Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:9 - ಪರಿಶುದ್ದ ಬೈಬಲ್‌

9 ಮನಸ್ಸೆಯು ಯೆಹೂದದ ಜನರನ್ನೂ ಜೆರುಸಲೇಮಿನಲ್ಲಿದ್ದ ಜನರನ್ನೂ ಕೆಟ್ಟಕಾರ್ಯಗಳನ್ನು ಮಾಡಲು ಪ್ರೋತ್ಸಾಹಿಸಿದನು. ಇಸ್ರೇಲರು ಬರುವದಕ್ಕಿಂತ ಮೊದಲು ಆ ದೇಶದಲ್ಲಿದ್ದ ಜನರಿಗಿಂತಲೂ ಅತ್ಯಂತ ಕೆಟ್ಟವನಾಗಿ ವರ್ತಿಸಿದನು. ಆ ದೇಶದಲ್ಲಿದ್ದ ಜನರನ್ನು ಯೆಹೋವನು ನಾಶಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದರೆ ಯೆಹೂದ್ಯರೂ ಜೆರುಸಲೇಮಿನವರೂ ಮನಸ್ಸೆಯಿಂದ ಪ್ರಚೋದಿತರಾಗಿ ಇಸ್ರಯೇಲರ ಮುಂದೆಯೇ ಸರ್ವೇಶ್ವರನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ಯೆಹೂದ್ಯರೂ ಯೆರೂಸಲೇವಿುನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲ್ಯರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಇಸ್ರಾಯೇಲರ ಮುಂದೆಯೇ ಯೆಹೋವ ದೇವರಿಂದ ನಾಶಹೊಂದಿದ ಇತರ ಜನಾಂಗಗಳಿಗಿಂತ ಅಧಿಕವಾಗಿ ಕೆಟ್ಟದ್ದನ್ನು ಮಾಡಲು ಮನಸ್ಸೆಯು ಅವರನ್ನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:9
18 ತಿಳಿವುಗಳ ಹೋಲಿಕೆ  

ಅಧಿಪತಿಯು ಸುಳ್ಳುಮಾತುಗಳಿಗೆ ಕಿವಿಗೊಟ್ಟರೆ, ಅವನ ಅಧೀನದಲ್ಲಿರುವ ಅಧಿಕಾರಿಗಳೆಲ್ಲರು ಕೆಡುಕರಾಗುವರು.


ಯೆಹೋವನು ದುಷ್ಟತನವೆಂದು ಪರಿಗಣಿಸಿದ್ದನ್ನೇ ಮನಸ್ಸೆ ಮಾಡಿದನು. ಇಸ್ರೇಲರು ಆ ದೇಶವನ್ನು ವಶಪಡಿಸುವದಕ್ಕಿಂತ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನರ ಪಾಪಕೃತ್ಯಗಳನ್ನು ಅನುಸರಿಸಿದನು.


ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”


ಆದರೆ ಯೆಹೋವನು ಯೆಹೂದದ ಜನರ ಮೇಲೆ ಕೋಪಗೊಳ್ಳುವುದನ್ನು ನಿಲ್ಲಿಸಲೇ ಇಲ್ಲ. ಮನಸ್ಸೆಯು ಮಾಡಿದ ಕಾರ್ಯಗಳೆಲ್ಲವುಗಳಿಂದ ಯೆಹೋವನು ಅವರ ಮೇಲೆ ಇನ್ನೂ ಕೋಪಗೊಂಡಿದ್ದನು.


ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.’”


ನಾದಾಬನು ಯೆಹೋವನ ವಿರುದ್ಧ ಕೆಟ್ಟಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನೂ ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.


ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದ್ದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.


ಆಗ ನಾನು ನಿಮ್ಮನ್ನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಪ್ರದೇಶಕ್ಕೆ ಕರೆತಂದೆನು. ಆ ಜನರು ನಿಮ್ಮೊಂದಿಗೆ ಯುದ್ಧಮಾಡಿದರು. ಆದರೆ ನೀವು ಅವರನ್ನು ಸೋಲಿಸುವಂತೆ ನಾನು ಮಾಡಿದೆ. ಆ ಜನರನ್ನು ನಾಶಮಾಡುವ ಶಕ್ತಿಯನ್ನು ನಾನು ನಿಮಗೆ ಕೊಟ್ಟೆನು. ಆಗ ನೀವು ಆ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡಿರಿ.


ಜಮ್‌ಜುಮ್ಯರು ತುಂಬಾ ಬಲಶಾಲಿಗಳಾಗಿದ್ದರು; ಅನಾಕ್ಯರಂತೆ ಉನ್ನತ ಪುರುಷರಾಗಿದ್ದರು. ಆದರೆ ಯೆಹೋವನು ಜಮ್‌ಜುಮ್ಯರನ್ನು ಸೋಲಿಸಲು ಅಮೋರಿಯರಿಗೆ ಸಹಾಯ ಮಾಡಿದನು. ಅಮೋರಿಯರು ಆ ದೇಶವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಂಡು ಈಗ ಅದರಲ್ಲಿ ನೆಲೆಸಿರುತ್ತಾರೆ.


“ಆ ದುರಾಚಾರಗಳಲ್ಲಿ ಯಾವುದರಿಂದಲೂ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ. ನಾನು ಜನಾಂಗಗಳನ್ನು ಅವರ ದೇಶಗಳಿಂದ ಹೊರಡಿಸಿ ಅವರ ದೇಶವನ್ನು ನಿಮಗೆ ಕೊಡುತ್ತಿದ್ದೇನೆ. ಯಾಕೆಂದರೆ ಅವರು ಅಂಥ ಭಯಂಕರ ಪಾಪಗಳನ್ನು ಮಾಡಿದರು.


ನಾನು ಮೋಶೆಯ ಮೂಲಕ ಕೊಟ್ಟಿರುವ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಇಸ್ರೇಲರು ವಿಧೇಯರಾಗಿರುವುದಾದರೆ, ಅವರ ಪೂರ್ವಿಕರಿಗೆ ಕೊಡಲು ನಾನು ಆರಿಸಿಕೊಂಡ ದೇಶದಿಂದ ಅವರನ್ನು ತೆಗೆದುಬಿಡುವುದೇ ಇಲ್ಲ” ಎಂದು ಹೇಳಿದನು.


ಯೆಹೋವನು ಮನಸ್ಸೆಯ ಮತ್ತು ಅವನ ಜನರ ಸಂಗಡ ಮಾತಾಡಿದರೂ ಅವರು ಆತನ ಮಾತನ್ನು ಕೇಳಲಿಲ್ಲ.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ: “ನೀವು ಸುತ್ತಲಿರುವ ಜನಾಂಗಗಳಿಗಿಂತ ಹೆಚ್ಚು ಕೆಡುಕನ್ನು ಮಾಡಿದ್ದೀರಿ. ನೀವು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ; ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ನಿಮ್ಮ ಸುತ್ತಲಿರುವ ಜನಾಂಗಗಳ ನಿಯಮಗಳನ್ನೂ ಅನುಸರಿಸಲಿಲ್ಲ.”


ಅರಸನಾದ ಆಹಾಜನು ತನ್ನ ಜನರನ್ನು ಪಾಪಮಾಡಲು ಪ್ರೋತ್ಸಾಹಿಸಿದ್ದಕ್ಕಾಗಿ ಯೆಹೋವನು ಯೆಹೂದ ದೇಶಕ್ಕೆ ಕಷ್ಟವನ್ನು ಕೊಟ್ಟನು. ಆಹಾಜನು ದೇವರಿಗೆ ದ್ರೋಹಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು