Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:9 - ಪರಿಶುದ್ದ ಬೈಬಲ್‌

9 ಜನರು ದೇವಾಲಯದ ದುರಸ್ತಿಗಾಗಿ ಅರ್ಪಿಸಿದ್ದ ಕಾಣಿಕೆಯನ್ನು ಅವರು ಮಹಾಯಾಜಕನಾದ ಹಿಲ್ಕೀಯನಿಗೆ ತಂದುಕೊಟ್ಟರು. ಮನಸ್ಸೆ, ಎಫ್ರಾಯೀಮ್ ಮತ್ತು ಇಸ್ರೇಲ್ ರಾಜ್ಯದ ಜನರು ಕೊಟ್ಟ ಕಾಣಿಕೆಯನ್ನು ದ್ವಾರಪಾಲಕರಾದ ಲೇವಿಯರು ಒಟ್ಟುಗೂಡಿಸಿದರು. ಯೆಹೂದ, ಬೆನ್ಯಾಮೀನ್ ಕುಲದವರೂ ಜೆರುಸಲೇಮಿನಲ್ಲಿ ವಾಸಿಸುವರೂ ಕೊಟ್ಟ ಕಾಣಿಕೆಗಳನ್ನು ಅವರು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ, ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ, ಯೆರೂಸಲೇಮಿನವರಿಂದಲೂ ಕೂಡಿಸಿದ್ದ ಹಣವನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇವರು ಮಹಾಯಾಜಕ ಹಿಲ್ಕೀಯನ ಬಳಿಗೆ ಹೋಗಿ, ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು, ಅಂದರೆ, ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಯಿಮ್ ಮುಂತಾದ ಇಸ್ರಯೇಲ್‍ಕುಲಗಳಲ್ಲಿ ಉಳಿದವರಿಂದ ಎಲ್ಲ ಯೆಹೂದ ಬೆನ್ಯಾಮೀನ್ಯರಿಂದ ಹಾಗು ಜೆರುಸಲೇಮಿನವರಿಂದ ಸಂಗ್ರಹಿಸಿದ್ದ ಹಣವನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕೋಸ್ಕರ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ ಯೆರೂಸಲೇವಿುನವರಿಂಲೂ ಕೂಡಿಸಿದ್ದ ಹಣವನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇವರು ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಜನರಿಂದಲೂ, ಇಸ್ರಾಯೇಲಿನ ಉಳಿದವರಿಂದಲೂ, ಯೆಹೂದ ಬೆನ್ಯಾಮೀನರಿಂದಲೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಂದಲೂ ಕೂಡಿಸಿದ ಹಣವನ್ನು ತೆಗೆದುಕೊಂಡು ದೇವರ ಆಲಯಕ್ಕೆ ತಂದು ಮಹಾಯಾಜಕನಾದ ಹಿಲ್ಕೀಯನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:9
13 ತಿಳಿವುಗಳ ಹೋಲಿಕೆ  

ಯೋಷೀಯನ ಆಡಳಿತಾಧಿಕಾರಿಗಳೂ ಯಾಜಕರಿಗೆ, ಲೇವಿಯರಿಗೆ ಮತ್ತು ಜನರಿಗೆ ಧಾರಾಳವಾಗಿ ಪಶುಗಳನ್ನು ಕೊಟ್ಟರು. ಮಹಾಯಾಜಕನಾದ ಹಿಲ್ಕೀಯ, ಜೆಕರ್ಯ ಮತ್ತು ಯೆಹೀಯೇಲನು ದೇವಾಲಯದ ಮುಖ್ಯಸ್ತರಾಗಿದ್ದರು. ಅವರು ಯಾಜಕರಿಗೆ ಎರಡು ಸಾವಿರದ ಆರು ನೂರು ಕುರಿಗಳನ್ನು ಮತ್ತು ಆಡುಗಳನ್ನು, ಮೂನ್ನೂರು ಹೋರಿಗಳನ್ನು ಪಸ್ಕಹಬ್ಬದ ಯಜ್ಞಗಳಿಗಾಗಿ ಕೊಟ್ಟರು.


ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್ ಮತ್ತು ಜೆಬುಲೂನಿನಿಂದ ಬಂದಿದ್ದ ಎಷ್ಟೋ ಮಂದಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಸಿದ್ಧಮಾಡಿಕೊಂಡಿರಲಿಲ್ಲ. ಅವರು ಪಸ್ಕದ ಕುರಿಮರಿಯನ್ನು ಯೋಗ್ಯವಾದ ರೀತಿಯಲ್ಲಿ ತಿನ್ನಲಿಲ್ಲ. ಆದರೆ ಹಿಜ್ಕೀಯನು ಅಂಥವರಿಗೋಸ್ಕರವಾಗಿ, “ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ಇವರು ಯೋಗ್ಯವಾದ ರೀತಿಯಲ್ಲಿ ನಿನ್ನನ್ನು ಆರಾಧಿಸಲು ಬಂದಿದ್ದಾರೆ. ಆದರೆ ಧರ್ಮಶಾಸ್ತ್ರದ ಪ್ರಕಾರ ಅವರು ತಮ್ಮನ್ನು ಶುದ್ಧ ಮಾಡಿಕೊಳ್ಳಲಿಲ್ಲ. ದಯಮಾಡಿ ಅವರನ್ನು ಕ್ಷಮಿಸು. ನಮ್ಮ ಪಿತೃಗಳು ವಿಧೇಯರಾಗಿದ್ದ ದೇವರೇ, ಜನರು ಮೋಶೆಯ ನಿಯಮಕ್ಕನುಸಾರವಾಗಿ ತಮ್ಮನ್ನು ಶುದ್ಧಿ ಮಾಡಿಕೊಂಡಿಲ್ಲದಿದ್ದರೂ ನೀನು ಅವರನ್ನು ದಯವಿಟ್ಟು ಕ್ಷಮಿಸು” ಎಂದು ಪ್ರಾರ್ಥಿಸಿದನು.


ಸಂದೇಶಕಾರರು ಎಫ್ರಾಯೀಮ್ ಮತ್ತು ಮನಸ್ಸೆ ಪ್ರಾಂತ್ಯಗಳ ಪ್ರತಿಯೊಂದು ಪಟ್ಟಣಗಳಿಗೆ ಹೋದರು. ಜೆಬುಲೂನ್ ಪ್ರಾಂತ್ಯಕ್ಕೂ ಹೋದರು. ಆದರೆ ಜನರು ಸಂದೇಶಕರನ್ನು ಗೇಲಿ ಮಾಡಿದರು.


ಸಹೋದರ ಸಹೋದರಿಯರೇ, ಒಳ್ಳೆಯದಾದ ಮತ್ತು ಸ್ತುತಿಗೆ ಯೋಗ್ಯವಾದ ಸಂಗತಿಗಳ ಬಗ್ಗೆ ಆಲೋಚಿಸಿರಿ. ಸತ್ಯವಾದ, ಮಾನ್ಯವಾದ, ನ್ಯಾಯವಾದ, ಶುದ್ಧವಾದ, ಸುಂದರವಾದ ಮತ್ತು ಗೌರವಯುತವಾದ ವಿಷಯಗಳ ಬಗ್ಗೆ ಆಲೋಚಿಸಿರಿ.


ಹಿಲ್ಕೀಯನೂ ಅರಸನ ಸೇವಕರೂ ಪ್ರವಾದಿನಿಯಾಗಿದ್ದ ಹುಲ್ದಳ ಬಳಿಗೆ ಹೋದರು. ಆಕೆ ತೊಕ್ಹತನ ಮಗನಾದ ಶಲ್ಲೂಮನ ಹೆಂಡತಿಯಾಗಿದ್ದಳು. ತೊಕ್ಹತನು ಹಸ್ರನ ಮಗ. ಇವನು ಅರಸನ ಬಟ್ಟೆಬರೆಗಳ ಮುಖ್ಯಸ್ತನಾಗಿದ್ದನು. ಹುಲ್ದಳು ಜೆರುಸಲೇಮಿನ ಹೊಸ ಬಡಾವಣೆಯಲ್ಲಿ ವಾಸ ಮಾಡುತ್ತಿದ್ದಳು. ಅರಸನು ಹೇಳಿದ್ದನ್ನೆಲ್ಲಾ ಸೇವಕರು ಆಕೆಗೆ ತಿಳಿಸಿದರು.


ಆಗ ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಕಾರ್ಯದರ್ಶಿಯಾದ ಶಾಫಾನ್ ಮತ್ತು ಸೇವಕನಾದ ಅಸಾಯ ಇವರಿಗೆ ಹೇಳಿದ್ದೇನೆಂದರೆ,


ಎಂದು ಹೇಳಿ ಆ ಪುಸ್ತಕವನ್ನು ಓದತೊಡಗಿದನು. ಅವನು ಅರಸನ ಮುಂದೆ ನಿಂತುಕೊಂಡು ಓದುತ್ತಿರಲು


ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.


ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.


ದೇವಾಲಯದ ಕೆಲಸ ಮಾಡಿದವರಿಗೆ ಲೇವಿಯರು ಹಣವನ್ನು ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು