Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:13 - ಪರಿಶುದ್ದ ಬೈಬಲ್‌

13 ಲೇವಿಯರು ಪಸ್ಕದ ಪಶುಗಳ ಮಾಂಸವನ್ನು ಕಟ್ಟಳೆಯ ಪ್ರಕಾರ ಬೆಂಕಿಯಲ್ಲಿ ಸುಟ್ಟರು. ಪರಿಶುದ್ಧ ಯಜ್ಞದ ಮಾಂಸವನ್ನು ಪಾತ್ರೆಗಳಲ್ಲಿ ಮತ್ತು ಹಂಡೆಗಳಲ್ಲಿ ಬೇಯಿಸಿದರು. ಆಮೇಲೆ ಅವುಗಳನ್ನು ಜನರಿಗೆ ಹಂಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಮೇಲೆ ಲೇವಿಯರು ಪಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟು ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ, ಬಾನೆ, ಹಂಡೆಗಳಲ್ಲಿ ಬೇಯಿಸಿ, ಬೇಗನೆ ತಂದು ಜನರಿಗೆ ಬಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಮೇಲೆ ಲೇವಿಯರು ಪಾಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟರು; ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ, ಬಾನೆ, ಹಂಡೆಗಳಲ್ಲಿ ಬೇಯಿಸಿ, ಬೇಗನೆ ತಂದು ಜನರಿಗೆ ಬಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಮೇಲೆ ಲೇವಿಯರು ಪಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟು ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ ಬಾನೆ ಹಂಡೆಗಳಲ್ಲಿ ಬೇಯಿಸಿ ಬೇಗನೆ ತಂದು ಜನರಿಗೆ ಬಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೀಗೆ ಕಟ್ಟಳೆಯ ಪ್ರಕಾರ ಪಸ್ಕದ ಮಾಂಸವನ್ನು ಬೆಂಕಿಯಿಂದ ಸುಟ್ಟರು. ಆದರೆ ಪರಿಶುದ್ಧವಾದವುಗಳನ್ನು ಗಡಿಗೆಗಳಲ್ಲಿಯೂ, ತಪ್ಪಲೆಗಳಲ್ಲಿಯೂ, ಕೊಪ್ಪರಿಗೆಗಳಲ್ಲಿಯೂ ಬೇಯಿಸಿ, ಶೀಘ್ರವಾಗಿ ಜನರೆಲ್ಲರಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:13
11 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಪಸ್ಕದ ಪಶುವನ್ನು ಅಡಿಗೆ ಮಾಡಿ ತಿನ್ನಬೇಕು. ಆಮೇಲೆ ಮುಂಜಾನೆ ನೀವು ನಿಮ್ಮನಿಮ್ಮ ಮನೆಗಳಿಗೆ ಹೋಗಬಹುದು.


ಪಾಪಪರಿಹಾರಕ ಯಜ್ಞವನ್ನು ಮಣ್ಣಿನ ಮಡಕೆಯಲ್ಲಿ ಬೇಯಿಸಿದರೆ, ಆ ಮಡಕೆಯನ್ನು ಒಡೆದುಹಾಕಬೇಕು. ಪಾಪಪರಿಹಾರಕ ಯಜ್ಞವನ್ನು ತಾಮ್ರದ ಪಾತ್ರೆಯಲ್ಲಿ ಬೇಯಿಸಿದರೆ, ಆ ಪಾತ್ರೆಯನ್ನು ಉಜ್ಜಿ ನೀರಿನಲ್ಲಿ ತೊಳೆಯಬೇಕು.


ನೀವು ಪ್ರಭುವಿಗೋಸ್ಕರ ಸೇವೆಮಾಡುವುದು ಅಗತ್ಯವಿರುವಾಗ ಸೋಮಾರಿಗಳಾಗಿರಬೇಡಿರಿ. ಆತ್ಮಿಕವಾದ ಉತ್ಸಾಹದಿಂದ ಆತನ ಸೇವೆಮಾಡಿರಿ.


ನೆಲದ ಮೇಲೆ ಸುರಿದ ನೀರಿನಂತೆ ನನ್ನ ಬಲವು ಇಲ್ಲವಾಗಿದೆ; ನನ್ನ ಮೂಳೆಗಳೆಲ್ಲಾ ಸಡಿಲಗೊಂಡಿವೆ; ಹೃದಯವು ಮೇಣದಂತೆ ಕರಗಿಹೋಗಿದೆ.


“ನಾಜೀರನು ತನ್ನ ತಲೆಕೂದಲನ್ನು ಕ್ಷೌರಮಾಡಿಸಿಕೊಂಡ ನಂತರ, ಯಾಜಕನು ಅವನಿಗೆ ಆ ಟಗರಿನ ಬೆಂದ ಮುಂದೊಡೆಯನ್ನೂ ಪುಟ್ಟಿಯಲ್ಲಿನ ಒಂದು ಹುಳಿಯಿಲ್ಲದ ಸಿಹಿರೊಟ್ಟಿಯನ್ನೂ ಒಂದು ಹುಳಿಯಿಲ್ಲದ ತೆಳುವಾದ ರೊಟ್ಟಿಯನ್ನೂ ಅವನ ಕೈಯಲ್ಲಿ ಇಡಬೇಕು.


ಆಮೇಲೆ ಬೇರೆಬೇರೆ ಕುಲಗಳವರಿಗೆ ಸರ್ವಾಂಗಹೋಮವನ್ನರ್ಪಿಸಲು ಪಶುಗಳನ್ನು ಕೊಟ್ಟರು. ಈ ಸರ್ವಾಂಗಹೋಮವು ಮೋಶೆಯ ಕಟ್ಟಳೆಗನುಸಾರವಾಗಿ ನಡೆಯಿತು.


ಬಳಿಕ ಲೇವಿಯರು ತಮಗಾಗಿಯೂ ಆರೋನನ ಸಂತತಿಯವರಾದ ಯಾಜಕರಿಗಾಗಿಯೂ ಮಾಂಸವನ್ನು ಸಿದ್ಧಮಾಡಿದರು. ಆ ಯಾಜಕರು ರಾತ್ರಿ ತನಕವೂ ಕೆಲಸದಲ್ಲಿ ನಿರತರಾಗಿದ್ದರು; ಸರ್ವಾಂಗಹೋಮಗಳನ್ನೂ ಪಶುಗಳ ಕೊಬ್ಬನ್ನೂ ಹೋಮಮಾಡುತ್ತಾ ಇದ್ದರು.


ಅವನು ನನಗೆ ಹೇಳಿದ್ದೇನೆಂದರೆ, “ಈ ಸ್ಥಳದಲ್ಲಿ ಯಾಜಕರು ದೋಷಪರಿಹಾರಕ ಮತ್ತು ಪಾಪಪರಿಹಾರಕಯಜ್ಞದ ಮಾಂಸಗಳನ್ನು ಬೇಯಿಸುವರು. ಇದೇ ಸ್ಥಳದಲ್ಲಿ ಧಾನ್ಯಸಮರ್ಪಣೆಯ ಹಿಟ್ಟಿನಿಂದ ರೊಟ್ಟಿಯನ್ನು ಸುಡುವರು. ಇದನ್ನು ಇಲ್ಲಿಯೇ ಯಾಕೆ ಮಾಡುತ್ತಾರೆಂದರೆ ಅವರು ಹೊರಗಿನ ಪ್ರಾಕಾರದೊಳಗೆ ಆ ಪವಿತ್ರ ವಸ್ತುವನ್ನು ತರುವ ಅವಶ್ಯಕತೆ ಇರುವದಿಲ್ಲ. ಸಾರ್ವಜನಿಕರು ಕೂಡುವ ಸ್ಥಳದಲ್ಲಿ ಆ ಪವಿತ್ರ ವಸ್ತುವನ್ನು ತರಬಾರದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು