ಯಕ್ಕಾಗಲಿ ಭಯಪಡಬೇಡಿರಿ. ಅವನಿಗಿಂತಲೂ ಹೆಚ್ಚಾದ ಸಾಮರ್ಥ್ಯ ನಮಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅನಂತರ ಅವನು ಜನರನ್ನು ಮುನ್ನಡೆಸಲು ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಲಿನ ಬಯಲಿನಲ್ಲಿ ಒಟ್ಟಾಗಿ ಸೇರಿಸಿಕೊಂಡು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅನಂತರ ಅವನು ಜನರ ಮೇಲೆ ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಿಲಿನ ಬಯಲಿನಲ್ಲಿ ಕೂಡಿಸಿದನು. ಅವರಿಗೆ, “ಶೂರರಾಗಿರಿ, ಧೈರ್ಯದಿಂದಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅನಂತರ ಅವನು ಜನರ ಮೇಲೆ ಸೇನಾಪತಿಗಳನ್ನು ನೇವಿುಸಿ ಅವರನ್ನು ಊರುಬಾಗಲಿನ ಬೈಲಿನಲ್ಲಿ ಕೂಡಿಸಿಕೊಂಡು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿಗಳನ್ನು ಇರಿಸಿ, ಪಟ್ಟಣದ ಬಾಗಿಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು, ಈ ಮಾತುಗಳಿಂದ ಅವರನ್ನು ಪ್ರೋತ್ಸಾಹಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:6
9 ತಿಳಿವುಗಳ ಹೋಲಿಕೆ  

ದೇವರ ಸೇವೆ ಮಾಡುವದನ್ನು ತಿಳಿದಿದ್ದ ಲೇವಿಯರನ್ನು ಹಿಜ್ಕೀಯನು ಪ್ರೋತ್ಸಾಹಿಸಿದನು. ಜನರು ಏಳು ದಿವಸ ಹಬ್ಬವನ್ನು ಆಚರಿಸಿ ಸಮಾಧಾನಯಜ್ಞವನ್ನು ಸಮರ್ಪಿಸಿದರು; ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿದರು.


ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು, ‘ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.’ ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.”


ಜನರು ಹೋಗಿ ರೆಂಬೆಗಳನ್ನು ತಂದು ತಮಗಾಗಿ ತಾತ್ಕಾಲಿಕ ಬಿಡಾರಗಳನ್ನು ಮಾಡಿಕೊಂಡರು. ಅವರು ಈ ಬಿಡಾರಗಳನ್ನು ತಮ್ಮ ಮನೆಯ ಮೇಲ್ಛಾವಣಿಗೆಯಲ್ಲೂ ಮನೆಯ ಅಂಗಳಗಳಲ್ಲಿಯೂ, ದೇವಾಲಯದ ಅಂಗಳದಲ್ಲಿಯೂ “ಬುಗ್ಗೆ” ಮತ್ತು “ಎಫ್ರಾಯೀಮ್” ಎಂಬ ದ್ವಾರಗಳ ಸಮೀಪದಲ್ಲಿದ್ದ ಬಯಲುಗಳಲ್ಲಿಯೂ ಹಾಕಿಕೊಂಡರು.


ಮೂರು ದಿನಗಳೊಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಿಂದ ಎಲ್ಲಾ ಗಂಡಸರು ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಜೆರುಸಲೇಮಿನ ದೇವಾಲಯದ ಅಂಗಳಕ್ಕೆ ಬಂದು ಸೇರಿದರು. ನಡೆಯಲಿಕ್ಕಿರುವ ಕೂಟದ ಉದ್ದೇಶದಿಂದಲೂ ಆ ದಿವಸ ಬಂದಿದ್ದ ಮಳೆಯ ದೆಸೆಯಿಂದಲೂ ನೆರೆದಿದ್ದ ಜನರು ನಡುಗುತ್ತಿದ್ದರು.


ಶೆಕೆಮನಿಗೆ ದೀನಳ ಮೇಲೆ ಪ್ರೀತಿಯುಂಟಾಗಿ ಆಕೆಯನ್ನು ಮದುವೆ ಮಾಡಿಕೊಳ್ಳಲು ಇಷ್ಟಪಟ್ಟನು. ಅವನು ತನ್ನನ್ನು ಮದುವೆಯಾಗಬೇಕೆಂದು ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.


ಆತನ ಜನರನ್ನು ಆಳುವ ನ್ಯಾಯಾಧಿಪತಿಗಳಿಗೆ ಯೆಹೋವನು ಜ್ಞಾನವನ್ನು ಕೊಡುವನು. ಪುರದ್ವಾರದಲ್ಲಿ ಯುದ್ಧಮಾಡುವ ಆತನ ಜನರಿಗೆ ಯೆಹೋವನು ಬಲವನ್ನು ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು