2 ಪೂರ್ವಕಾಲ ವೃತ್ತಾಂತ 33:13 - ಪರಿಶುದ್ದ ಬೈಬಲ್13 ಯೆಹೋವನು ಮನಸ್ಸೆಯ ಬೇಡಿಕೆಗಳನ್ನು ಕೇಳಿ ಅವನಿಗೆ ಕರುಣೆ ತೋರಿದನು. ಅವನು ಜೆರುಸಲೇಮಿಗೂ ತನ್ನ ಸಿಂಹಾಸನಕ್ಕೂ ಹಿಂತಿರುಗಿ ಬರುವಂತೆ ಮಾಡಿದನು. ಆಗ ಮನಸ್ಸೆಯು ಯೆಹೋವನೇ ನಿಜ ದೇವರೆಂದು ಅರಿತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರು ಆಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿದರು. ಅವನನ್ನು ಮರಳಿ ಜೆರುಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟರು. ಆಗ ಸರ್ವೇಶ್ವರಸ್ವಾಮಿಯೇ ದೇವರು ಎಂಬುದು ಅವನಿಗೆ ಮನದಟ್ಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆತನು ಲಾಲಿಸಿ ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರಿಗಿ ಯೆರೂಸಲೇವಿುಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬದು ಮನಸ್ಸೆಗೆ ಮಂದಟ್ಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಯೆಹೋವ ದೇವರು ಕನಿಕರಪಟ್ಟು, ಅವನ ಬಿನ್ನಹವನ್ನು ಕೇಳಿ, ಯೆರೂಸಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರುಗಿ ಬರಮಾಡಿದರು. ಆಗ ಯೆಹೋವ ದೇವರೇ ದೇವರೆಂದು ಮನಸ್ಸೆಯು ತಿಳಿದುಕೊಂಡನು. ಅಧ್ಯಾಯವನ್ನು ನೋಡಿ |
ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.
ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.